38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆಯ ಸಿದ್ಧವನದಲ್ಲಿ ಶಂಕರ ಜಯಂತಿ

ಉಜಿರೆ: ‘ ಆಚಾರ್ಯ ತ್ರಯರಲ್ಲಿ ಶಂಕರರದ್ದು ದೊಡ್ಡ ಹೆಸರು. ಭಾರತದ ಇಕ್ಕೆಲೆಗಳಲ್ಲಿ ಸಂಚರಿಸಿ ಧರ್ಮದ ಪುನರುತ್ಥಾನ ಮಾಡಿದ ಮಹಾನುಭಾವರು. ಪ್ರಸ್ಥಾನತ್ರಯ ಭಾಷ್ಯ ರಚನೆಯೇ ಮುಂತಾದ ಅನೇಕ ಕೃತಿಗಳನ್ನು ಲೋಕಕ್ಕೆ ನೀಡಿದ ಮಹಾನ್ ದಾರ್ಶನಿಕರು. ಬಾಲ್ಯದಲ್ಲಿಯೇ ಸನ್ಯಾಸತ್ವ ಸ್ವೀಕರಿಸಿ , ವೇದಾದಿಗಳನ್ನು , ಶಾಸ್ತ್ರಗಳ ಜ್ಞಾನದೀವಿಗೆ ಪಡೆದು ಲೋಕಕ್ಕೆ ಹೊಸ ಬೆಳಕನ್ನು ನೀಡಿದವರು ಶಂಕರರು ‘ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಹೇಳಿದರು.

ಇವರು ಉಜಿರೆಯ ಸಿದ್ದವನ ಗುರುಕುಲದಲ್ಲಿ ನಡೆದ ಶಂಕರ ಜಯಂತಿ ಕಾರ್ಯಕ್ರಮದ ಅಭ್ಯಾಗತರಾಗಿ ಮಾತನಾಡಿದರು.

ಗುರುಕುಲದ ಪ್ರಧಾನ ಪಾಲಕರಾದ ಕೇಶವ ನಾಯ್ಕ್ ಅಧ್ಯಕ್ಷತೆ ವಹಿಸಿ ಶಂಕರರ ಜೀವನದ ಬಗ್ಗೆ ಮಾತನಾಡಿದರು.
ಸಹ ಪಾಲಕರಾದ ಸಚಿನ್ ಉಪಸ್ಥಿತರಿದ್ದರು. ವಿದ್ಯಾರ್ಥಿ ರೋಹಿತ್ ನಿರೂಪಿಸಿ ವಂದಿಸಿದರು.

Related posts

ಪುಂಜಾಲಕಟ್ಟೆ : ಆಟೋ ಚಾಲಕರಿಂದ ರಿಕ್ಷಾ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಿಲುಗಡೆ ಬೋರ್ಡ್ ಅಳವಡಿಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಬ್ಬರು ನಿವೃತ್ತ ಡಿಜಿಪಿಗಳ ಭೇಟಿ

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ಅಖಿಲ ಭಾರತ ಜೀವವಿಮಾ ಪ್ರತಿನಿಧಿಗಳ ಸಂಘಟನೆಯ ದಕ್ಷಿಣ ಮಧ್ಯವಲಯದ ಉಪಾಧ್ಯಕ್ಷರಾಗಿ ಎ.ಎಸ್. ಲೋಕೇಶ್ ಶೆಟ್ಟಿ ಧರ್ಮಸ್ಥಳ ಆಯ್ಕೆ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಜಿಲ್ಲಾಧಿಕಾರಿ ಮುಲೈ ಮುಹಿಲನ್, ಎಸ್.ಪಿ ರಿಷ್ಯಂತ್, ಮಾಜಿ ಸಚಿವ ರಮಾನಾಥ ರೈ ಹಾಗೂ ಜನಪ್ರತಿನಿಧಿಗಳು

Suddi Udaya

ಉಜಿರೆಯಲ್ಲಿ ಇನಾರ ಡೆಂಟಲ್ ಕೇರ್ ದಂತ ಚಿಕಿತ್ಸಾಲಯ ಶುಭಾರಂಭ

Suddi Udaya
error: Content is protected !!