September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನಾ ದಿನಾಚರಣೆ

ಬೆಳ್ತಂಗಡಿ : ವಾಣಿ ಕಾಲೇಜು ಹಳೆಕೋಟೆ ಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಮತ್ತು ವಾಣಿ ಕಾಲೇಜಿನ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು ಸ್ಟಾಪನಾ ದಿನಾಚರಣೆ ಜರಗಿತು.

ರಸಾನುಭವ ಮತ್ತು ರಸಾಭಿವ್ಯಕ್ತಿಗೆ ಭಾಷೆ ಬೇಕು. ನಮಗೆ ನಮ್ಮದೇ ಆದ ಅನನ್ಯತೆಯನ್ನು ಉಳಿಸಿಕೊಳ್ಳಲು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕು. ಹಿಂದೆಲ್ಲ ಕಲಿಕೆಯಲ್ಲಿದ್ದ ಮತ್ತು ಕಡಿಮೆ ಅಂಕದ ಫಲಿತಾಂಶ ಬಂದರೂ ಇರುತ್ತಿದ್ದ ಸಂತಸ ಮತ್ತು ಸಂತೃಪ್ತಿ ಈಗ ಕಲಿಕೆಯಲ್ಲೂ ಇಲ್ಲ ಮತ್ತು ನೂರು ಶೇಕಡಾ ಅಂಕದ ಫಲಿತಾಂಶ ಬಂದರೂ ಇಲ್ಲದಾಗಿದೆ. ಅದಕ್ಕೆಲ್ಲ ನಮ್ಮ ಮಾತೃ ಭಾಷಾ ಕಲಿಕೆಯ ಮತ್ತು ಸಾಹಿತ್ಯಿಕ ಓದಿನ ಕೊರತೆಯೇ ಕಾರಣ. ಸಂಸ್ಕೃತಿಯ ಉತ್ಪನ್ನವಾಗಿರುವ ಭಾಷೆಯ ಬಳಕೆ, ಸಾಹಿತ್ಯದ ಅಧ್ಯಯನ ಮತ್ತು ಓದಿನ ಅಗತ್ಯತೆ ಇಂದಿನ ಅನಿವಾರ್ಯತೆ ಎಂದು ಬೆಳ್ತಂಗಡಿ ತಾಲ್ಲೂಕು ಕ ಸಾ ಪ ದ ಅಧ್ಯಕ್ಷರು, ಕ ಸಾ ಪ ಸ್ಥಾಪನಾ ದಿನಾಚರಣೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಡಿ. ಯದುಪತಿ ಗೌಡರು ಅಭಿಪ್ರಾಯಪಟ್ಟರು.

ಮುಖ್ಯ ಭಾಷಣಕಾರರಾಗಿ ಆಗಮಿಸಿದ ವಾಣಿ ಕಾಲೇಜಿನ ಉಪನ್ಯಾಸಕರಾದ ಬೆಳ್ಳಿಯಪ್ಪ ರವರು, ಕ ಸಾ ಪ ದ ಪ್ರಸ್ತುತತೆ ಮತ್ತು ಮಹತ್ವದ ಬಗ್ಗೆ ಮಾತನಾಡುತ್ತಾ, ನಮ್ಮ ರಾಜ್ಯದಲ್ಲಿ ಕನ್ನಡ ಭಾಷೆಗೆ ತೊಂದರೆ ಮತ್ತು ಅಡ್ಡಿಗಳು ಎದುರಾದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜೊತೆ ಎಲ್ಲಾ ಕನ್ನಡಿಗರೂ ಹೋರಾಟಕ್ಕೆ ಸಿದ್ಧರಾಗಬೇಕು ಎಂದು ಕರೆ ನೀಡಿದರು.

ವಾಣಿ ಕಾಲೇಜಿನ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಕ ಸಾ ಪ ದ ಗೌರವ ಕಾರ್ಯದರ್ಶಿಗಳಾದ ರಾಮಕೃಷ್ಣ ಭಟ್ ಚೊಕ್ಕಾಡಿ ಸ್ವಾಗತಿಸಿ ವಂದಿಸಿದರು. ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಸಮಾರಂಭದ ಯಶಸ್ಸಿಗೆ ಸಹಕರಿಸಿದರು.

Related posts

ತೆಕ್ಕಾರು: ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಅದ್ದೂರಿ ಮೆರವಣಿಗೆ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿ ಪ್ರತಿಭಾ ವೇದಿಕೆ, ರೋವರ್ಸ್-ರೇಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ ಮತ್ತು ಸಾಂಸ್ಕೃತಿಕ ವೇದಿಕೆ ಇವುಗಳ ಸಹಯೋಗದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಫೆ.7-10: ಶ್ರೀ ಕ್ಷೇತ್ರ ಒಟ್ಲದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಬೆಳ್ತಂಗಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ತಾಲೂಕು ಕಚೇರಿ ಎದುರು ಪ್ರತಿಭಟನೆ

Suddi Udaya

ಉಜಿರೆ: ಅಗತ್ಯ ದಾಖಲೆ ಹಾಗೂ ನಗದು ಇದ್ದ ಪರ್ಸ್ ಬಿದ್ದು ಕಳೆದುಹೋಗಿದೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಕುಣಿತ ಭಜನೆಯ ಕುರಿತು ಅವಹೇಳನ ಬರಹ : ಸೂಕ್ತ ಕಾನೂನು ಕ್ರಮಕ್ಕಾಗಿ ಕುಣಿತ ಭಜನಾ ತರಬೇತುದಾರರಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು

Suddi Udaya
error: Content is protected !!