28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು ಬ್ರಹ್ಮಕಲಶೋತ್ಸವದಲ್ಲಿ ಶಾಸಕ ಹರೀಶ್ ಪೂಂಜರವರು ಮುಸ್ಲಿಂರನ್ನು ನಿಂದಿಸಿರುವುದು ಸಮುದಾಯಕ್ಕೆ ನೋವು ತಂದಿದೆ: ಮುಸ್ಲಿಂ ಮುಖಂಡರಿಂದ ಪತ್ರಿಕಾಗೋಷ್ಠಿ

ಬೆಳ್ತಂಗಡಿ: ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಶಾಸಕ ಹರೀಶ್ ಪೂಂಜ, ಮುಸ್ಲಿಂ ಸಮುದಾಯವನ್ನು ಅವಮಾಸಿರುವುದನ್ನು ಖಂಡಿಸಿ ತಾಲೂಕಿನ ಮುಸ್ಲಿಂ ಮುಖಂಡರು ಬೆಳ್ತಂಗಡಿ ಜಮೀಯತುಲ್ ಫಲಾಹ್ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.

ಗೋಪಾಲಕೃಷ್ಣ ದೇವರು ಎಂದರೆ ಮಾನವ ಸಹಜ ಪ್ರೀತಿಯ ದೇವರು. ಸರ್ವೇ ಜನ ಸುಖಿನೋ ಭವಂತು ಎನ್ನುವುದು ಶ್ರೀ ಕೃಷ್ಣನ ಮಾತು. ಇಂತಹ ವೇದಿಕೆಯಲ್ಲಿ ಶಾಸಕ ಹರೀಶ್ ಪೂಂಜರು ಯಾರ್ಯಾರ ಮಾತನ್ನು ಕೇಳಿ ಮುಸ್ಲಿಂ ಸಮುದಾಯವನ್ನು ಬಹಳ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಇದು ನಮಗೆಲ್ಲ ಬಹಳ ನೋವು ತಂದಿದೆ. ಇದರ ಸತ್ಯಾಂಶ ಮುಂದಿಡಲು ಈ ಪತ್ರಿಕಾಗೋಷ್ಟಿ ಕರೆದಿದ್ದೇವೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು, ಮುಸ್ಲಿಂ ಮುಖಂಡ ಕೆ.ಕೆ ಶಾಹುಲ್ ಹಮೀದ್ ಹೇಳಿದರು.

ಅಲ್ಲಿಯ ಮುಸ್ಲಿಂರು ತೆಕ್ಕಾರು ದೇವಸ್ಥಾನದ ಜೀರ್ಣೋದ್ದಾರಕ್ಕಾಗಿ ಜಾಗವನ್ನು ಬಿಟ್ಟು ಕೊಟ್ಟಿದ್ದಾರೆ. ಬ್ರಹ್ಮಕಲಶಕ್ಕೆ ಬ್ಯಾನರ್ ಹಾಕಿದ್ದಾರೆ. ಮರವನ್ನು ದಾನದ ರೂಪದಲ್ಲಿ ನೀಡಿದ್ದಾರೆ. ಧನ ಸಹಾಯವನ್ನು ನೀಡಿದ್ದಾರೆ. ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಇರುವಾಗ 144 ಸೆಕ್ಷನ್ ಇರುವಾಗ ಎರಡು ಧರ್ಮಗಳ ನಡುವೆ ಘರ್ಷಣೆ ಬರುವಂತೆ ಮಾತನಾಡಿದ್ದು ಸರಿಯಲ್ಲ. ಒಂದು ಸಮುದಾಯವನ್ನು ಈ ರೀತಿ ಹಿಯಾಳಿಸಿರುವುದು ತುಂಬಾ ನೋವು ತಂದಿದೆ ಎಂದು ಖೇದ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮುಸ್ಲಿಂ ಮುಖಂಡರುಗಳಾದ ಅಕ್ಬರ್ ಬೆಳ್ತಂಗಡಿ, ನಜಿರ್, ಹನೀಫ್ ಖಾಲೀದ್, ಕೆ.ಎಸ್. ಅಬ್ದುಲ್ ಇನ್ನಿತರರು ಉಪಸ್ಥಿತರಿದ್ದರು.

Related posts

ಡಿ.18: ಬೆಳ್ತಂಗಡಿ ರೋಟರಿ ಕ್ಲಬ್‌ಗೆ ಜಿಲ್ಲಾ ಗವರ್ನರ್ ಭೇಟಿ : ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಿಲಾನ್ಯಾಸ- ಸೇವಾ ಯೋಜನೆಗಳ ಹಸ್ತಾಂತರ

Suddi Udaya

ಮೇ 21 : ಮಾಜಿ ಶಾಸಕ ಕೆ.ವಸಂತ ಬಂಗೇರ ಅವರ ಉತ್ತರಕ್ರಿಯೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳ್ತಂಗಡಿಗೆ

Suddi Udaya

ಗೇರುಕಟ್ಟೆ: ಅಂಚೆ ಪತ್ರ ವಿತರಕ ಡಾಕಯ್ಯ ಗೌಡ ಸೇವಾ ನಿವೃತ್ತಿ, ಇಲಾಖೆ ಹಾಗೂ ಸ್ಥಳೀಯರ ವತಿಯಿಂದ ಸನ್ಮಾನ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

Suddi Udaya

ಮುಂಡಾಜೆ: ಕವಿ ವಿಶ್ರಾಂತ ಶಿಕ್ಷಕ ಶಂಕರ್ ಎನ್.ತಾಮನ್ಕರ್ ರವರ ಸೀತಾ ರಾಮಾಯಣ ಮತ್ತು ಮಕರಂದ ಕವನ ಸಂಕಲನಗಳ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ನಾರಾವಿ ಸಂತ ಅಂತೋನಿ ಶಿಕ್ಷಣ ಸಂಸ್ಥೆಯಿಂದ ‘ಮಕ್ಕಳ ದಿನ -ಕ್ರೀಡಾಸಂಗಮ 2024’ ಆಚರಣೆ

Suddi Udaya
error: Content is protected !!