22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆಯ ಸಿದ್ಧವನದಲ್ಲಿ ಶಂಕರ ಜಯಂತಿ

ಉಜಿರೆ: ‘ ಆಚಾರ್ಯ ತ್ರಯರಲ್ಲಿ ಶಂಕರರದ್ದು ದೊಡ್ಡ ಹೆಸರು. ಭಾರತದ ಇಕ್ಕೆಲೆಗಳಲ್ಲಿ ಸಂಚರಿಸಿ ಧರ್ಮದ ಪುನರುತ್ಥಾನ ಮಾಡಿದ ಮಹಾನುಭಾವರು. ಪ್ರಸ್ಥಾನತ್ರಯ ಭಾಷ್ಯ ರಚನೆಯೇ ಮುಂತಾದ ಅನೇಕ ಕೃತಿಗಳನ್ನು ಲೋಕಕ್ಕೆ ನೀಡಿದ ಮಹಾನ್ ದಾರ್ಶನಿಕರು. ಬಾಲ್ಯದಲ್ಲಿಯೇ ಸನ್ಯಾಸತ್ವ ಸ್ವೀಕರಿಸಿ , ವೇದಾದಿಗಳನ್ನು , ಶಾಸ್ತ್ರಗಳ ಜ್ಞಾನದೀವಿಗೆ ಪಡೆದು ಲೋಕಕ್ಕೆ ಹೊಸ ಬೆಳಕನ್ನು ನೀಡಿದವರು ಶಂಕರರು ‘ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಹೇಳಿದರು.

ಇವರು ಉಜಿರೆಯ ಸಿದ್ದವನ ಗುರುಕುಲದಲ್ಲಿ ನಡೆದ ಶಂಕರ ಜಯಂತಿ ಕಾರ್ಯಕ್ರಮದ ಅಭ್ಯಾಗತರಾಗಿ ಮಾತನಾಡಿದರು.

ಗುರುಕುಲದ ಪ್ರಧಾನ ಪಾಲಕರಾದ ಕೇಶವ ನಾಯ್ಕ್ ಅಧ್ಯಕ್ಷತೆ ವಹಿಸಿ ಶಂಕರರ ಜೀವನದ ಬಗ್ಗೆ ಮಾತನಾಡಿದರು.
ಸಹ ಪಾಲಕರಾದ ಸಚಿನ್ ಉಪಸ್ಥಿತರಿದ್ದರು. ವಿದ್ಯಾರ್ಥಿ ರೋಹಿತ್ ನಿರೂಪಿಸಿ ವಂದಿಸಿದರು.

Related posts

ಬಜಿರೆ ಮುದ್ದಾಡಿಯ ಮಂಗಿನಿಬೆಟ್ಟು ಗದ್ದೆಯಲ್ಲಿ ಆಟಿಡೊಂಜಿ ಕೆಸರ್‌ದ ಗೊಬ್ಬು

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಶೇ.12 ಡಿವಿಡೆಂಡ್ ಘೋಷಣೆ

Suddi Udaya

ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ : ಉಜಿರೆ ಎಸ್.ಡಿ.ಎಂ ಕಾಲೇಜಿಗೆ 6 ಚಿನ್ನದ ಪದಕ

Suddi Udaya

ಕೊಕ್ಕಡ: EduNest ಅಕಾಡೆಮಿ ಕೋಚಿಂಗ್ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ : ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya
error: Content is protected !!