May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು ಬ್ರಹ್ಮಕಲಶೋತ್ಸವದಲ್ಲಿ ಶಾಸಕ ಹರೀಶ್ ಪೂಂಜರವರು ಮುಸ್ಲಿಂರನ್ನು ನಿಂದಿಸಿರುವುದು ಸಮುದಾಯಕ್ಕೆ ನೋವು ತಂದಿದೆ: ಮುಸ್ಲಿಂ ಮುಖಂಡರಿಂದ ಪತ್ರಿಕಾಗೋಷ್ಠಿ

ಬೆಳ್ತಂಗಡಿ: ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಶಾಸಕ ಹರೀಶ್ ಪೂಂಜ, ಮುಸ್ಲಿಂ ಸಮುದಾಯವನ್ನು ಅವಮಾಸಿರುವುದನ್ನು ಖಂಡಿಸಿ ತಾಲೂಕಿನ ಮುಸ್ಲಿಂ ಮುಖಂಡರು ಬೆಳ್ತಂಗಡಿ ಜಮೀಯತುಲ್ ಫಲಾಹ್ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.

ಗೋಪಾಲಕೃಷ್ಣ ದೇವರು ಎಂದರೆ ಮಾನವ ಸಹಜ ಪ್ರೀತಿಯ ದೇವರು. ಸರ್ವೇ ಜನ ಸುಖಿನೋ ಭವಂತು ಎನ್ನುವುದು ಶ್ರೀ ಕೃಷ್ಣನ ಮಾತು. ಇಂತಹ ವೇದಿಕೆಯಲ್ಲಿ ಶಾಸಕ ಹರೀಶ್ ಪೂಂಜರು ಯಾರ್ಯಾರ ಮಾತನ್ನು ಕೇಳಿ ಮುಸ್ಲಿಂ ಸಮುದಾಯವನ್ನು ಬಹಳ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಇದು ನಮಗೆಲ್ಲ ಬಹಳ ನೋವು ತಂದಿದೆ. ಇದರ ಸತ್ಯಾಂಶ ಮುಂದಿಡಲು ಈ ಪತ್ರಿಕಾಗೋಷ್ಟಿ ಕರೆದಿದ್ದೇವೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು, ಮುಸ್ಲಿಂ ಮುಖಂಡ ಕೆ.ಕೆ ಶಾಹುಲ್ ಹಮೀದ್ ಹೇಳಿದರು.

ಅಲ್ಲಿಯ ಮುಸ್ಲಿಂರು ತೆಕ್ಕಾರು ದೇವಸ್ಥಾನದ ಜೀರ್ಣೋದ್ದಾರಕ್ಕಾಗಿ ಜಾಗವನ್ನು ಬಿಟ್ಟು ಕೊಟ್ಟಿದ್ದಾರೆ. ಬ್ರಹ್ಮಕಲಶಕ್ಕೆ ಬ್ಯಾನರ್ ಹಾಕಿದ್ದಾರೆ. ಮರವನ್ನು ದಾನದ ರೂಪದಲ್ಲಿ ನೀಡಿದ್ದಾರೆ. ಧನ ಸಹಾಯವನ್ನು ನೀಡಿದ್ದಾರೆ. ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಇರುವಾಗ 144 ಸೆಕ್ಷನ್ ಇರುವಾಗ ಎರಡು ಧರ್ಮಗಳ ನಡುವೆ ಘರ್ಷಣೆ ಬರುವಂತೆ ಮಾತನಾಡಿದ್ದು ಸರಿಯಲ್ಲ. ಒಂದು ಸಮುದಾಯವನ್ನು ಈ ರೀತಿ ಹಿಯಾಳಿಸಿರುವುದು ತುಂಬಾ ನೋವು ತಂದಿದೆ ಎಂದು ಖೇದ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮುಸ್ಲಿಂ ಮುಖಂಡರುಗಳಾದ ಅಕ್ಬರ್ ಬೆಳ್ತಂಗಡಿ, ನಜಿರ್, ಹನೀಫ್ ಖಾಲೀದ್, ಕೆ.ಎಸ್. ಅಬ್ದುಲ್ ಇನ್ನಿತರರು ಉಪಸ್ಥಿತರಿದ್ದರು.

Related posts

ಸುಲ್ಕೇರಿ ಶ್ರೀ ಗುರುನಾರಾಯಣ ಸೇವಾ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಬಗ್ಗೆ ಸಮಾಲೋಚನ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ ಶ್ರೀ ಲಕ್ಷ್ಮೀ ಲೇಡಿಸ್ ಬ್ಯೂಟಿಪಾರ್ಲರ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಕಡಿರುದ್ಯಾವರ: ಅಕ್ರಮ ಮರಳು ಸಂಗ್ರಹ ಪತ್ತೆ: ಪ್ರಕರಣ ದಾಖಲು

Suddi Udaya

ಪಿಲಿಗೂಡು ಶಾಲಾ ವಾರ್ಷಿಕೋತ್ಸವ, ವಿವೇಕ ಕೊಠಡಿ ಮತ್ತು ರಂಗಮಂದಿರ ಉದ್ಘಾಟನೆ

Suddi Udaya

ಬಳಂಜ ಬಿಜೆಪಿ ಬೂತ್ ಸಮಿತಿ‌ ಅಧ್ಯಕ್ಷರಾಗಿ ಗಣೇಶ್ ದೇವಾಡಿಗ, ಕಾರ್ಯದರ್ಶಿಯಾಗಿ ಪ್ರಕಾಶ್ ಪೂಜಾರಿ

Suddi Udaya
error: Content is protected !!