23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆಯ ಸಿದ್ಧವನದಲ್ಲಿ ಶಂಕರ ಜಯಂತಿ

ಉಜಿರೆ: ‘ ಆಚಾರ್ಯ ತ್ರಯರಲ್ಲಿ ಶಂಕರರದ್ದು ದೊಡ್ಡ ಹೆಸರು. ಭಾರತದ ಇಕ್ಕೆಲೆಗಳಲ್ಲಿ ಸಂಚರಿಸಿ ಧರ್ಮದ ಪುನರುತ್ಥಾನ ಮಾಡಿದ ಮಹಾನುಭಾವರು. ಪ್ರಸ್ಥಾನತ್ರಯ ಭಾಷ್ಯ ರಚನೆಯೇ ಮುಂತಾದ ಅನೇಕ ಕೃತಿಗಳನ್ನು ಲೋಕಕ್ಕೆ ನೀಡಿದ ಮಹಾನ್ ದಾರ್ಶನಿಕರು. ಬಾಲ್ಯದಲ್ಲಿಯೇ ಸನ್ಯಾಸತ್ವ ಸ್ವೀಕರಿಸಿ , ವೇದಾದಿಗಳನ್ನು , ಶಾಸ್ತ್ರಗಳ ಜ್ಞಾನದೀವಿಗೆ ಪಡೆದು ಲೋಕಕ್ಕೆ ಹೊಸ ಬೆಳಕನ್ನು ನೀಡಿದವರು ಶಂಕರರು ‘ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಹೇಳಿದರು.

ಇವರು ಉಜಿರೆಯ ಸಿದ್ದವನ ಗುರುಕುಲದಲ್ಲಿ ನಡೆದ ಶಂಕರ ಜಯಂತಿ ಕಾರ್ಯಕ್ರಮದ ಅಭ್ಯಾಗತರಾಗಿ ಮಾತನಾಡಿದರು.

ಗುರುಕುಲದ ಪ್ರಧಾನ ಪಾಲಕರಾದ ಕೇಶವ ನಾಯ್ಕ್ ಅಧ್ಯಕ್ಷತೆ ವಹಿಸಿ ಶಂಕರರ ಜೀವನದ ಬಗ್ಗೆ ಮಾತನಾಡಿದರು.
ಸಹ ಪಾಲಕರಾದ ಸಚಿನ್ ಉಪಸ್ಥಿತರಿದ್ದರು. ವಿದ್ಯಾರ್ಥಿ ರೋಹಿತ್ ನಿರೂಪಿಸಿ ವಂದಿಸಿದರು.

Related posts

ಆರಂಬೋಡಿ: ಎಲ್ಲಾ ಸರಕಾರಿ ಹಿರಿಯ, ಕಿರಿಯ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮನೋಜ್ ಶೆಟ್ಟಿ ಐತ್ತೇರಿ ರವರಿಂದ ಉಚಿತ ನೋಟ್‌ಪುಸ್ತಕ ವಿತರಣೆ

Suddi Udaya

ಬಂದಾರು: ಬೈಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಕಳ್ಳತನಕ್ಕೆ ಯತ್ನ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಧನ್ವಂತರಿ ಪೂಜೆ ಹಾಗೂ ದುರ್ಗಾಪೂಜೆ

Suddi Udaya

ಶಾಂತಿವನದಲ್ಲಿ 8ನೇ ರಾಷ್ಟ್ರೀಯ ನಿಸರ್ಗೋಪಚಾರ ದಿನಾಚರಣೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ವನಮಹೋತ್ಸವ ಕಾರ್ಯಕ್ರಮ

Suddi Udaya
error: Content is protected !!