30.7 C
ಪುತ್ತೂರು, ಬೆಳ್ತಂಗಡಿ
April 24, 2026
ಆರೋಗ್ಯ

ಗ್ರಾಮ ಪಂಚಾಯತ್ ತಣ್ಣೀರು ಪಂತ ಹಾಗೂ ಅರಿವು ಕೇಂದ್ರದ ಸಹಭಾಗಿತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ.

ತಣ್ಣೀರುಪ0ತ ಗ್ರಾಮ ಪಂಚಾಯತ್ ತಣ್ಣೀರು ಪಂತ ಹಾಗೂ ಅರಿವು ಕೇಂದ್ರದ ಸಹಭಾಗಿತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಲಾಯಿತು. ಒಂದು ವಾರದ ಕಾಲ ನಡೆಯುವ ಈ ಶಿಬಿರದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಹೇಮಾವತಿ ಹಾಗೂ ಮಕ್ಕಳಿಂದ ದೀಪ ಬೆಳಗಿಸುವುದರ ಮೂಲಕ ಮೇ 6ರಂದು ನೆರವೇರಿಸಲಾಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಶ್ರವಣ್ ಕುಮಾರ್ ಇವರು ಅತಿಥಿಗಳನ್ನು ಸ್ವಾಗತಿಸಿ ಶಿಬಿರದ ಉದ್ದೇಶದ ಬಗ್ಗೆ ವಿವರಿಸಿದರು ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯದರ್ಶಿ ಗ್ರಂಥಾಲಯದ ಸಲಹಾ ಸಮಿತಿ ಸದಸ್ಯರು ಪಂಚಾಯತ್ ಸಿಬ್ಬಂದಿ ವರ್ಗ ಪುನರ್ವಸತಿ ಕಾರ್ಯಕರ್ತರು ಮತ್ತು ಎಂಬಿಕೆ ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದು ಸಹಕರಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಮೋಹಿನಿ ಇವರು ಕಾರ್ಯಕ್ರಮ ನಿರೂಪಿಸಿ ಕೊನೆಯಲ್ಲಿ ಪಂಚಾಯತ್ ಕಾರ್ಯದರ್ಶಿಯವರು ಧನ್ಯವಾದ ವಿತ್ತರು. ನಂತರ ಈ ದಿನದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ಪ್ರವೀಣ್ ಇವರು ಮಕ್ಕಳಿಗೆ ವಿವಿಧ ಬಗ್ಗೆಯ ಕ್ರಾಫ್ಟ್ ಚಟುವಟಿಕೆಗಳನ್ನು ಹಾಗೂ ವಿವಿಧ ಮನೋರಂಜನ ಆಟಗಳನ್ನು ಹಮ್ಮಿಕೊಂಡಿದ್ದು, ಮಕ್ಕಳು ಉತ್ಸಾಹದಿಂದ ಪಾಲ್ಗೊಂಡರು. ಈ ಶಿಬಿರವು ಮೇ.12 ರವರೆಗೆ ಜರಗಲಿದೆ.

Related posts

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಂದಬೆಟ್ಟು ಇಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ನೂತನ “ವೆಂಟಿಲೇಟರ್” ಉದ್ಘಾಟನೆ

Suddi Udaya

ಗುಂಡೂರಿಯ ‌ಶ್ರೀಗುರುಚೈತನ್ಯ ಸೇವಾ ಶ್ರಮದಲ್ಲಿ ವೇಣೂರಿನ ಡಾ| ಕೆ.ರವೀಂದ್ರ ಪ್ರಸಾದ್ ಇವರಿಂದ ವೈದ್ಯರ ಕೊಠಡಿಯ ಉದ್ಘಾಟನೆ

Suddi Udaya

ಉಚಿತ ರಕ್ತ ತಪಾಸಣೆ ಹಾಗೂ ಅರೋಗ್ಯ ತಪಾಸಣಾ ಶಿಬಿರ

Suddi Udaya

ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟ (ರಿ) ಬೆಳ್ತಂಗಡಿ- ಆರೋಗ್ಯ ಇಲಾಖೆ ಭೇಟಿ ಹಾಗೂ ಪರಿಸರ ದಿನಾಚರಣೆ

Suddi Udaya

ಅನರ್ಹ ಬಿಪಿಎಲ್ ಕಾರ್ಡ್ ಪತ್ತೆ ಪ್ರಕ್ರಿಯೆಗೆ ಇಲಾಖೆಯಿಂದ ಕ್ರಮ: ತಾಲೂಕಿನಲ್ಲಿ 7,024 ಬಿಪಿಎಲ್ ಪಡಿತರ ಚೀಟಿಗಳ ಪರಿಶೀಲನೆ: 53 ಕುಟುಂಬಗಳ ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಪರಿವರ್ತನೆ

Suddi Udaya
error: Content is protected !!