25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳಕ್ಕೆ ಬಂದಿದ್ದ ಮಹಿಳೆಯ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

ಬೆಳ್ತಂಗಡಿ: ಧರ್ಮಸ್ಥಳಕ್ಕೆ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾದ ಘಟನೆ ಮೇ 3 ರಂದು ನಡೆದಿದೆ.

ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಲತಾ ಎಂಬ ಮಹಿಳೆ ಮೇ 02 ರಂದು ಆಂಧ್ರಪ್ರದೇಶದ ನೆಲ್ಲೂರು ನಿಂದ ಒಂದು ಬಾಡಿಗೆ ಇನ್ನೋವಾ ಕಾರಿನಲ್ಲಿ ಹೊರಟು ಮೇ 03 ರಂದು ಸಂಜೆ 05-00 ಘಂಟೆಗೆ ಧರ್ಮಸ್ಥಳಕ್ಕೆ ತಲುಪಿರುತ್ತಾರೆ. ದೇವರ ದರ್ಶನಕ್ಕೆ ಹೋಗುವ ಮೊದಲು ಲತಾ ಅವರು ಕಾರ್ಯಕ್ರಮಕ್ಕೆಂದು ಜೊತೆಯಲ್ಲಿ ತಂದಿದ್ದ ಚಿನ್ನಾಭರಣಗಳಾದ ಬ್ರಾಸ್ ಲೈಟ್, ಚಿನ್ನದ ಚೈನ್, ನೆಕ್ಲೆಸ್ ನ್ನು ವ್ಯಾನಿಟಿಕ್ ಬ್ಯಾಗ್ ನ ಒಳಗಡೆ ಪ್ಲಾಸ್ಟಿಕ್ ಡಬ್ಬದಲ್ಲಿ ಹಾಕಿ ಬ್ಯಾಗ್ ನಲ್ಲಿ ಇಟ್ಟುಕೊಂಡು ದೇವರ ದರ್ಶನವನ್ನು ಮುಗಿಸಿ ಹೊರಡುವ ಸಮಯದಲ್ಲಿ ಬ್ಯಾಗನ್ನು ನೋಡಿದಾಗ ವ್ಯಾನಿಟಿಕ್ ಬ್ಯಾಗಿನ ಜಿಪ್ಪು ತೆರೆದಿದ್ದು. ಬ್ಯಾಗ್ ನ ಒಳಗಡೆ ನೋಡಿದಾಗ ಬ್ಯಾಗ್ ನ ಒಳಗಡೇ ಪ್ಲಾಸ್ಟಿಕ್ ಬಾಕ್ಸಲ್ಲಿ ಇಟ್ಟಿದ್ದ 97 ಗ್ರಾಂ ತೂಕದ ಚಿನ್ನಾಭರಣಗಳು ಕಳವಾಗಿದ್ದು, ಒಟ್ಟು ಮೌಲ್ಯ ರೂ 6,79,000/- ಆಗಿರುತ್ತದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆ ಅ ಕ್ರ 17/2025 ಕಲಂ: 303(2) ಬಿಎನ್ ಎಸ್ 2023ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಪಣಕಜೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಗ್ನಿವೀರ್ ಕುರಿತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಬಾರ್ಯ : ಸುಂದರ ನೂರಿತ್ತಾಯ ಹೃದಯಾಘಾತದಿಂದ ನಿಧನ

Suddi Udaya

ಕಳೆಂಜ: ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಮತ್ತು ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಚರಣೆ

Suddi Udaya

ಮಿತ್ತಬಾಗಿಲು ಬಿ.ಕೆ ದೇವರಾಯರಿಗೆ ರೈತಪೀಠ ಪ್ರಶಸ್ತಿ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
error: Content is protected !!