25.8 C
ಪುತ್ತೂರು, ಬೆಳ್ತಂಗಡಿ
May 7, 2025
ಆರೋಗ್ಯ

ಗ್ರಾಮ ಪಂಚಾಯತ್ ತಣ್ಣೀರು ಪಂತ ಹಾಗೂ ಅರಿವು ಕೇಂದ್ರದ ಸಹಭಾಗಿತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ.

ತಣ್ಣೀರುಪ0ತ ಗ್ರಾಮ ಪಂಚಾಯತ್ ತಣ್ಣೀರು ಪಂತ ಹಾಗೂ ಅರಿವು ಕೇಂದ್ರದ ಸಹಭಾಗಿತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಲಾಯಿತು. ಒಂದು ವಾರದ ಕಾಲ ನಡೆಯುವ ಈ ಶಿಬಿರದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಹೇಮಾವತಿ ಹಾಗೂ ಮಕ್ಕಳಿಂದ ದೀಪ ಬೆಳಗಿಸುವುದರ ಮೂಲಕ ಮೇ 6ರಂದು ನೆರವೇರಿಸಲಾಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಶ್ರವಣ್ ಕುಮಾರ್ ಇವರು ಅತಿಥಿಗಳನ್ನು ಸ್ವಾಗತಿಸಿ ಶಿಬಿರದ ಉದ್ದೇಶದ ಬಗ್ಗೆ ವಿವರಿಸಿದರು ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯದರ್ಶಿ ಗ್ರಂಥಾಲಯದ ಸಲಹಾ ಸಮಿತಿ ಸದಸ್ಯರು ಪಂಚಾಯತ್ ಸಿಬ್ಬಂದಿ ವರ್ಗ ಪುನರ್ವಸತಿ ಕಾರ್ಯಕರ್ತರು ಮತ್ತು ಎಂಬಿಕೆ ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದು ಸಹಕರಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಮೋಹಿನಿ ಇವರು ಕಾರ್ಯಕ್ರಮ ನಿರೂಪಿಸಿ ಕೊನೆಯಲ್ಲಿ ಪಂಚಾಯತ್ ಕಾರ್ಯದರ್ಶಿಯವರು ಧನ್ಯವಾದ ವಿತ್ತರು. ನಂತರ ಈ ದಿನದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ಪ್ರವೀಣ್ ಇವರು ಮಕ್ಕಳಿಗೆ ವಿವಿಧ ಬಗ್ಗೆಯ ಕ್ರಾಫ್ಟ್ ಚಟುವಟಿಕೆಗಳನ್ನು ಹಾಗೂ ವಿವಿಧ ಮನೋರಂಜನ ಆಟಗಳನ್ನು ಹಮ್ಮಿಕೊಂಡಿದ್ದು, ಮಕ್ಕಳು ಉತ್ಸಾಹದಿಂದ ಪಾಲ್ಗೊಂಡರು. ಈ ಶಿಬಿರವು ಮೇ.12 ರವರೆಗೆ ಜರಗಲಿದೆ.

Related posts

ಕೊಕ್ಕಡ: ಎಂಡೋ ಪೀಡಿತ ವಿಶೇಷ ಚೇತನರಿಗೆ ಉಚಿತ ಬಸ್ ಪಾಸ್ ವಿತರಣೆ

Suddi Udaya

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya

ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣೆ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಯೂನಿರ್ವಸಿಟಿ ರಿಜಿಸ್ಟ್ರಾರ್ ಭೇಟಿ

Suddi Udaya

ಬೆಳ್ತಂಗಡಿ: ಪೋಲಿಯೋ ಲಸಿಕಾ ಅಭಿಯಾನ: ಶೇ 95% ಗುರಿ ಸಾಧನೆ

Suddi Udaya

ಬೆಳ್ತಂಗಡಿ ತಾಲೂಕು ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಮಹಾಸಭೆ

Suddi Udaya
error: Content is protected !!