37.1 C
ಪುತ್ತೂರು, ಬೆಳ್ತಂಗಡಿ
May 8, 2025
Uncategorized

ಮೇ 16: ಎಮ್.ಆರ್.ಪಿ.ಎಲ್ ಹಾಗೂ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಇವರ ಆಶ್ರಯದಲ್ಲಿ ” ಉಚಿತ ಆರೋಗ್ಯ ತಪಾಸಣೆ ಶಿಬಿರ

ನೆರಿಯ: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಹಾಗೂ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ “ಜನಜಾತಿಯ ಗೌರವ ದಿವಸ್.”
ವನವಾಸಿ ಜನನಾಯಕ ಅಪ್ರತಿಮ ದೇಶಭಕ್ತ “ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವದ ನೆನಪಿಗಾಗಿ ಗೌರವ ಸ್ಮರಣಾರ್ಥ”. “ಉಚಿತ ಆರೋಗ್ಯ ತಪಾಸಣೆ ಶಿಬಿರ”ವು ಮೇ 16 ರಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1:30 ರವರೆಗೆ ಸಮುದಾಯ ಭವನ ಬಾಂಜಾರುನಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಡಾ| ರುಡಾಲ್ಫ್ ನೊರೊನ್ಹಾ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ ಆಡಳಿತ ನಿರ್ದೇಶಕರು ಡಾ.ಮುರಳಿಕೃಷ್ಣ ಇರ್ವತ್ರಾಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕರು ಡಾ.ವಂದನಾ ಎಂ ಇರ್ವತ್ರಾಯ, ನೆರಿಯ ಗ್ರಾಮ ಪಂಚಾಯತ್ ಸದಸ್ಯ ಅಶೋಕ್ ಬಿ.ಎಸ್, ನವೀನ್ ಬಿ.ಎಸ್ ಬಾಂಜಾರು ಭಾಗವಹಿಸಲಿದ್ದಾರೆ.


ಶಿಬಿರದ ಉಚಿತ ಸೌಲಭ್ಯ ಗಳು:
ತಜ್ಞವೈದ್ಯರ (ಫಿಸಿಶಿಯನ್) ತಪಾಸಣೆ ಮತ್ತು ಸೂಕ್ತ ಸಲಹೆ., ರಕ್ತದೊತ್ತಡ (BP) ತಪಾಸಣೆ, ಹಿಮೋಗ್ಲೋಬಿನ್ (HB)ತಪಾಸಣೆ,
ಮಧುಮೇಹ (RBS)ತಪಾಸಣೆ, ಇಸಿಜಿ (ECG), ಶ್ವಾಸಕೋಶದ ತಪಾಸಣೆ, ಜೀವನ ಶೈಲಿ ಮತ್ತು ಪಥ್ಯ ಆಹಾರ ಬಗ್ಗೆ ಸಮಾಲೋಚನೆ.

ಶಿಬಿರದಲ್ಲಿ ಭಾಗವಹಿಸುವ ಮುಖ್ಯ ತಜ್ಞವೈದ್ಯರುಗಳಾದ ಡಾ‌.ಮುರಳಿಕೃಷ್ಣ ಇರ್ವತ್ರಾಯ, ಡಾ.ವಂದನಾ ಎಂ ಇರ್ವತ್ರಾಯ, ಡಾ.ಅಲ್ಬಿನ್ ಜೋಸೆಫ್, ಡಾ.ಮೌಲ್ಯ.

ಹೆಚ್ಚಿನ ವಿವರಗಳಿಗೆ:9483525100/8762540383

Related posts

ಬಂದಾರು : ‘ಅಕ್ಷರ ಸಿರಿ’ ಪ್ರಶಸ್ತಿ ಪುರಸ್ಕೃತ ದೈ.ಶಿ.ಶಿಕ್ಷಕ ಪ್ರಶಾಂತ್ ಸುವರ್ಣ ಅವರಿಗೆ ಭಾವನಾತ್ಮಕ ಬೀಳ್ಕೊಡುಗೆ ಸಮಾರಂಭ – ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ
ಎಕ್ಸ್‌ಪೀರಿಯ-2ಕೆ22 ರಾಜ್ಯ ಮಟ್ಟದ ವಿಜ್ಞಾನ ಮೇಳ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ-ಮೆರವಣಿಗೆ

Suddi Udaya

ಉಜಿರೆಯ ಅಂಗಡಿ ಪಕ್ಕದಲ್ಲಿ ನಿಲ್ಲಿಸಿದ್ದ ರೂ. 6.50 ಲಕ್ಷ ಮೌಲ್ಯದ ಕಾರು ಕಳವು

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನಿಂದ ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ

Suddi Udaya

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

Suddi Udaya
error: Content is protected !!