25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳಕ್ಕೆ ಬಂದಿದ್ದ ಮಹಿಳೆಯ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

ಬೆಳ್ತಂಗಡಿ: ಧರ್ಮಸ್ಥಳಕ್ಕೆ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾದ ಘಟನೆ ಮೇ 3 ರಂದು ನಡೆದಿದೆ.

ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಲತಾ ಎಂಬ ಮಹಿಳೆ ಮೇ 02 ರಂದು ಆಂಧ್ರಪ್ರದೇಶದ ನೆಲ್ಲೂರು ನಿಂದ ಒಂದು ಬಾಡಿಗೆ ಇನ್ನೋವಾ ಕಾರಿನಲ್ಲಿ ಹೊರಟು ಮೇ 03 ರಂದು ಸಂಜೆ 05-00 ಘಂಟೆಗೆ ಧರ್ಮಸ್ಥಳಕ್ಕೆ ತಲುಪಿರುತ್ತಾರೆ. ದೇವರ ದರ್ಶನಕ್ಕೆ ಹೋಗುವ ಮೊದಲು ಲತಾ ಅವರು ಕಾರ್ಯಕ್ರಮಕ್ಕೆಂದು ಜೊತೆಯಲ್ಲಿ ತಂದಿದ್ದ ಚಿನ್ನಾಭರಣಗಳಾದ ಬ್ರಾಸ್ ಲೈಟ್, ಚಿನ್ನದ ಚೈನ್, ನೆಕ್ಲೆಸ್ ನ್ನು ವ್ಯಾನಿಟಿಕ್ ಬ್ಯಾಗ್ ನ ಒಳಗಡೆ ಪ್ಲಾಸ್ಟಿಕ್ ಡಬ್ಬದಲ್ಲಿ ಹಾಕಿ ಬ್ಯಾಗ್ ನಲ್ಲಿ ಇಟ್ಟುಕೊಂಡು ದೇವರ ದರ್ಶನವನ್ನು ಮುಗಿಸಿ ಹೊರಡುವ ಸಮಯದಲ್ಲಿ ಬ್ಯಾಗನ್ನು ನೋಡಿದಾಗ ವ್ಯಾನಿಟಿಕ್ ಬ್ಯಾಗಿನ ಜಿಪ್ಪು ತೆರೆದಿದ್ದು. ಬ್ಯಾಗ್ ನ ಒಳಗಡೆ ನೋಡಿದಾಗ ಬ್ಯಾಗ್ ನ ಒಳಗಡೇ ಪ್ಲಾಸ್ಟಿಕ್ ಬಾಕ್ಸಲ್ಲಿ ಇಟ್ಟಿದ್ದ 97 ಗ್ರಾಂ ತೂಕದ ಚಿನ್ನಾಭರಣಗಳು ಕಳವಾಗಿದ್ದು, ಒಟ್ಟು ಮೌಲ್ಯ ರೂ 6,79,000/- ಆಗಿರುತ್ತದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆ ಅ ಕ್ರ 17/2025 ಕಲಂ: 303(2) ಬಿಎನ್ ಎಸ್ 2023ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಶ್ರೀ ಕ್ಷೇತ್ರ ಮಂಗಳಗಿರಿಯ ಆಡಳಿತ ಮೋಕ್ತೇಸರಾದ ರಾಜೀವ ಇವರ ವತಿಯಿಂದ ಮುಂಡೂರು ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಗ್ರಾಮ‌ ಸುಭೀಕ್ಷೆಗಾಗಿ ಶ್ರೀ ದೇವರ ಲೋಕ ಸಂಚಾರ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಬಳ್ಳಮಂಜದಲ್ಲಿ ಸದ್ಗುರು ಆಯಿಲ್ ಮಿಲ್ ಉದ್ಘಾಟನೆ

Suddi Udaya

ಬೆಳ್ತಂಗಡಿ: ಲಯನ್ಸ್ ಸೇವಾ ಭವನ ನಿರ್ಮಾಣಡಾ.ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ ಸಹಾಯಧನದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಉಜಿರೆ ನೀಲಿಯರ ಮನೆಯ ಜೋಮ ಕುರಿಯನ್ ನಿಧನ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
error: Content is protected !!