23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆರೋಗ್ಯ

ಗ್ರಾಮ ಪಂಚಾಯತ್ ತಣ್ಣೀರು ಪಂತ ಹಾಗೂ ಅರಿವು ಕೇಂದ್ರದ ಸಹಭಾಗಿತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ.

ತಣ್ಣೀರುಪ0ತ ಗ್ರಾಮ ಪಂಚಾಯತ್ ತಣ್ಣೀರು ಪಂತ ಹಾಗೂ ಅರಿವು ಕೇಂದ್ರದ ಸಹಭಾಗಿತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಲಾಯಿತು. ಒಂದು ವಾರದ ಕಾಲ ನಡೆಯುವ ಈ ಶಿಬಿರದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಹೇಮಾವತಿ ಹಾಗೂ ಮಕ್ಕಳಿಂದ ದೀಪ ಬೆಳಗಿಸುವುದರ ಮೂಲಕ ಮೇ 6ರಂದು ನೆರವೇರಿಸಲಾಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಶ್ರವಣ್ ಕುಮಾರ್ ಇವರು ಅತಿಥಿಗಳನ್ನು ಸ್ವಾಗತಿಸಿ ಶಿಬಿರದ ಉದ್ದೇಶದ ಬಗ್ಗೆ ವಿವರಿಸಿದರು ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯದರ್ಶಿ ಗ್ರಂಥಾಲಯದ ಸಲಹಾ ಸಮಿತಿ ಸದಸ್ಯರು ಪಂಚಾಯತ್ ಸಿಬ್ಬಂದಿ ವರ್ಗ ಪುನರ್ವಸತಿ ಕಾರ್ಯಕರ್ತರು ಮತ್ತು ಎಂಬಿಕೆ ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದು ಸಹಕರಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಮೋಹಿನಿ ಇವರು ಕಾರ್ಯಕ್ರಮ ನಿರೂಪಿಸಿ ಕೊನೆಯಲ್ಲಿ ಪಂಚಾಯತ್ ಕಾರ್ಯದರ್ಶಿಯವರು ಧನ್ಯವಾದ ವಿತ್ತರು. ನಂತರ ಈ ದಿನದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ಪ್ರವೀಣ್ ಇವರು ಮಕ್ಕಳಿಗೆ ವಿವಿಧ ಬಗ್ಗೆಯ ಕ್ರಾಫ್ಟ್ ಚಟುವಟಿಕೆಗಳನ್ನು ಹಾಗೂ ವಿವಿಧ ಮನೋರಂಜನ ಆಟಗಳನ್ನು ಹಮ್ಮಿಕೊಂಡಿದ್ದು, ಮಕ್ಕಳು ಉತ್ಸಾಹದಿಂದ ಪಾಲ್ಗೊಂಡರು. ಈ ಶಿಬಿರವು ಮೇ.12 ರವರೆಗೆ ಜರಗಲಿದೆ.

Related posts

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

Suddi Udaya

ವಾಣಿ ಪ.ಪೂ. ಕಾಲೇಜಿನಲ್ಲಿ “ಗೆಳತಿ” ಭರವಸೆಯ ನಾಳೆಗಾಗಿ ಆಪ್ತ ಸಮಾಲೋಚನ ಕಾರ್ಯಕ್ರಮ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್‌ಕಾರ್ಗೋ ಲೋಜಿಸ್ಟಿಕ್ಸ್ ಲಿ. ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

Suddi Udaya

ವಿ. ಹಿಂ. ಪ, ಬಜರಂಗದಳ ಪದ್ಮುಂಜ ಘಟಕದಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಆಂದೋಲನ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನ ಬೆಳ್ತಂಗಡಿಯಲ್ಲಿ ನಡೆದಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ 48 ದಿನಗಳ ಉಚಿತ ಯೋಗ ತರಗತಿ ಉದ್ಘಾಟನೆ

Suddi Udaya

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ದ ಆಶ್ರಯದಲ್ಲಿ ಕಣ್ಣಿನ ಉಚಿತ ತಪಾಸಣೆ

Suddi Udaya
error: Content is protected !!