23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಆಗ್ರಹ

ಬೆಳ್ತಂಗಡಿ: ನಿನ್ನೆ ರಾತ್ರಿ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಅವರ ಬರ್ಬರ ಹತ್ಯೆ ನಡೆದಿದೆ. ಇದು ಪೂರ್ವನಿಯೋಜಿತ ಎಂಬುದು ಸ್ಪಷ್ಟವಾಗಿ ಕಾಣುತ್ತಿದೆ. ಕಾಶ್ಮೀರದಲ್ಲಿ ಹಿಂದೂಗಳ ಮಾರಣಹೋಮ ಆಗಿದೆ. ಇದನ್ನು ದೇಶ- ರಾಜ್ಯದ ಜನರು ಮರೆತಿಲ್ಲ; ಇದರ ನಡುವೆ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ ನಡೆದಿರುವುದನ್ನು ವಿಧಾನಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್ ಖಂಡಿಸಿದ್ದಾರೆ.

ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರದ ಎಸ್‍.ಡಿ.ಪಿ.ಐ., ಪಿ.ಎಫ್‍.ಐ. ಮೇಲಿನ ಸಡಿಲ ನೀತಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆಗೆ ಕಾರಣವಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದ ಮೇಲೆ ಮತೀಯ ಸಮಾಜಘಾತುಕ ಶಕ್ತಿಗಳಿಗೆ ದುಷ್ಟರಿಗೆ ಬಲ ಬಂದಂತಾಗಿದೆ. ರಾಜ್ಯದಲ್ಲಿ ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದ್ರೋಹಿಗಳು, ಕೊಲೆಗಡುಕರಿಗೆ ಏನು ಮಾಡಿದರೂ ನಡೆಯುತ್ತದೆ ಎಂಬ ಆತ್ಮವಿಶ್ವಾಸ ಹೆಚ್ಚಾಗಿದೆ. ಇದರ ಪರಿಣಾಮವಾಗಿ ಪದೇಪದೇ ಇಂಥ ಕೃತ್ಯ ನಡೆಯುತ್ತಿದೆ. ಹಿಂದೂ ಕಾರ್ಯಕರ್ತರ ಹತ್ಯೆ, ಹಿಂದೂ ಸಂಘಟನೆಗಳನ್ನು ಬೆದರಿಸುವ ಕೆಲಸ ನಡೆದಿದೆ. ಕರ್ನಾಟಕ ರಾಜ್ಯದಲ್ಲಿ ಗೃಹ ಸಚಿವರು ಏನು ಮಾಡುತ್ತಿದ್ದಾರೆ? ಗುಪ್ತಚರ ಇಲಾಖೆ ಸತ್ತು ಹೋಗಿದೆಯೇ? ರಾಜ್ಯದ ಕಾನೂನು- ಸುವ್ಯವಸ್ಥೆ ಏನಾಗಿದೆ? ಒಬ್ಬ ಹಿಂದೂ ಕಾರ್ಯಕರ್ತನ ಜೀವಕ್ಕೆ ಬೆದರಿಕೆ ಇದೆ ಎಂದು ಗೊತ್ತಿದ್ದರೂ ಯಾಕೆ ಇಂಥ ಘಟನೆ ಆಗಲು ಸಾಧ್ಯವಾಯಿತು? ಮುಖ್ಯಮಂತ್ರಿಗಳು ಮತಾಂಧ ಶಕ್ತಿ ಗಳ ಬಗ್ಗೆ ತೋರುವ ಮೃದು ಧೋರಣೆಯು ಸುಹಾಸ್ ಕೊಲೆಗೂ ಕಾರಣ. ಹಿಂದೂ ವಿರೋಧಿ ರಾಜ್ಯ ಸರಕಾರ ತೊಲಗುವ ವರೆಗೆ ರಾಜ್ಯದ ಜನರಿಗೆ ನೆಮ್ಮದಿ ಇರಲಾರದು. ಕಳೆದ ಕೆಲ ತಿಂಗಳುಗಳಿಂದ ಮುಖ್ಯಮಂತ್ರಿಗಳ ಹೇಳಿಕೆಯು ದೇಶದ್ರೋಹಿಗಳಿಗೆ ಶಕ್ತಿ ಕೊಡುವಂತಿದೆ. ಗೃಹಸಚಿವರ ನಿಷ್ಕ್ರಿಯತೆಯಿಂದ ಕರ್ನಾಟಕದಲ್ಲಿ ಇದ್ದೇವಾ ಅಥವಾ ಪಾಕಿಸ್ತಾನದಲ್ಲಿ ಇದ್ದೇವಾ ಎಂಬ ಚರ್ಚೆಗೆ ಕಾರಣವಾಗಿದೆ. ಪಾಕಿಸ್ತಾನದ ಯುದ್ಧ ಬೇಡ ಅಂತ ತನ್ನ ವ್ಯಾಪ್ತಿಯನ್ನು ಮೀರಿ ಪುಕ್ಕಟೆ ಸಲಹೆ ಕೊಡುವ ಸಿದ್ದರಾಮಯ್ಯನವರು ಇಂತಹ ಹೀನಕೃತ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿ, ಪೋಲಿಸ್ ಇಲಾಖೆ ಕೂಡಲೇ ಕೊಲೆಗಡುಕರನ್ನು ಬಂಧಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೆ ಪ್ರತಾಪಸಿಂಹ ನಾಯಕ್ ಆಗ್ರಹಿಸಿದ್ದಾರೆ.

Related posts

ಗುರುವಾಯನಕೆರೆ: ನವರಾತ್ರಿ, ದೀಪಾವಳಿ ಹಬ್ಬದ ಪ್ರಯುಕ್ತ ಶ್ರೀ ಶಿವಂ ಟೆಕ್ಸ್‌ಟೈಲ್ಸ್ & ರೆಡಿಮೇಡ್ಸ್‌ನಲ್ಲಿ ಡಿಸ್ಕೌಂಟ್ ಆಫರ್

Suddi Udaya

ನೆರಿಯದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಗ್ರಾಹಕರ ಸಮಾವೇಶ

Suddi Udaya

ಕೊಕ್ರಾಡಿಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ, ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆ, ಲಿಯೋ ಕ್ಲಬ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ರಕ್ಷಿತ್ ಶಿವರಾಂ ರಿಂದ ಮನವಿ

Suddi Udaya

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಕಾಯರ್ತಡ್ಕ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿ ಆ್ಯಡ್ಲಿನ್ ಎಲಿಜಬೆತ್ ಜೆರಿನ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ

Suddi Udaya
error: Content is protected !!