May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಂಗಳೂರು ವಿ. ವಿ. ಅಂತರ್ ಕಾಲೇಜು ಪುರುಷರ ಕ್ರಿಕೆಟ್: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಸತತ ಮೂರನೇ ಬಾರಿಗೆ ಚಾಂಪಿಯನ್

ಬೆಳ್ತಂಗಡಿ: ಕೆನರಾ ಕಾಲೇಜು ಮಂಗಳೂರು ಇದರ ಆಶ್ರಯದಲ್ಲಿ ಮಂಗಳೂರಿನ ನೆಹರೂ ಮೈದಾನದಲ್ಲಿ ಮೂಲ್ಕಿ ದಯಾನಂದ್ ಕಾಮತ್ ಮೆಮೋರಿಯಲ್ ಟ್ರೋಫಿಗಾಗಿ ನಡೆದ ಮಂಗಳೂರು ವಿ. ವಿ. (ಮಂಗಳೂರು ವಲಯ) ಅಂತರ್ಕಾಲೇಜು ಪುರುಷರ ಕ್ರಿಕೆಟ್ ಪಂದ್ಯಾಕೂಟದಲ್ಲಿ ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜು ತಂಡವು ಸತತ ಮೂರನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸುವುದರೊಂದಿಗೆ ಹ್ಯಾಟ್ರಿಕ್ ಸಾಧನೆ ಮಾಡಿದೆ.

ಎಸ್. ಡಿ. ಎಂ. ಸಿ. ಬಿ. ಎಂ. ವಿರುದ್ಧವಾಗಿ ನಡೆದ ಫೈನಲ್ ಕಾದಾಟದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದು ಕೊಂಡ ಎಸ್. ಡಿ. ಎಂ. ತಂಡವು 78 ರನ್ನು ಗಳಿಗೆ ಆಲ್ ಔಟ್ ಆಯಿತು. ಸೇಕ್ರೆಡ್ ಹಾರ್ಟಿನ ಶಿವಾoಶು 3 ವಿಕೆಟ್ ಪಡೆದರೆ ಸ್ವಸ್ತಿಕ್, ನಯನ್, ವಿಕಾಸ್ ಮತ್ತು ತುಷಾರ್ ತಲಾ ಒಂದು ವಿಕೆಟ್ ಪಡೆದರು.
79 ರನ್ನು ಗಳ ಗುರಿಪಡೆದ ಸೇಕ್ರೆಡ್ ಹಾರ್ಟ್ ತಂಡವು 10.1 ಓವರುಗಳಲ್ಲಿ 5 ವಿಕೆಟಿಗೆ ಗುರಿಮುಟ್ಟಿತು. ತಂಡದ ಪರವಾಗಿ ನಯನ್ 39 (29) ಹಾಗೂ ನೂತನ್ 28 (18) ರನ್ನುಗಳಿಸಿದರು.


ಸರಣಿಯುದ್ಧಕ್ಕೂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಸೇಕ್ರೆಡ್ ಹಾರ್ಟ್ ನ ನಯನ್ ಸರಣಿಯ ಉತ್ತಮ ಬ್ಯಾಟ್ಸಮನ್ ಪ್ರಶಸ್ತಿ ಪಡೆದರು. ಫೈನಲ್ ನಲ್ಲಿ ಹ್ಯಾಟ್ರಿಕ್ ವಿಕೆಟ್ ಕಬಲಳಿಸಿದ ಎಸ್. ಡಿ. ಎಂ. ನ ರೆಹನ್ ಉತ್ತಮ ಬೌಲರ್ ಪ್ರಶಸ್ತಿ ಪಡೆದರೆ. ಫೈನಲ್ ನಲ್ಲಿ 3 ವಿಕೆಟ್ ಕಿತ್ತ ಸೇಕ್ರೆಡ್ ಹಾರ್ಟ್ ಕಾಲೇಜಿನ ಶಿವಾOಶು ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಸ್ಪೂರ್ತಿ 2K25 ಕಾಮರ್ಸ್ ಫೆಸ್ಟ್

Suddi Udaya

ಶಿಕ್ಷಣ ಸಂಯೋಜಕರಾಗಿ ಎಡ್ವರ್ಡ್ ಡಿಸೋಜ ಆಯ್ಕೆ

Suddi Udaya

ಆರಂಬೋಡಿ: ಧನ್ಯಶ್ರೀ ಕೆ-ಮನೋಜ್ ಶೆಟ್ಟಿ ಐತೇರಿರವರ ಪುತ್ರ ಜಸ್ಟೀಕ್ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಸರಕಾರಿ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಬೆಳಾಲಿನಲ್ಲಿ, ಹದಿನೆಂಟು ದಿನಗಳ ಭಗವದ್ಗೀತೆ ತರಗತಿಯ ಸಮಾರೋಪ

Suddi Udaya

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya
error: Content is protected !!