23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನಾ ದಿನಾಚರಣೆ

ಬೆಳ್ತಂಗಡಿ : ವಾಣಿ ಕಾಲೇಜು ಹಳೆಕೋಟೆ ಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಮತ್ತು ವಾಣಿ ಕಾಲೇಜಿನ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು ಸ್ಟಾಪನಾ ದಿನಾಚರಣೆ ಜರಗಿತು.

ರಸಾನುಭವ ಮತ್ತು ರಸಾಭಿವ್ಯಕ್ತಿಗೆ ಭಾಷೆ ಬೇಕು. ನಮಗೆ ನಮ್ಮದೇ ಆದ ಅನನ್ಯತೆಯನ್ನು ಉಳಿಸಿಕೊಳ್ಳಲು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕು. ಹಿಂದೆಲ್ಲ ಕಲಿಕೆಯಲ್ಲಿದ್ದ ಮತ್ತು ಕಡಿಮೆ ಅಂಕದ ಫಲಿತಾಂಶ ಬಂದರೂ ಇರುತ್ತಿದ್ದ ಸಂತಸ ಮತ್ತು ಸಂತೃಪ್ತಿ ಈಗ ಕಲಿಕೆಯಲ್ಲೂ ಇಲ್ಲ ಮತ್ತು ನೂರು ಶೇಕಡಾ ಅಂಕದ ಫಲಿತಾಂಶ ಬಂದರೂ ಇಲ್ಲದಾಗಿದೆ. ಅದಕ್ಕೆಲ್ಲ ನಮ್ಮ ಮಾತೃ ಭಾಷಾ ಕಲಿಕೆಯ ಮತ್ತು ಸಾಹಿತ್ಯಿಕ ಓದಿನ ಕೊರತೆಯೇ ಕಾರಣ. ಸಂಸ್ಕೃತಿಯ ಉತ್ಪನ್ನವಾಗಿರುವ ಭಾಷೆಯ ಬಳಕೆ, ಸಾಹಿತ್ಯದ ಅಧ್ಯಯನ ಮತ್ತು ಓದಿನ ಅಗತ್ಯತೆ ಇಂದಿನ ಅನಿವಾರ್ಯತೆ ಎಂದು ಬೆಳ್ತಂಗಡಿ ತಾಲ್ಲೂಕು ಕ ಸಾ ಪ ದ ಅಧ್ಯಕ್ಷರು, ಕ ಸಾ ಪ ಸ್ಥಾಪನಾ ದಿನಾಚರಣೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಡಿ. ಯದುಪತಿ ಗೌಡರು ಅಭಿಪ್ರಾಯಪಟ್ಟರು.

ಮುಖ್ಯ ಭಾಷಣಕಾರರಾಗಿ ಆಗಮಿಸಿದ ವಾಣಿ ಕಾಲೇಜಿನ ಉಪನ್ಯಾಸಕರಾದ ಬೆಳ್ಳಿಯಪ್ಪ ರವರು, ಕ ಸಾ ಪ ದ ಪ್ರಸ್ತುತತೆ ಮತ್ತು ಮಹತ್ವದ ಬಗ್ಗೆ ಮಾತನಾಡುತ್ತಾ, ನಮ್ಮ ರಾಜ್ಯದಲ್ಲಿ ಕನ್ನಡ ಭಾಷೆಗೆ ತೊಂದರೆ ಮತ್ತು ಅಡ್ಡಿಗಳು ಎದುರಾದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜೊತೆ ಎಲ್ಲಾ ಕನ್ನಡಿಗರೂ ಹೋರಾಟಕ್ಕೆ ಸಿದ್ಧರಾಗಬೇಕು ಎಂದು ಕರೆ ನೀಡಿದರು.

ವಾಣಿ ಕಾಲೇಜಿನ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಕ ಸಾ ಪ ದ ಗೌರವ ಕಾರ್ಯದರ್ಶಿಗಳಾದ ರಾಮಕೃಷ್ಣ ಭಟ್ ಚೊಕ್ಕಾಡಿ ಸ್ವಾಗತಿಸಿ ವಂದಿಸಿದರು. ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಸಮಾರಂಭದ ಯಶಸ್ಸಿಗೆ ಸಹಕರಿಸಿದರು.

Related posts

ಮೇ 17-23: ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹ

Suddi Udaya

ಉಜಿರೆ ಶ್ರೀ ಧ.ಮಂ. ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ: ಚಾರ್ಮಾಡಿ, ಮುಂಡಾಜೆ ಶಿಬಿರಗಳ ಉದ್ಘಾಟನೆ

Suddi Udaya

ಚಾರ್ಮಾಡಿಯಲ್ಲಿ ವಿಳಂಬವಾಗುತ್ತಿರುವ ಮತದಾನ, ಕಾದು ಕಾದು ಸುಸ್ತಾದ ಮತದಾರರು.

Suddi Udaya

ಆರಂಬೋಡಿ ಬಂಟ್ಸ್ ಸಂಘದ ಗ್ರಾಮ ಸಮಿತಿ ಸಭೆ

Suddi Udaya

ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿ.ಹಿಂ.ಪ. ಬಜರಂಗದಳ ವತಿಯಿಂದ ಉಜಿರೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ

Suddi Udaya

ಫೆ.20-21: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ

Suddi Udaya
error: Content is protected !!