22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಮೇ 16: ಎಮ್.ಆರ್.ಪಿ.ಎಲ್ ಹಾಗೂ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಇವರ ಆಶ್ರಯದಲ್ಲಿ ” ಉಚಿತ ಆರೋಗ್ಯ ತಪಾಸಣೆ ಶಿಬಿರ

ನೆರಿಯ: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಹಾಗೂ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ “ಜನಜಾತಿಯ ಗೌರವ ದಿವಸ್.”
ವನವಾಸಿ ಜನನಾಯಕ ಅಪ್ರತಿಮ ದೇಶಭಕ್ತ “ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವದ ನೆನಪಿಗಾಗಿ ಗೌರವ ಸ್ಮರಣಾರ್ಥ”. “ಉಚಿತ ಆರೋಗ್ಯ ತಪಾಸಣೆ ಶಿಬಿರ”ವು ಮೇ 16 ರಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 1:30 ರವರೆಗೆ ಸಮುದಾಯ ಭವನ ಬಾಂಜಾರುನಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಡಾ| ರುಡಾಲ್ಫ್ ನೊರೊನ್ಹಾ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ ಆಡಳಿತ ನಿರ್ದೇಶಕರು ಡಾ.ಮುರಳಿಕೃಷ್ಣ ಇರ್ವತ್ರಾಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕರು ಡಾ.ವಂದನಾ ಎಂ ಇರ್ವತ್ರಾಯ, ನೆರಿಯ ಗ್ರಾಮ ಪಂಚಾಯತ್ ಸದಸ್ಯ ಅಶೋಕ್ ಬಿ.ಎಸ್, ನವೀನ್ ಬಿ.ಎಸ್ ಬಾಂಜಾರು ಭಾಗವಹಿಸಲಿದ್ದಾರೆ.


ಶಿಬಿರದ ಉಚಿತ ಸೌಲಭ್ಯ ಗಳು:
ತಜ್ಞವೈದ್ಯರ (ಫಿಸಿಶಿಯನ್) ತಪಾಸಣೆ ಮತ್ತು ಸೂಕ್ತ ಸಲಹೆ., ರಕ್ತದೊತ್ತಡ (BP) ತಪಾಸಣೆ, ಹಿಮೋಗ್ಲೋಬಿನ್ (HB)ತಪಾಸಣೆ,
ಮಧುಮೇಹ (RBS)ತಪಾಸಣೆ, ಇಸಿಜಿ (ECG), ಶ್ವಾಸಕೋಶದ ತಪಾಸಣೆ, ಜೀವನ ಶೈಲಿ ಮತ್ತು ಪಥ್ಯ ಆಹಾರ ಬಗ್ಗೆ ಸಮಾಲೋಚನೆ.

ಶಿಬಿರದಲ್ಲಿ ಭಾಗವಹಿಸುವ ಮುಖ್ಯ ತಜ್ಞವೈದ್ಯರುಗಳಾದ ಡಾ‌.ಮುರಳಿಕೃಷ್ಣ ಇರ್ವತ್ರಾಯ, ಡಾ.ವಂದನಾ ಎಂ ಇರ್ವತ್ರಾಯ, ಡಾ.ಅಲ್ಬಿನ್ ಜೋಸೆಫ್, ಡಾ.ಮೌಲ್ಯ.

ಹೆಚ್ಚಿನ ವಿವರಗಳಿಗೆ:9483525100/8762540383

Related posts

ಬೆದ್ರಬೆಟ್ಟು ಮರಿಯಾ0ಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಸ್ಪೆಕ್ಟ್ರಾ-2024” ವಿಜ್ಞಾನ ಮಾದರಿ ವಸ್ತು ಪ್ರದರ್ಶನ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ

Suddi Udaya

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya

ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು-ಬಜಿರೆ – ಎ. 2: ಶ್ರೀ ರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ – ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಚಾವಣಿ ಲೋಕಾರ್ಪಣೆ ಹಾಗೂ ಕೊರಗಜ್ಜ ದೈವದ ನೇಮೋತ್ಸವ

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಸುಬ್ರಹ್ಮಣ್ಯದಲ್ಲಿದ್ದ ನಿರ್ಗತಿಕ ಬೆಂಗಳೂರಿನ ಜನ ಸ್ನೇಹಿ ಕೇಂದ್ರಕ್ಕೆ

Suddi Udaya
error: Content is protected !!