September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

ಮೊಗ್ರು : ಪ್ರತಿ ಮಗುವಿನಲ್ಲಿ ಒಂದೊಂದು ಪ್ರತಿಭೆಗಳು ಇದೆ. ಅದನ್ನು ಸರಿಯಾದ ಗುರುತಿಸುವಿಕೆಯಿಂದ ಹೊರತುಬೇಕು ಹಾಗೂ ಮಕ್ಕಳಲ್ಲಿ ಒಳ್ಳೆಯ ಹವ್ಯಾಸಗಳನ್ನು ಬೆಳೆಸಬೇಕು ಎಂದು ವಕೀಲರಾದ ಉದಯ ಬಿ.ಕೆ ಅಭಿಪ್ರಾಯಪಟ್ಟರು. ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ವತಿಯಿಂದ ಎ. 28 ರಿಂದ ಮೇ 3 ರ ವರೆಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೊಗ್ರು ಇಲ್ಲಿ ನಡೆದ ರಜಾಮಜಾ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡುತ್ತ ಶಾಲೆಯನ್ನು ದತ್ತು ಸ್ವೀಕಾರ ಮಾಡಿದ ಟ್ರಸ್ಟ್ ಸಮಾಜಮುಖಿ ಕಾರ್ಯದ ಭಾಗವಾಗಿ ಯೋಗ, ಆಂಗ್ಲಭಾಷೆಯ ತರಬೇತಿ, ಕ್ರೀಡೆಯೊಂದಿಗೆ ಇನ್ನಿತರ ಸಾಂಪ್ರದಾಯಿಕ ತರಬೇತಿ ನೀಡುತ್ತಿರುವುದು ಮಕ್ಕಳಿಗೆ ಮೊಬೈಲು ಚಟದಿಂದ ಹೊರಬರಲು ಪೂರಕ ಎಂದರು.


ಶಿಬಿರವನ್ನು ಶ್ರೀ ಕ್ಷೇತ್ರ ಮುಗೇರಡ್ಕದ ಆಡಳಿತ ಮೊಕ್ತೇಸರ ರಾಮಣ್ಣ ಗೌಡ ದೇವಸ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ನ ಅಧ್ಯಕ್ಷ ಯೋಗ ಗುರು ಕುಶಾಲಪ್ಪ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿ ಅತೀ ಕಡಿಮೆ ವೆಚ್ಚದಲ್ಲಿ ಉನ್ನತ ಗುಣಮಟ್ಟದ ಶಿಕ್ಷಣವನ್ನು ಸರಕಾರಿ ಶಾಲೆಯಲ್ಲಿ ಪಡೆಯಬಹುದು. ಅದಕ್ಕಾಗಿ ಟ್ರಸ್ಟ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಮೊಗ್ರು ಇದನ್ನು ದತ್ತು ಸ್ವೀಕರಿಸಿದೆ. ಟ್ರಸ್ಟ್ ನ ಸಹಕಾರದೊಂದಿಗೆ ಮಕ್ಕಳ ಉನ್ನತ ಗುಣಮಟ್ಟದ ಶಿಕ್ಷಣಕ್ಕೆ ಬೇಕಾದ ಶಿಕ್ಷಕಿಯರ ಹಾಗೂ ಇನ್ನಿತರ ಸೌಲಭ್ಯ ಒದಗಿಸಲಿದೆ ಎಂದರು.

ವೇದಿಕೆಯಲ್ಲಿ ಟ್ರಸ್ಟ್ ನ ಕಾರ್ಯದರ್ಶಿ ಮನೋಹರ ಗೌಡ ಅಂತರ, ಉಪಾಧ್ಯಕ್ಷ ಚಂದ್ರಹಾಸ ಗೌಡ ದೇವಸ್ಯ, ಕೋಶಾಧಿಕಾರಿ ಪುರಂದರ , ಜೊತೆ ಕಾರ್ಯದರ್ಶಿ ಉಮೇಶ್ ಗೌಡ ಪರೆಕ್ಕಜೆ, ಟ್ರಸ್ಟ್ಗಳಾದ ಬಾಬುಗೌಡ ಸಂಪತ್ತು ನಿಲಯ, ಸುಧಾಕರ ಗೌಡ , ದೀಕ್ಷಿತ್ , ಚಂದಪ್ಪ ಡಿ.ಎಸ್ ದಂಬೆತ್ತಿಮಾರು, ಪ್ರದೀಪ್ ಮನ್ಕುಡೆ, ಬಾಲಕೃಷ್ಣ ಗೌಡ ಮುಗೇರಡ್ಕ, ಸೇಸಪ್ಪ ಗೌಡ ಜಾಲ್ನಡೆ, ಮುಖ್ಯೋಪಾಧ್ಯಾಯರಾದ ಮಾಧವ ಗೌಡ, ಅಧ್ಯಕ್ಷ ಶೀನಪ್ಪಗೌಡ ನೆಕ್ಕರಜೆ, ಟ್ರಸ್ಟ್ ದೇವಪ್ರಸಾದ್ ಬರಮೇಲು ಶಿಕ್ಷಕಿಯರಾದ ಶ್ರೀಮತಿ ದಿವ್ಯ, ಕು| ಕೃತಿ ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ; ಉಮೇಶ್ ಶೆಟ್ಟಿ ಉಜಿರೆ ಬಳಗದ ಸದಸ್ಯರ ಪದಗ್ರಹಣ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೈ‌ ಕೊಟ್ಟ ವಿದ್ಯುತ್: ವೈದ್ಯರಿಂದ ಕತ್ತಲಲ್ಲಿ ರೋಗಿಗಳ ಆರೋಗ್ಯ ತಪಾಸಣೆ: ಇನ್ವರ್ಟರ್ ವ್ಯವಸ್ಥೆಗಳು ಇಲ್ಲದೆ ಟಾರ್ಚ್ ಬೆಳಕಿನಿಂದ ಚಿಕಿತ್ಸೆ ನೀಡಬೇಕಾದ ಸ್ಥಿತಿ

Suddi Udaya

ಕಾಂಗ್ರೇಸ್ ಪ್ರಣಾಳಿಕೆಯ ಭಜರಂಗದಳ ನಿಷೇಧದ ವಿರುದ್ದ ಸಿಡಿದೆದ್ದ ಹಿಂದೂ ಸಂಘಟನೆ: ಭಜರಂಗದಳ ವಿಶ್ವ ಹಿಂದೂ ಪರಿಷತ್ ನಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಡಿರುದ್ಯಾವರ ಹೇಡ್ಯದಲ್ಲಿ ಅಂಚೆ ಕಛೇರಿ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya
error: Content is protected !!