ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

ಬೆಳ್ತಂಗಡಿ : ಕರ್ನಾಟಕ ರಾಜ್ಯ ಸರ್ಕಾರದ ಕೃಷಿ ಸಚಿವ ಚೆಲುವರಾಯ ಸ್ವಾಮಿ ರವರು ಬೆಳ್ತಂಗಡಿ ತಾಲೂಕಿನ ಪ್ರವಾಸ ಕೈಗೊಂಡಿದ್ದು ಮೇ 4ರಂದು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿ.ಪ. ಮಾಜಿ ಶಾಸಕ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ, ಮಾಜಿ ಸದಸ್ಯ ವಿಶ್ವನಾಥ್ ಕೊಲ್ಲಾಜೆ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಪಿ.ಟಿ ಸಭಾಸ್ಟೀಯನ್, ಯುವ ಕಾಂಗ್ರೆಸ್ ಅಧ್ಯಕ್ಷ ಅಝರ್ ನಾವೂರು, ಉಪಾಧ್ಯಕ್ಷರುಗಳಾದ ನವೀನ್ ಗೌಡ ಸವಣಾಲು, ಅರುಣ್ ಲೊಬೋ ಓಡಿಲ್ನಾಲ, ಮುಖಂಡರಾದ ಪ್ರಶಾಂತ್ ಮಚ್ಚಿನ, ಗಣೇಶ್ ಕಾಶಿ ಕೊಕ್ಕಡ, ಧರಣೇಶ್ ಕೊಕ್ಕಡ, ಶ್ರೀಧರ್ ರಾವ್ ಕಳೆಂಜ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಬಳಿಕ ಧರ್ಮಸ್ಥಳಕ್ಕೆ ಆಗಮಿಸಿ ವಸತಿಗೃಹದಲ್ಲಿ ತಂಗಿ, ನಾಳೆ ಸೋಮವಾರ ಶ್ರೀ ಮಂಜುನಾಥ ದೇವರ ದರ್ಶನ ಬಳಿಕ ಕನ್ನಡಪ್ರಭ, ಏಷ್ಯಾನೆಟ್ ಸುವರ್ಣ ನ್ಯೂಸ್ ನ ರೈತರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ‌. ನಂತರ ದ.ಕ, ಉಡುಪಿ ಜಿಲ್ಲೆಯ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.

Related posts

ರುಡ್ ಸೆಟ್ ಶಿಬಿರಾರ್ಥಿಗಳಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ರಾಜ್ಯ ಧಾರ್ಮಿಕ ಪರಿಷತ್ ಸದಸ್ಯರಾದ ಶ್ರೀಮತಿ ಮಲ್ಲಿಕಾ ಪಕ್ಕಳ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ವೇಣೂರು ಸಿಎ ಬ್ಯಾಂಕಿನಿಂದ ಹೊಸ ಬಸ್ ತಂಗುದಾನಕ್ಕೆ ಕುಡಿಯುವ ನೀರಿನ ಪಿಲ್ಟರ್ ಕೊಡುಗೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡಕ್ಕೆ ಡಾ|| ಹೆಗ್ಗಡೆಯವರು ಪ್ರೇರಣೆ: ಮೋಹನ್ ಕುಮಾರ್

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ

Suddi Udaya
error: Content is protected !!