July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬೃಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ತೆರವುಗೊಳಿಸುವಂತೆ ಹರೀಶ್ ಕಾರಿಂಜ ಒತ್ತಾಯ

ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬ್ರಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ರಸ್ತೆಗೆ ತಗುವ ರೀತಿಯಲ್ಲಿ ಇದೆ. ಗಾಳಿ ಮಳೆಗೆ ರಸ್ತೆಗೆ ಬೀಳುವ ಹಂತದಲ್ಲಿರುವ ಮರಗಳನ್ನು ಶೀಘ್ರದಲ್ಲಿ ಅರಣ್ಯ ಇಲಾಖೆ ತೆರವು ಮಾಡುವುದು ಸೂಕ್ತ ಎಂದು ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಅಧ್ಯಕ್ಷರಾದ ಹರೀಶ್ ಕಾರಿಂಜ ತಿಳಿಸಿದ್ದಾರೆ.

ಈ ರಸ್ತೆಯಲ್ಲಿ ಅಂಗನವಾಡಿ ಮಕ್ಕಳು ಶಾಲಾ ಕಾಲೇಜ್ ಮಕ್ಕಳು ಸಾರ್ವಜನಿಕರು ನಡೆದು ಕೊಂಡು ಹೋಗುತ್ತಿರುತ್ತಾರೆ. ಜೋರಾದ ಗಾಳಿ ಬೀಸಿದರೆ ರಸ್ತೆಯಲ್ಲಿ ಸಂಚಾರಿಸುವ ವಾಹನಗಳು ಮತ್ತು ಅದರಲ್ಲಿರುವ ಪ್ರಯಾಣಿಕರ ಜೀವಕ್ಕೆ ಅಪಾಯಕಾರಿ.

ಈಗಾಗಲೇ ವರ್ಷಗಳ ಹಿಂದೆಯೇ ಕುಲಾಲ ಮಂದಿರದ ಮೂಲಕ ಲಿಖಿತವಾಗಿ ಅರಣ್ಯ ಇಲಾಖೆ ಅರ್ಜಿ ಸಲ್ಲಿಸಿದ್ದು, ಮತ್ತು ತಾಲೂಕು ವಿಪತ್ತು ನಿರ್ವಹಣಾ ತಂಡಕ್ಕೆ ಕುವೆಟ್ಟು ಅಭಿವೃದ್ಧಿ ಅಧಿಕಾರಿಗಳ ಮೂಲಕ ಮಾಹಿತಿಯನ್ನು ರವನಿಸಲಾಗಿದೆ. ಈ ಬಗ್ಗೆ ಅರಣ್ಯ ಇಲಾಖೆ, ಲೋಕೋಪಯೋಗಿ ಇಲಾಖೆ, ತಾಲೂಕು ಆಡಳಿತ ಎಚ್ಚೆತ್ತುಕೊಂಡು ಮರಗಳನ್ನು ಶೀಘ್ರದಲ್ಲಿ ತೆರವು ಕಾರ್ಯ ಮಾಡಬೇಕು ಎಂದು ಸಾರ್ವಜನಿಕರ ಪರವಾಗಿ ಬೆಳ್ತಂಗಡಿ ಸುದ್ದಿ ಉದಯ ಪತ್ರಿಕೆಯ ಮೂಲಕ ಎಲ್ಲಾ ಅಧಿಕಾರಿಗಳಲ್ಲಿ ಹರೀಶ್ ಕಾರಿಂಜ ವಿನಂತಿಸಿದ್ದಾರೆ.

Related posts

ಸೌತಡ್ಕ ಬಯಲು ಗಣಪನಿಗೆ ವಾರ್ಷಿಕ ಮೂಡಪ್ಪ ಸೇವೆಯ ಸಂಭ್ರಮ   

Suddi Udaya

ಕೊಕ್ಕಡ ಗ್ರಾಮದ ರೈತರ ವತಿಯಿಂದ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆ

Suddi Udaya

ಫೆ.13-22: ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಶ್ರೀ ಗುರುದೇವ ಸಹಕಾರ ಸಂಘದ 28ನೇ ಶಾಖೆ ಗುರುಪುರ-ಕೈಕಂಬದಲ್ಲಿ ಉದ್ಘಾಟನೆ

Suddi Udaya

ಕಡಮಗುಂಡಿ ಜಲಪಾತ, ನೇತ್ರಾವತಿ ಪೀಕ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya
error: Content is protected !!