May 3, 2025
Uncategorized

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಖಂಡನೆ: ಜಿಲ್ಲಾ ಬಂದ್‌ಗೆ ಹಿಂದೂ ಸಂಘಟನೆಗಳ ಕರೆ : ಬೆಳ್ತಂಗಡಿ ತಾಲೂಕಿನ ಪೇಟೆಗಳಲ್ಲಿ ಭಾಗಶಃ ಅಂಗಡಿ-ಮುಂಗಟ್ಟುಗಳು ಬಂದ್

ಬೆಳ್ತಂಗಡಿಯಲ್ಲಿ ಅಂಗಡಿ ಮುಗ್ಗಟ್ಟುಗಳು ಬಂದ್

ಮದ್ದಡ್ಕದಲ್ಲಿ ಅಂಗಡಿ ಮುಂಗಟ್ಟು ಬಂದ್

ಬೆಳ್ತಂಗಡಿ: ಬಜ್ಪೆಯ ಕಿನ್ನಿಪದವು ಎಂಬಲ್ಲಿ ಬಿಜೆಪಿ ಕಾರ್ಯಕರ್ತ ಸುಹಾಸ್ ಶೆಟ್ಟಿ ಎಂಬವರನ್ನು ನಿನ್ನೆ ರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕಡಿದು ಕೊಲೆ ನಡೆಸಿರುವುದನ್ನು ಖಂಡಿಸಿ ವಿವಿಧ ಹಿಂದೂ ಸಂಘಟನೆಗಳು ನೀಡಿದ ಜಿಲ್ಲಾ ಬಂದ್ ಕರೆಯಂತೆ ಬೆಳ್ತಂಗಡಿ ತಾಲೂಕಿನ ಉಜಿರೆ, ಧರ್ಮಸ್ಥಳ, ಗುರುವಾಯಕೆರೆ, ಮಡಂತ್ಯಾರು, ಶಿಶಿಲ ಸೇರಿದಂತೆ ಪ್ರಮುಖ ಪೇಟೆಗಳಲ್ಲಿ ಭಾಗಶಃ ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಬಂದ್ ಆಗಿದೆ. ಕೆಲವು ಕಡೆಗಳಲ್ಲಿ ಅಂಗಡಿ ಮುಂಗಟ್ಟುಗಳು ತೆರೆದುಕೊಂಡಿದ್ದು, ಎಂದಿನಂತೆ ವ್ಯಾಪಾರ ನಡೆಸುತ್ತಿವೆ.

ಮಡಂತ್ಯಾರು ಅಂಗಡಿ ಮುಗ್ಗಟ್ಟುಗಳು ಬಂದ್

ನೆರಿಯಾದಲ್ಲಿ ಅಂಗಡಿ ಮುಗ್ಗಟ್ಟುಗಳು ಬಂದ್

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮೇ 6 ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಹಿಂದೂ ಸಂಘಟನೆಗಳು ಜಿಲ್ಲಾ ಬಂದ್‌ಗೆ ಕರೆ ನೀಡಿದ್ದು, ಬೆಳ್ತಂಗಡಿಯಲ್ಲಿ ವಿಶ್ವಹಿಂದೂ ಪರಿಷತ್, ಬಜರಂಗದಳ ಹಾಗೂ ಭಾರತೀಯ ಜನತಾ ಪಾರ್ಟಿ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದೆ. ತಾಲೂಕಿನ ಮಡಂತ್ಯಾರಿನಲ್ಲಿ ಅಂಗಡಿ-ಮುಂಗಟ್ಟುಗಳು ಬಹುತೇಕ ಬಂದ್ ಆಗಿದೆ. ಉಜಿರೆ ಹಾಗೂ ಬೆಳ್ತಂಗಡಿಯಲ್ಲಿ ಕೆಲವೊಂದು ಅಂಗಡಿಗಳನ್ನು ಬಿಟ್ಟರೆ ಉಳಿದವು ಬಂದ್ ಆಗಿದೆ. ಅಲ್ಲಲ್ಲಿ ಹೋಟೇಲ್‌ಗಳು ಕೆಲವೊದು ಸಣ್ಣ-ಪುಟ್ಟ ಅಂಗಡಿಗಳು ತೆರೆದುಕೊಂಡು ಎಂದಿನಂತೆ ವ್ಯಾಪಾರ ನಡೆಸುತ್ತಿವೆ.

ಉಜಿರೆಯಲ್ಲಿ ಅಂಗಡಿ ಮುಗ್ಗಟ್ಟುಗಳು ಬಂದ್

ಶಿಶಿಲದಲ್ಲಿ ಅಂಗಡಿ ಮುಗ್ಗಟ್ಟುಗಳು ಬಂದ್

ಬಂದ್ ಕರೆ ಹಿನ್ನಲೆಯಲ್ಲಿ ತಾಲೂಕಿನಲ್ಲಿ ಬೆಳಿಗ್ಗೆ ಬಸ್‌ಗಳಿಲ್ಲದೆ ಶಾಲಾ ಕಾಲೇಜುಗಳಿಗೆ ಹೋಗುವ ಮಕ್ಕಳು ಪರದಾಟ ನಡೆಸಬೇಕಾಯಿತು. ಕೆಲವೊಂದು ಶಾಲೆಗಳಿಗೆ ಮಕ್ಕಳು ಬಂದು ಹಿಂತಿರುಗಿ ಮನೆಗೆ ಹೋಗಿದ್ದಾರೆ. ತಾಲೂಕಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯಂತೆ ತಾಲೂಕಿನ ಎಲ್ಲಾ ಪೊಲೀಸ್ ಠಾಣೆಯ ಪೊಲೀಸರು ಬಂದೋಬಸ್ತ್ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.

Related posts

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಇಂದಬೆಟ್ಟು: ಬಂಗಾಡಿ ನಿವಾಸಿ ಜ್ವರದಿಂದ ಬಳಲಿ ಅವಿವಾಹಿತ ವಿಶ್ವನಾಥ ನಿಧನ

Suddi Udaya

ಅರಣ್ಯ ಇಲಾಖೆಯಿಂದ ಪ್ರಗತಿ ಬಂಧು ತಂಡಗಳಿಗೆ ಗಿಡ ವಿತರಣೆ

Suddi Udaya

ಸೌತಡ್ಕ ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಯನ್ನು ರದ್ದುಗೊಳಿಸಿದ ಹೈಕೋರ್ಟ್

Suddi Udaya

ಭೀಕರ ಗಾಳಿ : ಚಿಬಿದ್ರೆ ಪೆರಿಯಡ್ಕದಲ್ಲಿ ನೂರಾರು ರಬ್ಬರ್ ಮರಗಳು, ಅಡಿಕೆ ಮರ, ತೆಂಗಿನ ಮರ ಧಾರಶಾಹಿ: ಮನೆಗಳಿಗೆ ಹಾನಿ

Suddi Udaya

ಬೆಳ್ತಂಗಡಿ: ಮರದ ಗೆಲ್ಲು ಬಿದ್ದು ಮಹಿಳೆ ಸಾವು

Suddi Udaya
error: Content is protected !!