24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳಕ್ಕೆ ಬಂದಿದ್ದ ಮಹಿಳೆಯ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

ಬೆಳ್ತಂಗಡಿ: ಧರ್ಮಸ್ಥಳಕ್ಕೆ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನವಾದ ಘಟನೆ ಮೇ 3 ರಂದು ನಡೆದಿದೆ.

ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಲತಾ ಎಂಬ ಮಹಿಳೆ ಮೇ 02 ರಂದು ಆಂಧ್ರಪ್ರದೇಶದ ನೆಲ್ಲೂರು ನಿಂದ ಒಂದು ಬಾಡಿಗೆ ಇನ್ನೋವಾ ಕಾರಿನಲ್ಲಿ ಹೊರಟು ಮೇ 03 ರಂದು ಸಂಜೆ 05-00 ಘಂಟೆಗೆ ಧರ್ಮಸ್ಥಳಕ್ಕೆ ತಲುಪಿರುತ್ತಾರೆ. ದೇವರ ದರ್ಶನಕ್ಕೆ ಹೋಗುವ ಮೊದಲು ಲತಾ ಅವರು ಕಾರ್ಯಕ್ರಮಕ್ಕೆಂದು ಜೊತೆಯಲ್ಲಿ ತಂದಿದ್ದ ಚಿನ್ನಾಭರಣಗಳಾದ ಬ್ರಾಸ್ ಲೈಟ್, ಚಿನ್ನದ ಚೈನ್, ನೆಕ್ಲೆಸ್ ನ್ನು ವ್ಯಾನಿಟಿಕ್ ಬ್ಯಾಗ್ ನ ಒಳಗಡೆ ಪ್ಲಾಸ್ಟಿಕ್ ಡಬ್ಬದಲ್ಲಿ ಹಾಕಿ ಬ್ಯಾಗ್ ನಲ್ಲಿ ಇಟ್ಟುಕೊಂಡು ದೇವರ ದರ್ಶನವನ್ನು ಮುಗಿಸಿ ಹೊರಡುವ ಸಮಯದಲ್ಲಿ ಬ್ಯಾಗನ್ನು ನೋಡಿದಾಗ ವ್ಯಾನಿಟಿಕ್ ಬ್ಯಾಗಿನ ಜಿಪ್ಪು ತೆರೆದಿದ್ದು. ಬ್ಯಾಗ್ ನ ಒಳಗಡೆ ನೋಡಿದಾಗ ಬ್ಯಾಗ್ ನ ಒಳಗಡೇ ಪ್ಲಾಸ್ಟಿಕ್ ಬಾಕ್ಸಲ್ಲಿ ಇಟ್ಟಿದ್ದ 97 ಗ್ರಾಂ ತೂಕದ ಚಿನ್ನಾಭರಣಗಳು ಕಳವಾಗಿದ್ದು, ಒಟ್ಟು ಮೌಲ್ಯ ರೂ 6,79,000/- ಆಗಿರುತ್ತದೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆ ಅ ಕ್ರ 17/2025 ಕಲಂ: 303(2) ಬಿಎನ್ ಎಸ್ 2023ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಪ್ರ. ಕಾರ್ಯದರ್ಶಿಯಾಗಿ ಕೆ. ಬಾಲಕೃಷ್ಣ ಗೌಡ ಕಲ್ಲಾಜೆ ಆಯ್ಕೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ವಿಶ್ವಕರ್ಮ ಸಹಕಾರ ಬ್ಯಾಂಕಿನ ಉಜಿರೆ ಶಾಖೆಯ ವತಿಯಿಂದ “ಸ್ವಚ್ಛತಾ ಹೀ ಸೇವಾ” : ದೇಶಾದ್ಯಂತ ಹೆಚ್ಚುತ್ತಿದೆ ಸ್ವಚ್ಛತೆಯ ಜಾಗೃತಿ: ಪ್ರತಾಪಸಿಂಹ ನಾಯಕ್‌

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಹೈನುಗಾರಿಕೆ ತರಬೇತಿಯ ಸಮಾರೋಪ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದಿಂದ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!