May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಟ್ಲಡ್ಕ ಮದ್ರಸದಲ್ಲಿ ಪುಸ್ತಕ ವಿತರಣೆ ಕಾರ್ಯಕ್ರಮ

ಬಂದಾರು: ಇಲ್ಲಿನ ಬಟ್ಲಡ್ಕ ಪೇರಲ್ತಪಲಿಕೆ ಮದ್ರಸ ಹಾಗೂ ಬಟ್ಲಡ್ಕ ಮದ್ರಸ ವಿದ್ಯಾರ್ಥಿಗಳಿಗೆ ಸಲೀಂ ಬಟ್ಲಡ್ಕ ಇವರ ಮರಣ ಹೊಂದಿದ ತಂದೆಯ ಹೆಸರಿನಲ್ಲಿ ಕಿತಾಬ್ ವಿತರಣೆ ಕಾರ್ಯಕ್ರಮ ಬಹು| ಆರಿಫ್ ಮದನಿ ಖತೀಬ್ ಜುಮಾ ಮಸೀದಿ ಬಟ್ಲಡ್ಕ ಇವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಜುಮಾ ಮಸೀದಿ ಬಟ್ಲಡ್ಕ ಇದರ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಬಟ್ಲಡ್ಕ ಹಿತವಚನ ನುಡಿದರು. ಅಧ್ಯಕ್ಷ ಮುಹಮ್ಮದ್ ಬಂದಾರು ಸಾಂದರ್ಭಿಕವಾಗಿ ಮಾತನಾಡಿದರು. ಖತೀಬ್ ಉಸ್ತಾದ್ ಬಹು| ಮುಹಮ್ಮದ್ ಆರಿಫ್ ಮದನಿ ಉಚಿತವಾಗಿ ನೀಡಿದ (ಪುಸ್ತಕ)ಕಿತಾಬ್ ಸಲೀಂ ಬಟ್ಲಡ್ಕ ಇವರ ತಂದೆಗೆ ಪರಲೋಕದಲ್ಲಿ ಉನ್ನತ ಸ್ಥಾನ ನೀಡಲಿ ಎಂದು ದುವಾ ನೆರವೇರಿಸಿದರು. ಮಸೀದಿ ಮದ್ರಸ ಇನ್ನಿತರ ಯಾವುದೇ ಕಾರ್ಯಗಳಿಗೆ ಮುಂದೆ ನಿಂತು ಸಹಾಯ ನೀಡುವ ಸಲೀಂ ಬಟ್ಲಡ್ಕ ಇವರನ್ನು ಖತೀಬರು ಅಭಿನಂದಿಸಿದರು.


ಕಾರ್ಯಕ್ರಮದಲ್ಲಿ ಜಮಾಅತ್ ಕೋಶಾಧಿಕಾರಿ ಈ‌ಸುಬು ಪೇರಲ್ತಪಲಿಕೆ, ಅಬ್ದುಲ್ಲಾ ಬಟ್ಲಡ್ಕ, ಇಸ್ಮಾಯಿಲ್ ಬಟ್ಲಡ್ಕ ಹಾಗೂ ಎರಡು ಮದ್ರಸಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ನಡ ಸ.ಪ.ಪೂ. ಕಾಲೇಜು ವಾರ್ಷಿಕ ಕ್ರೀಡಾಕೂಟ

Suddi Udaya

ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ಶಾಖೆ ವತಿಯಿಂದ ಪ.ಪಂ ಅಧ್ಯಕ್ಷ ಜಯಾನಂದ ಗೌಡರಿಗೆ ಅಭಿನಂದನೆ

Suddi Udaya

ಕೊಯ್ಯೂರು: ಕೋರಿಯಾರು ವಾತ್ಸಲ್ಯ ಮನೆಯ ಗೋಪಾಲಕೃಷ್ಣ ಶರ್ಮ ನಿಧನ

Suddi Udaya

ಸೆ.26: ಕೊಲ್ಲಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯಿಂದ ಭಕ್ತರ ಸಭೆ

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ತಾಲೂಕಿನ ಗ್ರಾ.ಪಂ. ಗಳ ಪಿಡಿಒ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳಿಗೆ ಮಾಹಿತಿ

Suddi Udaya

ಜೇಸಿಐ ವಲಯ ಸಮ್ಮೇಳನ: ಜೆಸಿಐ ಬೆಳ್ತಂಗಡಿ ಮಂಜುಶ್ರೀಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!