September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭೆ

ಇಂದಬೆಟ್ಟು: ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ಇಂದಬೆಟ್ಟು ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವವು ಮೇ. 4ರಂದು ಪ್ರಾರಂಭಗೊಂಡು ಮೇ.8ರವರೆಗೆ ನಡೆಯುತ್ತಿದೆ.

ಮೇ 5 ರಂದು ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ ಗಿರಿಯಪ್ಪ ಗೌಡ ವಹಿಸಿದ್ದರು. ಬೆಳ್ತಂಗಡಿಯ ವಕೀಲರಾದ ಬಿ.ಕೆ ಧನಂಜಯ ರಾವ್ ಧಾರ್ಮಿಕ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಧಾರ್ಮಿಕ ಪರಿಷತ್ ಮಾಜಿ ಸದಸ್ಯ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಶ್ರೀ ಗೋಪಾಲಕೃಷ್ಣ ದೇವಸ್ಥಾನ ನಾವೂರು ಇದರ ಅಧ್ಯಕ್ಷರು ಹಾಗೂ ಬಂಗಾಡಿ ಸಿಎ ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲ್ಯಾನ್ ಆಗಮಿಸಿದ್ದರು.


ಜಾತ್ರೋತ್ಸವ ಸಮಿತಿಯ ಗೌರವಾಧ್ಯಕ್ಷ ಡಾ. ಪ್ರದೀಪ್ ಎ. ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸತೀಶ್ ಮನ್ನಡ್ಕ ಕಾರ್ಯಕ್ರಮ ನಿರೂಪಿಸಿದರು. ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ವಸಂತ ಗೌಡ ಕಲ್ಲಾಜೆ ಧನ್ಯವಾದವಿತ್ತರು. ಶಾಸಕ ಹರೀಶ್ ಪೂಂಜರವರು ಆಗಮಿಸಿ ದೇವರ ದರ್ಶನ ಪಡೆದು ಬಲಿ ಉತ್ಸವದಲ್ಲಿ ಪಾಲ್ಗೊಂಡಿದ್ದರು.

Related posts

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಆರೋಗ್ಯದ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಸಿರಿ ಸಂಸ್ಥೆಯ 2025ನೇವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ

Suddi Udaya

ಡಿ. 8: ನಮ್ಮೂರ ಜಾತ್ರೆ ಕುಂಭಶ್ರೀ ವೈಭವ ಹಾಗೂ ಮಾತ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ

Suddi Udaya

ಅಂತರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಎಸ್‌ಡಿಎಂ ಶಾಲಾ ವಿದ್ಯಾರ್ಥಿನಿ ಅನೀಶ ಆರೋಲ್‌ಗೆ ಚಿನ್ನದ ಪದಕ

Suddi Udaya

ತ್ರೋಬಾಲ್ ಪಂದ್ಯಾಟ : ಉಜಿರೆ ಅನುಗ್ರಹ ಶಾಲಾ ಬಾಲಕರ ತಂಡ ಪ್ರಥಮ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!