25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭೆ

ಇಂದಬೆಟ್ಟು: ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ಇಂದಬೆಟ್ಟು ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವವು ಮೇ. 4ರಂದು ಪ್ರಾರಂಭಗೊಂಡು ಮೇ.8ರವರೆಗೆ ನಡೆಯುತ್ತಿದೆ.

ಮೇ 5 ರಂದು ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ ಗಿರಿಯಪ್ಪ ಗೌಡ ವಹಿಸಿದ್ದರು. ಬೆಳ್ತಂಗಡಿಯ ವಕೀಲರಾದ ಬಿ.ಕೆ ಧನಂಜಯ ರಾವ್ ಧಾರ್ಮಿಕ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಶ್ರೀ ಗೋಪಾಲಕೃಷ್ಣ ದೇವಸ್ಥಾನ ನಾವೂರು ಇದರ ಅಧ್ಯಕ್ಷರು ಹಾಗೂ ಬಂಗಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲ್ಯಾನ್ ಆಗಮಿಸಿದ್ದರು.


ಜಾತ್ರೋತ್ಸವ ಸಮಿತಿಯ ಗೌರವಾಧ್ಯಕ್ಷ ಡಾ. ಪ್ರದೀಪ್ ಎ. ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸತೀಶ್ ಮನ್ನಡ್ಕ ಕಾರ್ಯಕ್ರಮ ನಿರೂಪಿಸಿದರು. ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ವಸಂತ ಗೌಡ ಕಲ್ಲಾಜೆ ಧನ್ಯವಾದವಿತ್ತರು. ಶಾಸಕ ಹರೀಶ್ ಪೂಂಜರವರು ಆಗಮಿಸಿ ದೇವರ ದರ್ಶನ ಪಡೆದು ಬಲಿ ಉತ್ಸವದಲ್ಲಿ ಪಾಲ್ಗೊಂಡಿದ್ದರು.

Related posts

ನೀರಚಿಲುಮೆ-ನಾರ್ಯ ಸಂಪರ್ಕಿಸುವ ರಸ್ತೆಯಲ್ಲಿ ನೀರು ಹರಿಯಲು ಚರಂಡಿ ವ್ಯವಸ್ಥೆಯಿಲ್ಲದೆ ಧರೆ ಕುಸಿತ, ಶೀಘ್ರ ದುರಸ್ಥಿಗೆ ಆಗ್ರಹ

Suddi Udaya

ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಕ್ಕೆ ಪ್ರೋತ್ಸಾಹ :ಎಸ್.ಡಿ.ಎಂ ಪ್ರತಿಪಾದನೆಗೆ ರಾಷ್ಟಮಟ್ಟದ ಮನ್ನಣೆ

Suddi Udaya

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ಸಂಘಟನೆ ವತಿಯಿಂದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಪುತ್ತೂರು ಶಾಸಕ ಅಶೋಕ್ ರೈ ಗೆ ಆಮಂತ್ರಣ

Suddi Udaya

ಬಜಕ್ರೆಸಾಲು ಸೇತುವೆ ಕೆಳಗೆ ನದಿಯಲ್ಲಿ ದನದ ಚರ್ಮ ಪತ್ತೆ

Suddi Udaya

ಶಿಕ್ಷಣ ಇಲಾಖೆ ನಡೆಸುವ ಇಸಿಒ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಶಿಕ್ಷಕ ಎಡ್ವರ್ಡ್ ಡಿ’ ಸೋಜ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಪ್ರಥಮ

Suddi Udaya
error: Content is protected !!