24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು ಬ್ರಹ್ಮಕಲಶೋತ್ಸವದಲ್ಲಿ ಶಾಸಕ ಹರೀಶ್ ಪೂಂಜರವರು ಮುಸ್ಲಿಂರನ್ನು ನಿಂದಿಸಿರುವುದು ಸಮುದಾಯಕ್ಕೆ ನೋವು ತಂದಿದೆ: ಮುಸ್ಲಿಂ ಮುಖಂಡರಿಂದ ಪತ್ರಿಕಾಗೋಷ್ಠಿ

ಬೆಳ್ತಂಗಡಿ: ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಶಾಸಕ ಹರೀಶ್ ಪೂಂಜ, ಮುಸ್ಲಿಂ ಸಮುದಾಯವನ್ನು ಅವಮಾಸಿರುವುದನ್ನು ಖಂಡಿಸಿ ತಾಲೂಕಿನ ಮುಸ್ಲಿಂ ಮುಖಂಡರು ಬೆಳ್ತಂಗಡಿ ಜಮೀಯತುಲ್ ಫಲಾಹ್ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.

ಗೋಪಾಲಕೃಷ್ಣ ದೇವರು ಎಂದರೆ ಮಾನವ ಸಹಜ ಪ್ರೀತಿಯ ದೇವರು. ಸರ್ವೇ ಜನ ಸುಖಿನೋ ಭವಂತು ಎನ್ನುವುದು ಶ್ರೀ ಕೃಷ್ಣನ ಮಾತು. ಇಂತಹ ವೇದಿಕೆಯಲ್ಲಿ ಶಾಸಕ ಹರೀಶ್ ಪೂಂಜರು ಯಾರ್ಯಾರ ಮಾತನ್ನು ಕೇಳಿ ಮುಸ್ಲಿಂ ಸಮುದಾಯವನ್ನು ಬಹಳ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಇದು ನಮಗೆಲ್ಲ ಬಹಳ ನೋವು ತಂದಿದೆ. ಇದರ ಸತ್ಯಾಂಶ ಮುಂದಿಡಲು ಈ ಪತ್ರಿಕಾಗೋಷ್ಟಿ ಕರೆದಿದ್ದೇವೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು, ಮುಸ್ಲಿಂ ಮುಖಂಡ ಕೆ.ಕೆ ಶಾಹುಲ್ ಹಮೀದ್ ಹೇಳಿದರು.

ಅಲ್ಲಿಯ ಮುಸ್ಲಿಂರು ತೆಕ್ಕಾರು ದೇವಸ್ಥಾನದ ಜೀರ್ಣೋದ್ದಾರಕ್ಕಾಗಿ ಜಾಗವನ್ನು ಬಿಟ್ಟು ಕೊಟ್ಟಿದ್ದಾರೆ. ಬ್ರಹ್ಮಕಲಶಕ್ಕೆ ಬ್ಯಾನರ್ ಹಾಕಿದ್ದಾರೆ. ಮರವನ್ನು ದಾನದ ರೂಪದಲ್ಲಿ ನೀಡಿದ್ದಾರೆ. ಧನ ಸಹಾಯವನ್ನು ನೀಡಿದ್ದಾರೆ. ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಇರುವಾಗ 144 ಸೆಕ್ಷನ್ ಇರುವಾಗ ಎರಡು ಧರ್ಮಗಳ ನಡುವೆ ಘರ್ಷಣೆ ಬರುವಂತೆ ಮಾತನಾಡಿದ್ದು ಸರಿಯಲ್ಲ. ಒಂದು ಸಮುದಾಯವನ್ನು ಈ ರೀತಿ ಹಿಯಾಳಿಸಿರುವುದು ತುಂಬಾ ನೋವು ತಂದಿದೆ ಎಂದು ಖೇದ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮುಸ್ಲಿಂ ಮುಖಂಡರುಗಳಾದ ಅಕ್ಬರ್ ಬೆಳ್ತಂಗಡಿ, ನಜಿರ್, ಹನೀಫ್ ಖಾಲೀದ್, ಕೆ.ಎಸ್. ಅಬ್ದುಲ್ ಇನ್ನಿತರರು ಉಪಸ್ಥಿತರಿದ್ದರು.

Related posts

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ವಕ್ಫ್ ಜಾಗೃತಿ ಸಭೆ ಕಾರ್ಯಕ್ರಮ

Suddi Udaya

ಮೇ 4: ನಡ ನರಸಿಂಹಗಡ ಕ್ಷೇತ್ರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ

Suddi Udaya
error: Content is protected !!