28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಂಗಳೂರು ವಿ. ವಿ. ಅಂತರ್ ಕಾಲೇಜು ಪುರುಷರ ಕ್ರಿಕೆಟ್: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಸತತ ಮೂರನೇ ಬಾರಿಗೆ ಚಾಂಪಿಯನ್

ಬೆಳ್ತಂಗಡಿ: ಕೆನರಾ ಕಾಲೇಜು ಮಂಗಳೂರು ಇದರ ಆಶ್ರಯದಲ್ಲಿ ಮಂಗಳೂರಿನ ನೆಹರೂ ಮೈದಾನದಲ್ಲಿ ಮೂಲ್ಕಿ ದಯಾನಂದ್ ಕಾಮತ್ ಮೆಮೋರಿಯಲ್ ಟ್ರೋಫಿಗಾಗಿ ನಡೆದ ಮಂಗಳೂರು ವಿ. ವಿ. (ಮಂಗಳೂರು ವಲಯ) ಅಂತರ್ಕಾಲೇಜು ಪುರುಷರ ಕ್ರಿಕೆಟ್ ಪಂದ್ಯಾಕೂಟದಲ್ಲಿ ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜು ತಂಡವು ಸತತ ಮೂರನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸುವುದರೊಂದಿಗೆ ಹ್ಯಾಟ್ರಿಕ್ ಸಾಧನೆ ಮಾಡಿದೆ.

ಎಸ್. ಡಿ. ಎಂ. ಸಿ. ಬಿ. ಎಂ. ವಿರುದ್ಧವಾಗಿ ನಡೆದ ಫೈನಲ್ ಕಾದಾಟದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದು ಕೊಂಡ ಎಸ್. ಡಿ. ಎಂ. ತಂಡವು 78 ರನ್ನು ಗಳಿಗೆ ಆಲ್ ಔಟ್ ಆಯಿತು. ಸೇಕ್ರೆಡ್ ಹಾರ್ಟಿನ ಶಿವಾoಶು 3 ವಿಕೆಟ್ ಪಡೆದರೆ ಸ್ವಸ್ತಿಕ್, ನಯನ್, ವಿಕಾಸ್ ಮತ್ತು ತುಷಾರ್ ತಲಾ ಒಂದು ವಿಕೆಟ್ ಪಡೆದರು.
79 ರನ್ನು ಗಳ ಗುರಿಪಡೆದ ಸೇಕ್ರೆಡ್ ಹಾರ್ಟ್ ತಂಡವು 10.1 ಓವರುಗಳಲ್ಲಿ 5 ವಿಕೆಟಿಗೆ ಗುರಿಮುಟ್ಟಿತು. ತಂಡದ ಪರವಾಗಿ ನಯನ್ 39 (29) ಹಾಗೂ ನೂತನ್ 28 (18) ರನ್ನುಗಳಿಸಿದರು.


ಸರಣಿಯುದ್ಧಕ್ಕೂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಸೇಕ್ರೆಡ್ ಹಾರ್ಟ್ ನ ನಯನ್ ಸರಣಿಯ ಉತ್ತಮ ಬ್ಯಾಟ್ಸಮನ್ ಪ್ರಶಸ್ತಿ ಪಡೆದರು. ಫೈನಲ್ ನಲ್ಲಿ ಹ್ಯಾಟ್ರಿಕ್ ವಿಕೆಟ್ ಕಬಲಳಿಸಿದ ಎಸ್. ಡಿ. ಎಂ. ನ ರೆಹನ್ ಉತ್ತಮ ಬೌಲರ್ ಪ್ರಶಸ್ತಿ ಪಡೆದರೆ. ಫೈನಲ್ ನಲ್ಲಿ 3 ವಿಕೆಟ್ ಕಿತ್ತ ಸೇಕ್ರೆಡ್ ಹಾರ್ಟ್ ಕಾಲೇಜಿನ ಶಿವಾOಶು ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Related posts

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳ ಕಾಲಸೇವೆಯನ್ನು ಸಲ್ಲಿಸಿ ನಿವೃತ್ತಿಗೊಂಡು ತವರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರನ್ನು ಸ್ವಾಗತಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿ ನೀಟ್ ಟಾಪರ್ 720 ಅಂಕಗಳ ಪೈಕಿ 710 ಪಡೆದ ಪ್ರಜ್ವಲ್ ಗೆ ಸಂಸ್ಥೆಯ ವತಿಯಿಂದ ರೂ. 10 ಲಕ್ಷ ಕ್ಯಾಶ್ ಪ್ರೈಜ್ ಜೊತೆಗೆ ಗೌರವಾರ್ಪಣೆ

Suddi Udaya

ಲಾಯಿಲ: ರಸ್ತೆ ಬದಿಗೆ ಬಿದ್ದ ಲಾರಿ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಂ ಪತ್ರಿಕೋದ್ಯಮ ವಿಭಾಗದ ಎಚ್.ಒ.ಡಿ. ಭಾಸ್ಕರ್ ಹೆಗ್ಡೆ ಅವರ ಪತ್ನಿ ಶ್ರೀಮತಿ ಸುವರ್ಣ ಹೆಗ್ಡೆ ಹೃದಯಾಘಾತದಿಂದ ನಿಧನ

Suddi Udaya
error: Content is protected !!