September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆಯ ಸಿದ್ಧವನದಲ್ಲಿ ಶಂಕರ ಜಯಂತಿ

ಉಜಿರೆ: ‘ ಆಚಾರ್ಯ ತ್ರಯರಲ್ಲಿ ಶಂಕರರದ್ದು ದೊಡ್ಡ ಹೆಸರು. ಭಾರತದ ಇಕ್ಕೆಲೆಗಳಲ್ಲಿ ಸಂಚರಿಸಿ ಧರ್ಮದ ಪುನರುತ್ಥಾನ ಮಾಡಿದ ಮಹಾನುಭಾವರು. ಪ್ರಸ್ಥಾನತ್ರಯ ಭಾಷ್ಯ ರಚನೆಯೇ ಮುಂತಾದ ಅನೇಕ ಕೃತಿಗಳನ್ನು ಲೋಕಕ್ಕೆ ನೀಡಿದ ಮಹಾನ್ ದಾರ್ಶನಿಕರು. ಬಾಲ್ಯದಲ್ಲಿಯೇ ಸನ್ಯಾಸತ್ವ ಸ್ವೀಕರಿಸಿ , ವೇದಾದಿಗಳನ್ನು , ಶಾಸ್ತ್ರಗಳ ಜ್ಞಾನದೀವಿಗೆ ಪಡೆದು ಲೋಕಕ್ಕೆ ಹೊಸ ಬೆಳಕನ್ನು ನೀಡಿದವರು ಶಂಕರರು ‘ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಮುಖ್ಯಸ್ಥರಾದ ಡಾ. ಪ್ರಸನ್ನಕುಮಾರ ಐತಾಳ್ ಹೇಳಿದರು.

ಇವರು ಉಜಿರೆಯ ಸಿದ್ದವನ ಗುರುಕುಲದಲ್ಲಿ ನಡೆದ ಶಂಕರ ಜಯಂತಿ ಕಾರ್ಯಕ್ರಮದ ಅಭ್ಯಾಗತರಾಗಿ ಮಾತನಾಡಿದರು.

ಗುರುಕುಲದ ಪ್ರಧಾನ ಪಾಲಕರಾದ ಕೇಶವ ನಾಯ್ಕ್ ಅಧ್ಯಕ್ಷತೆ ವಹಿಸಿ ಶಂಕರರ ಜೀವನದ ಬಗ್ಗೆ ಮಾತನಾಡಿದರು.
ಸಹ ಪಾಲಕರಾದ ಸಚಿನ್ ಉಪಸ್ಥಿತರಿದ್ದರು. ವಿದ್ಯಾರ್ಥಿ ರೋಹಿತ್ ನಿರೂಪಿಸಿ ವಂದಿಸಿದರು.

Related posts

ಮಚ್ಚಿನ : ಕಲಾಯಿ ರಸ್ತೆ ಪುಂಚಪಾದೆಯಲ್ಲಿ ವಾರಿಸುದಾರರಿಲ್ಲದೆ ಪತ್ತೆಯಾದ ಎರಡು ಬೈಕ್ ಗಳು

Suddi Udaya

ಶಿಬರಾಜೆ ಕಲ್ಲೇರಿಮಾರು ನಿವಾಸಿ ಲಕ್ಷ್ಮಣ ಗೌಡ ನಿಧನ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಬಹುಮಾನ ವಿತರಣಾ ಕಾರ್ಯಕ್ರಮ – ” ಪುರಸ್ಕಾರ 2024 “

Suddi Udaya

ಭೂಸೇನೆಯಲ್ಲಿ 22 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಎ.ಸಿ.ಪಿ ಹವಾಲ್ದಾರ್ ದೇವಪ್ರಸಾದ್ ಗೌಡ ರವರಿಗೆ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya

ನಾಳೆಯಿಂದ ಗಡಾಯಿಕಲ್ಲು ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅಭಿವೃದ್ಧಿ ಕಾಮಗಾರಿಗಳ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್ ರವರಿಂದ ಉದ್ಘಾಟನೆ

Suddi Udaya
error: Content is protected !!