July 23, 2026
ಆರೋಗ್ಯ

ಗ್ರಾಮ ಪಂಚಾಯತ್ ತಣ್ಣೀರು ಪಂತ ಹಾಗೂ ಅರಿವು ಕೇಂದ್ರದ ಸಹಭಾಗಿತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ.

ತಣ್ಣೀರುಪ0ತ ಗ್ರಾಮ ಪಂಚಾಯತ್ ತಣ್ಣೀರು ಪಂತ ಹಾಗೂ ಅರಿವು ಕೇಂದ್ರದ ಸಹಭಾಗಿತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಲಾಯಿತು. ಒಂದು ವಾರದ ಕಾಲ ನಡೆಯುವ ಈ ಶಿಬಿರದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಹೇಮಾವತಿ ಹಾಗೂ ಮಕ್ಕಳಿಂದ ದೀಪ ಬೆಳಗಿಸುವುದರ ಮೂಲಕ ಮೇ 6ರಂದು ನೆರವೇರಿಸಲಾಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಶ್ರವಣ್ ಕುಮಾರ್ ಇವರು ಅತಿಥಿಗಳನ್ನು ಸ್ವಾಗತಿಸಿ ಶಿಬಿರದ ಉದ್ದೇಶದ ಬಗ್ಗೆ ವಿವರಿಸಿದರು ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯದರ್ಶಿ ಗ್ರಂಥಾಲಯದ ಸಲಹಾ ಸಮಿತಿ ಸದಸ್ಯರು ಪಂಚಾಯತ್ ಸಿಬ್ಬಂದಿ ವರ್ಗ ಪುನರ್ವಸತಿ ಕಾರ್ಯಕರ್ತರು ಮತ್ತು ಎಂಬಿಕೆ ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದು ಸಹಕರಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಮೋಹಿನಿ ಇವರು ಕಾರ್ಯಕ್ರಮ ನಿರೂಪಿಸಿ ಕೊನೆಯಲ್ಲಿ ಪಂಚಾಯತ್ ಕಾರ್ಯದರ್ಶಿಯವರು ಧನ್ಯವಾದ ವಿತ್ತರು. ನಂತರ ಈ ದಿನದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ಪ್ರವೀಣ್ ಇವರು ಮಕ್ಕಳಿಗೆ ವಿವಿಧ ಬಗ್ಗೆಯ ಕ್ರಾಫ್ಟ್ ಚಟುವಟಿಕೆಗಳನ್ನು ಹಾಗೂ ವಿವಿಧ ಮನೋರಂಜನ ಆಟಗಳನ್ನು ಹಮ್ಮಿಕೊಂಡಿದ್ದು, ಮಕ್ಕಳು ಉತ್ಸಾಹದಿಂದ ಪಾಲ್ಗೊಂಡರು. ಈ ಶಿಬಿರವು ಮೇ.12 ರವರೆಗೆ ಜರಗಲಿದೆ.

Related posts

ಶಿಶಿಲ: ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ನ 585 ಸೇವಾ ಯೋಜನೆಯ ಬೃಹತ್ ಉಚಿತ ಹೃದಯ ತಪಾಸಣೆ ಶಿಬಿರ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಉಚಿತ ಆರೋಗ್ಯ ತಪಾಸಣೆ ಮತ್ತು ಜಾಗೃತಿ ಶಿಬಿರದಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಕಳಿಯ ಗ್ರಾಮ ಪಂಚಾಯಿತಿನಲ್ಲಿ ವಿಶೇಷ ಟಾಸ್ಕ್ಸಫೋರ್ಸ್

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿಗೆ ಲ್ಯಾಪ್ರೋಸ್ಕೋಪಿಕ್ ಅಪೆಂಡಿಸೈಟಿಸ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
error: Content is protected !!