September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆಯ ಸಿದ್ಧವನದಲ್ಲಿ ಶಂಕರ ಜಯಂತಿ

ಉಜಿರೆ: ‘ ಆಚಾರ್ಯ ತ್ರಯರಲ್ಲಿ ಶಂಕರರದ್ದು ದೊಡ್ಡ ಹೆಸರು. ಭಾರತದ ಇಕ್ಕೆಲೆಗಳಲ್ಲಿ ಸಂಚರಿಸಿ ಧರ್ಮದ ಪುನರುತ್ಥಾನ ಮಾಡಿದ ಮಹಾನುಭಾವರು. ಪ್ರಸ್ಥಾನತ್ರಯ ಭಾಷ್ಯ ರಚನೆಯೇ ಮುಂತಾದ ಅನೇಕ ಕೃತಿಗಳನ್ನು ಲೋಕಕ್ಕೆ ನೀಡಿದ ಮಹಾನ್ ದಾರ್ಶನಿಕರು. ಬಾಲ್ಯದಲ್ಲಿಯೇ ಸನ್ಯಾಸತ್ವ ಸ್ವೀಕರಿಸಿ , ವೇದಾದಿಗಳನ್ನು , ಶಾಸ್ತ್ರಗಳ ಜ್ಞಾನದೀವಿಗೆ ಪಡೆದು ಲೋಕಕ್ಕೆ ಹೊಸ ಬೆಳಕನ್ನು ನೀಡಿದವರು ಶಂಕರರು ‘ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಹೇಳಿದರು.

ಇವರು ಉಜಿರೆಯ ಸಿದ್ದವನ ಗುರುಕುಲದಲ್ಲಿ ನಡೆದ ಶಂಕರ ಜಯಂತಿ ಕಾರ್ಯಕ್ರಮದ ಅಭ್ಯಾಗತರಾಗಿ ಮಾತನಾಡಿದರು.

ಗುರುಕುಲದ ಪ್ರಧಾನ ಪಾಲಕರಾದ ಕೇಶವ ನಾಯ್ಕ್ ಅಧ್ಯಕ್ಷತೆ ವಹಿಸಿ ಶಂಕರರ ಜೀವನದ ಬಗ್ಗೆ ಮಾತನಾಡಿದರು.
ಸಹ ಪಾಲಕರಾದ ಸಚಿನ್ ಉಪಸ್ಥಿತರಿದ್ದರು. ವಿದ್ಯಾರ್ಥಿ ರೋಹಿತ್ ನಿರೂಪಿಸಿ ವಂದಿಸಿದರು.

Related posts

ಅಳದಂಗಡಿ ಒಕ್ಕೂಟದ ಪದಾಧಿಕಾರಿಗಳ ಸಭೆ

Suddi Udaya

ಫೆ.13: ಹತ್ಯಡ್ಕ ಪ್ರಾ.ಕೃ.ಪ. ಸ. ಸಂಘದಲ್ಲಿ ಜೇನು ಕೃಷಿ ತರಬೇತಿ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya
error: Content is protected !!