23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದಿಂದ ಮನೆ ದುರಸ್ತಿ ಕಾರ್ಯ

ಮಡಂತ್ಯಾರು: ಇತ್ತೀಚೆಗೆ ಬೀಸಿದ ಭಾರಿ ಗಾಳಿ ಮಳೆಗೆ ಪಡಂಗಡಿಯ ಬಂಟ ಮಹಿಳೆಯ ಮನೆಯು ಸಂಪೂರ್ಣ ಹಾನಿಯಾಗಿದ್ದು ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದಿಂದ ಸುಮಾರು ರೂ. ಒಂದು ಲಕ್ಷ ವೆಚ್ಚದಲ್ಲಿ ಮಹಿಳೆಯ ಮನೆ ರಿಪೇರಿ ಮಾಡಿಕೊಟ್ಟು ಮಾದರಿಯಾಗಿದ್ದಾರೆ.

ಕಳೆದ ಫೆಬ್ರವರಿ ತಿಂಗಳಲ್ಲಿ ಬೀಸಿದ ಅನಿರೀಕ್ಷಿತ ಗಾಳಿ ಮಳೆಗೆ ಪಡಂಗಡಿ ಗ್ರಾಮದ ಕೆಲವು ಮನೆಗಳಿಗೆ ಹಾನಿಯಾಗಿತ್ತು. ಈ ಪೈಕಿ ಬಂಟ ಮಹಿಳೆ ಶ್ರೀಮತಿ ಸೇಸಮ್ಮ ಶೆಟ್ಟಿ ಮನೆಯ ಸಿಮೆಂಟ್ ಶೀಟ್ ಗಳು ಸಂಪೂರ್ಣವಾಗಿ ಗಾಳಿಗೆ ಹಾರಿ ಹೋಗಿ ಅಪಾರ ನಷ್ಟ ಉಂಟಾಗಿತ್ತು ಈ ಬಗ್ಗೆ ತಿಳಿದ ಪಡಂಗಡಿ ಗ್ರಾಮ ಸಮಿತಿಯ ಅಧ್ಯಕ್ಷ ದಿವಾಕರ ಶೆಟ್ಟಿ ಹಂಕರಜಾಲ್, ಮಡಂತ್ಯಾರ್ ವಲಯ ಅಧ್ಯಕ್ಷ ದಿವಾಕರ ಶೆಟ್ಟಿ ಕಂಗ್ಗಿತ್ತಿಲು, ವಲಯದ ಕಾರ್ಯದರ್ಶಿ ಹರ್ಷ ನಾರಾಯಣ ಶೆಟ್ಟಿ, ನೆತ್ತರ ಹಾಗೂ ಕೆಲವು ಬಂಟ ಯುವಕರೊಂದಿಗೆ ಅನಾಹುತ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಶ್ರೀಮತಿ ಸೇಸಮ್ಮ ಶೆಟ್ಟಿ ಅವರ ಸಮಸ್ಯೆಗೆ ಸ್ಪಂದಿಸಿದ ಮಡಂತ್ಯಾರ್ ವಲಯ ಬಂಟರ ಸಂಘದವರು ಮನೆ ದುರಸ್ತಿ ಕಾಮಗಾರಿಯನ್ನು ಕೈಗೆತ್ತಿಕೊಂಡರು. ಕೇವಲ 45 ದಿನಗಳ ಅವಧಿಯೊಳಗೆ, ಅಡುಗೆ ಕೋಣೆ, ಗ್ಯಾಸ್ ಕನೆಕ್ಷನ್, ಶೌಚಾಲಯ, ಟೈಲ್ಸ್ ಹಾಕಿದ ನೆಲ, ಇತ್ಯಾದಿ ಸೌಕರ್ಯಗಳನ್ನು ಒಳಗೊಂಡ, ಸುಣ್ಣ ಬಣ್ಣ ಬಳಿದ ಚಿಕ್ಕದಾದ ಸುಂದರ ಮನೆಯೊಂದನ್ನು ನಿರ್ಮಿಸಿ ಕೊಟ್ಟರು. ಮಾತ್ರವಲ್ಲದೆ ಎ. 23 ರಂದು ಗೃಹಪ್ರವೇಶ ಕಾರ್ಯಕ್ರಮವನ್ನೂ ನಡೆಸಿಕೊಟ್ಟು ಸಂಭ್ರಮಿಸಿದರು.

ಶ್ರೀಮತಿ ದಿವ್ಯ ಶೆಟ್ಟಿ, ಗುಜೊಟ್ಟು ಇವರ ಅಧ್ಯಕ್ಷತೆಯ ವಲಯ ಬಂಟರ ಮಹಿಳಾ ಘಟಕದವರು ಸಂಗ್ರಹಿಸಿ ಕೊಟ್ಟು ಸಹಕರಿಸಿದರು.

Related posts

ವೇಣೂರಿನಲ್ಲಿ ಈದ್ ಮಿಲಾದ್ ಆಚರಣೆ

Suddi Udaya

ಉಜಿರೆ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ಮಾಲಕ ಬಾಲಕೃಷ್ಣ ಶೆಣೈ ಹೃದಯಾಘಾತದಿಂದ ನಿಧನ

Suddi Udaya

ಎಸ್.ಡಿ.ಎಂ ಕಾಲೇಜಿನಲ್ಲಿ ‘ಎಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ; ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ: ದಿ. ಪ್ರೊ. ಎಸ್. ಪ್ರಭಾಕರ್ ರವರಿಗೆ ನುಡಿನಮನ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ

Suddi Udaya

ಶ್ರೀ ಧ.ಮ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ: ಚಾಲಕ ಪರಾರಿ; ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

Suddi Udaya
error: Content is protected !!