25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳಕ್ಕೆ ಬಂದಿದ್ದ ಮಹಿಳೆಯ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

ಬೆಳ್ತಂಗಡಿ: ಧರ್ಮಸ್ಥಳಕ್ಕೆ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾದ ಘಟನೆ ಮೇ 3 ರಂದು ನಡೆದಿದೆ.

ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಲತಾ ಎಂಬ ಮಹಿಳೆ ಮೇ 02 ರಂದು ಆಂಧ್ರಪ್ರದೇಶದ ನೆಲ್ಲೂರು ನಿಂದ ಒಂದು ಬಾಡಿಗೆ ಇನ್ನೋವಾ ಕಾರಿನಲ್ಲಿ ಹೊರಟು ಮೇ 03 ರಂದು ಸಂಜೆ 05-00 ಘಂಟೆಗೆ ಧರ್ಮಸ್ಥಳಕ್ಕೆ ತಲುಪಿರುತ್ತಾರೆ. ದೇವರ ದರ್ಶನಕ್ಕೆ ಹೋಗುವ ಮೊದಲು ಲತಾ ಅವರು ಕಾರ್ಯಕ್ರಮಕ್ಕೆಂದು ಜೊತೆಯಲ್ಲಿ ತಂದಿದ್ದ ಚಿನ್ನಾಭರಣಗಳಾದ ಬ್ರಾಸ್ ಲೈಟ್, ಚಿನ್ನದ ಚೈನ್, ನೆಕ್ಲೆಸ್ ನ್ನು ವ್ಯಾನಿಟಿಕ್ ಬ್ಯಾಗ್ ನ ಒಳಗಡೆ ಪ್ಲಾಸ್ಟಿಕ್ ಡಬ್ಬದಲ್ಲಿ ಹಾಕಿ ಬ್ಯಾಗ್ ನಲ್ಲಿ ಇಟ್ಟುಕೊಂಡು ದೇವರ ದರ್ಶನವನ್ನು ಮುಗಿಸಿ ಹೊರಡುವ ಸಮಯದಲ್ಲಿ ಬ್ಯಾಗನ್ನು ನೋಡಿದಾಗ ವ್ಯಾನಿಟಿಕ್ ಬ್ಯಾಗಿನ ಜಿಪ್ಪು ತೆರೆದಿದ್ದು. ಬ್ಯಾಗ್ ನ ಒಳಗಡೆ ನೋಡಿದಾಗ ಬ್ಯಾಗ್ ನ ಒಳಗಡೇ ಪ್ಲಾಸ್ಟಿಕ್ ಬಾಕ್ಸಲ್ಲಿ ಇಟ್ಟಿದ್ದ 97 ಗ್ರಾಂ ತೂಕದ ಚಿನ್ನಾಭರಣಗಳು ಕಳವಾಗಿದ್ದು, ಒಟ್ಟು ಮೌಲ್ಯ ರೂ 6,79,000/- ಆಗಿರುತ್ತದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆ ಅ ಕ್ರ 17/2025 ಕಲಂ: 303(2) ಬಿಎನ್ ಎಸ್ 2023ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಬಂದಾರು : ಶಾಸಕ ಹರೀಶ್ ಪೂಂಜರಿಂದ ಬೈಪಾಡಿ ಸರ್ಕಲ್ ಬಳಿ ರಿಕ್ಷಾ ತಂಗುದಾಣ ಲೋಕಾರ್ಪಣೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳಿಗೆ “ಹೆಜ್ಜೆಗೊಂದು ಸ್ಫೂರ್ತಿ” ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

Suddi Udaya

ಯಾವುದೇ ನೋಟೀಸು ನೀಡದೆ, ಕಾರಣವಿಲ್ಲದೆ ಏಕಾಏಕಿ ಗೃಹರಕ್ಷಕದಳದ ಘಟಕಾಧಿಕಾರಿಯನ್ನು ಬದಲಾವಣೆ ಮಾಡಿರುವುದು ಯಾವ ನ್ಯಾಯ: ನಾನು ಯಾವುದೇ ತಪ್ಪನ್ನು ಮಾಡಿಲ್ಲ, ಜಿಲ್ಲೆಯ ಆದೇಶವನ್ನು ದುರುಪಯೋಗ ಮಾಡಿಲ್ಲ 36 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನನಗೆ ನ್ಯಾಯ ಕೊಡಿ : ಜಯಾನಂದ ಲಾಯಿಲ

Suddi Udaya

ಶಿಶಿಲದಲ್ಲಿ ನರೇಂದ್ರ ಮೋದಿಯವರ ಪರಿಕಲ್ಪನೆಯಂತೆ ಒಂಬತ್ತು ಜನ ಮಹಿಳೆಯರಿಂದ ಪ್ರಥಮ ಮತದಾನ

Suddi Udaya

ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥ ಶಂಕರ್ ರಾವ್ ಜೆಸಿ ಭಾರತದ ರಾಷ್ಟ್ರೀಯ ಸಂಯೋಜಕರಾಗಿ ಆಯ್ಕೆ

Suddi Udaya
error: Content is protected !!