25.7 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಶಾಲಾ ಮಕ್ಕಳಿಗೆ ಬೇಸಿಗೆ ಶಿಬಿರ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಅರಿವು ಕೇಂದ್ರ ಮತ್ತು ಡಿಜಿಟಲ್ ಗ್ರಂಥಾಲಯ ಇದರ ವತಿಯಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲಾ ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಮೇ 05ರಂದು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸವಿತಾ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಹೇಮಾವತಿ ವಲಯ ತರಬೇತುದಾರರು ಜೆಸಿಐ ಇಂಡಿಯಾ ಇವರು ಮಕ್ಕಳಿಗೆ ವಿವಿಧ ಚಟುವಟಿಕೆಯನ್ನು ನೀಡುವುದರ ಮೂಲಕ ಬೇಸಿಗೆ ಶಿಬಿರವನ್ನು ಯಶಸ್ವಿಯಾಗಿ ನಡೆಸಿದರು. ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿ ಮತ್ತು ಸದಸ್ಯರಾದ ಶ್ರೀಮತಿ ಸುಮಲತಾ, ಚಂದ್ರರಾಜ ಎಂ, ಶ್ರೀಮತಿ ದೀಪಿಕಾ ಹಾಗೂ ಗ್ರಂಥಪಾಲಕಿ ಶ್ರೀಮತಿ ಚಂದ್ರಾವತಿಯವರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿ ನಿರ್ಮಲ್ ಕುಮಾರ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ಗಣೇಶ್ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು. ಈ ಬೇಸಿಗೆ ಶಿಬಿರದ ಆರಂಭದ ದಿನದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲಾ ಮಕ್ಕಳು ವಿವಿಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದರು.

Related posts

ಯಾವುದೇ ದಾಖಲಾತಿ ಇಲ್ಲದೆ ಅಕ್ರಮ ಮರಳು ಸಾಗಟ: ಪತ್ತೆ

Suddi Udaya

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

Suddi Udaya

ಸಂತ ತೆರೇಸಾ ಸಂಯುಕ್ತ ಪ.ಪೂ. ಕಾಲೇಜಿನಲ್ಲಿ ಪೋಷಕರಿಗಾಗಿ ಹದಿಹರೆಯದವರ ಸಬಲೀಕರಣ ಮಾಹಿತಿ ಕಾರ್ಯಾಗಾರ

Suddi Udaya

ನಡ ಪರಿಸರದಲ್ಲಿ ಎರಡು ದಿನಗಳಲ್ಲಿ 4 ಕಾಡಂದಿಗಳ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ; ಮಿದುಳು ಜ್ವರದಿಂದ ಸಾವು ಸ್ಥಳೀಯರ ಶಂಕೆ

Suddi Udaya

ಮುಂಡಾಜೆ : ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದ ಓಮಿನಿ ಕಾರು

Suddi Udaya

ವೇಣೂರು: ಬಜಿರೆ ಬತ್ತಾರುನಲ್ಲಿ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಸಂಪನ್ನ

Suddi Udaya
error: Content is protected !!