25.3 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಂಗಳೂರು ವಿ. ವಿ. ಅಂತರ್ ಕಾಲೇಜು ಪುರುಷರ ಕ್ರಿಕೆಟ್: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಸತತ ಮೂರನೇ ಬಾರಿಗೆ ಚಾಂಪಿಯನ್

ಬೆಳ್ತಂಗಡಿ: ಕೆನರಾ ಕಾಲೇಜು ಮಂಗಳೂರು ಇದರ ಆಶ್ರಯದಲ್ಲಿ ಮಂಗಳೂರಿನ ನೆಹರೂ ಮೈದಾನದಲ್ಲಿ ಮೂಲ್ಕಿ ದಯಾನಂದ್ ಕಾಮತ್ ಮೆಮೋರಿಯಲ್ ಟ್ರೋಫಿಗಾಗಿ ನಡೆದ ಮಂಗಳೂರು ವಿ. ವಿ. (ಮಂಗಳೂರು ವಲಯ) ಅಂತರ್ಕಾಲೇಜು ಪುರುಷರ ಕ್ರಿಕೆಟ್ ಪಂದ್ಯಾಕೂಟದಲ್ಲಿ ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜು ತಂಡವು ಸತತ ಮೂರನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸುವುದರೊಂದಿಗೆ ಹ್ಯಾಟ್ರಿಕ್ ಸಾಧನೆ ಮಾಡಿದೆ.

ಎಸ್. ಡಿ. ಎಂ. ಸಿ. ಬಿ. ಎಂ. ವಿರುದ್ಧವಾಗಿ ನಡೆದ ಫೈನಲ್ ಕಾದಾಟದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದು ಕೊಂಡ ಎಸ್. ಡಿ. ಎಂ. ತಂಡವು 78 ರನ್ನು ಗಳಿಗೆ ಆಲ್ ಔಟ್ ಆಯಿತು. ಸೇಕ್ರೆಡ್ ಹಾರ್ಟಿನ ಶಿವಾoಶು 3 ವಿಕೆಟ್ ಪಡೆದರೆ ಸ್ವಸ್ತಿಕ್, ನಯನ್, ವಿಕಾಸ್ ಮತ್ತು ತುಷಾರ್ ತಲಾ ಒಂದು ವಿಕೆಟ್ ಪಡೆದರು.
79 ರನ್ನು ಗಳ ಗುರಿಪಡೆದ ಸೇಕ್ರೆಡ್ ಹಾರ್ಟ್ ತಂಡವು 10.1 ಓವರುಗಳಲ್ಲಿ 5 ವಿಕೆಟಿಗೆ ಗುರಿಮುಟ್ಟಿತು. ತಂಡದ ಪರವಾಗಿ ನಯನ್ 39 (29) ಹಾಗೂ ನೂತನ್ 28 (18) ರನ್ನುಗಳಿಸಿದರು.


ಸರಣಿಯುದ್ಧಕ್ಕೂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಸೇಕ್ರೆಡ್ ಹಾರ್ಟ್ ನ ನಯನ್ ಸರಣಿಯ ಉತ್ತಮ ಬ್ಯಾಟ್ಸಮನ್ ಪ್ರಶಸ್ತಿ ಪಡೆದರು. ಫೈನಲ್ ನಲ್ಲಿ ಹ್ಯಾಟ್ರಿಕ್ ವಿಕೆಟ್ ಕಬಲಳಿಸಿದ ಎಸ್. ಡಿ. ಎಂ. ನ ರೆಹನ್ ಉತ್ತಮ ಬೌಲರ್ ಪ್ರಶಸ್ತಿ ಪಡೆದರೆ. ಫೈನಲ್ ನಲ್ಲಿ 3 ವಿಕೆಟ್ ಕಿತ್ತ ಸೇಕ್ರೆಡ್ ಹಾರ್ಟ್ ಕಾಲೇಜಿನ ಶಿವಾOಶು ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Related posts

ಉಜಿರೆ: ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ:

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಬಿಜೆಪಿ ಜಿಲ್ಲಾ ಎಸ್.ಟಿ ಮೋರ್ಚಾ ವತಿಯಿಂದ ಎಸ್.ಟಿ ಮೋರ್ಚಾ ಅಧ್ಯಕ್ಷ ರಾಜೇಶ್ ರವರ ಮೇಲೆ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

Suddi Udaya

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಉಪಾಧ್ಯಕ್ಷರಾಗಿ ಆನಂದ ಗೌಡ ಪಿ.ಹೆಚ್., ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ

Suddi Udaya

ಬೆಳ್ತಂಗಡಿ: ಕೋಟು೯ ರಸ್ತೆ ಬಳಿ ಮರ ಬಿದ್ದು ಎರಡು ವಿದ್ಯುತ್ ಕಂಬಗಳಿಗೆ ಹಾನಿ

Suddi Udaya

ಚಾರ್ಮಾಡಿ ಮುಹಿದ್ದಿನ್ ಜುಮ್ಮಾ ಮಸೀದಿಗೆ ನುಗ್ಗಿದ ತಂಡದಿಂದ ಧರ್ಮಗುರುಗಳ ಮೇಲೆ ಹಲ್ಲೆ

Suddi Udaya
error: Content is protected !!