23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭೆ

ಇಂದಬೆಟ್ಟು: ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ಇಂದಬೆಟ್ಟು ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವವು ಮೇ. 4ರಂದು ಪ್ರಾರಂಭಗೊಂಡು ಮೇ.8ರವರೆಗೆ ನಡೆಯುತ್ತಿದೆ.

ಮೇ 5 ರಂದು ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ ಗಿರಿಯಪ್ಪ ಗೌಡ ವಹಿಸಿದ್ದರು. ಬೆಳ್ತಂಗಡಿಯ ವಕೀಲರಾದ ಬಿ.ಕೆ ಧನಂಜಯ ರಾವ್ ಧಾರ್ಮಿಕ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಶ್ರೀ ಗೋಪಾಲಕೃಷ್ಣ ದೇವಸ್ಥಾನ ನಾವೂರು ಇದರ ಅಧ್ಯಕ್ಷರು ಹಾಗೂ ಬಂಗಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲ್ಯಾನ್ ಆಗಮಿಸಿದ್ದರು.


ಜಾತ್ರೋತ್ಸವ ಸಮಿತಿಯ ಗೌರವಾಧ್ಯಕ್ಷ ಡಾ. ಪ್ರದೀಪ್ ಎ. ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸತೀಶ್ ಮನ್ನಡ್ಕ ಕಾರ್ಯಕ್ರಮ ನಿರೂಪಿಸಿದರು. ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ವಸಂತ ಗೌಡ ಕಲ್ಲಾಜೆ ಧನ್ಯವಾದವಿತ್ತರು. ಶಾಸಕ ಹರೀಶ್ ಪೂಂಜರವರು ಆಗಮಿಸಿ ದೇವರ ದರ್ಶನ ಪಡೆದು ಬಲಿ ಉತ್ಸವದಲ್ಲಿ ಪಾಲ್ಗೊಂಡಿದ್ದರು.

Related posts

ಹೈದರಾಬಾದಿನಲ್ಲಿ ನಡೆದ ವಿದ್ಯಾ ಭಾರತೀಯ ಕ್ಷೇತ್ರಿಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆ: ಸುಶಾಂತ್ ಎಸ್ ಪೂಜಾರಿ ಕುದ್ಯಾಡಿ ಪ್ರಥಮ‌ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಕಡಿದು ಬಿದ್ದ ವಿದ್ಯುತ್ ತಂತಿ, ಬೈಕ್ ಸವಾರರು ಪಾರು

Suddi Udaya

ಬೆಳಾಲು: ಶ್ರೀ ಧ. ಮಂ. ಪ್ರೌ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಶಿಬಿರ ಉದ್ಘಾಟನೆ

Suddi Udaya

ತೆಕ್ಕಾರು : ಪತ್ನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಪತಿ

Suddi Udaya

ರಾಷ್ಟ್ರೀಯ ಮಟ್ಟದ ಕರಕುಶಲ ಸ್ಪರ್ಧೆ: ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿ ಶ್ರೇಯಾ ಕೆ ಎಚ್ ಗೆ ಪ್ರಥಮ ಸ್ಥಾನ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗುರುವಂದನ ಮತ್ತು ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!