July 23, 2026
ಆರೋಗ್ಯ

ಗ್ರಾಮ ಪಂಚಾಯತ್ ತಣ್ಣೀರು ಪಂತ ಹಾಗೂ ಅರಿವು ಕೇಂದ್ರದ ಸಹಭಾಗಿತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ.

ತಣ್ಣೀರುಪ0ತ ಗ್ರಾಮ ಪಂಚಾಯತ್ ತಣ್ಣೀರು ಪಂತ ಹಾಗೂ ಅರಿವು ಕೇಂದ್ರದ ಸಹಭಾಗಿತ್ವದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ ನೀಡಲಾಯಿತು. ಒಂದು ವಾರದ ಕಾಲ ನಡೆಯುವ ಈ ಶಿಬಿರದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಹೇಮಾವತಿ ಹಾಗೂ ಮಕ್ಕಳಿಂದ ದೀಪ ಬೆಳಗಿಸುವುದರ ಮೂಲಕ ಮೇ 6ರಂದು ನೆರವೇರಿಸಲಾಯಿತು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಶ್ರವಣ್ ಕುಮಾರ್ ಇವರು ಅತಿಥಿಗಳನ್ನು ಸ್ವಾಗತಿಸಿ ಶಿಬಿರದ ಉದ್ದೇಶದ ಬಗ್ಗೆ ವಿವರಿಸಿದರು ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯದರ್ಶಿ ಗ್ರಂಥಾಲಯದ ಸಲಹಾ ಸಮಿತಿ ಸದಸ್ಯರು ಪಂಚಾಯತ್ ಸಿಬ್ಬಂದಿ ವರ್ಗ ಪುನರ್ವಸತಿ ಕಾರ್ಯಕರ್ತರು ಮತ್ತು ಎಂಬಿಕೆ ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದು ಸಹಕರಿಸಿದರು. ಗ್ರಂಥಾಲಯ ಮೇಲ್ವಿಚಾರಕಿ ಶ್ರೀಮತಿ ಮೋಹಿನಿ ಇವರು ಕಾರ್ಯಕ್ರಮ ನಿರೂಪಿಸಿ ಕೊನೆಯಲ್ಲಿ ಪಂಚಾಯತ್ ಕಾರ್ಯದರ್ಶಿಯವರು ಧನ್ಯವಾದ ವಿತ್ತರು. ನಂತರ ಈ ದಿನದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀ ಪ್ರವೀಣ್ ಇವರು ಮಕ್ಕಳಿಗೆ ವಿವಿಧ ಬಗ್ಗೆಯ ಕ್ರಾಫ್ಟ್ ಚಟುವಟಿಕೆಗಳನ್ನು ಹಾಗೂ ವಿವಿಧ ಮನೋರಂಜನ ಆಟಗಳನ್ನು ಹಮ್ಮಿಕೊಂಡಿದ್ದು, ಮಕ್ಕಳು ಉತ್ಸಾಹದಿಂದ ಪಾಲ್ಗೊಂಡರು. ಈ ಶಿಬಿರವು ಮೇ.12 ರವರೆಗೆ ಜರಗಲಿದೆ.

Related posts

ಲಾಯಿಲ: ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಸುಶ್ರುತ ಜಯಂತಿ ಅಂಗವಾಗಿ ಅಗ್ನಿಕರ್ಮ ನೋವು ನಿವಾರಕ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಸರಕಾರಿ ಆಸ್ಪತ್ರೆಯಲ್ಲಿ ಹಜ್ ಯಾತ್ರಾರ್ಥಿಗಳಿಗೆ ವೈದ್ಯಕೀಯ ತಪಾಸಣೆ

Suddi Udaya

ಕೊಕ್ಕಡ: ಎಂಡೋ ಪೀಡಿತ ವಿಶೇಷ ಚೇತನರಿಗೆ ಉಚಿತ ಬಸ್ ಪಾಸ್ ವಿತರಣೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನ.29: ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿ ಹೆಚ್.ಬಿ ಲೀಲಾವತಿ ಸೇವಾ ನಿವೃತ್ತಿ

Suddi Udaya

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ಪಡೆಯಲು ಮಂಗಳೂರಿನಲ್ಲಿರುವ ಎಂಐಯು ಆಸ್ಪತ್ರೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ರೋಗಿಗಳಿಗೆ ನೇರವಾಗಿ ದಾಖಲಾತಿಗೆ ಅವಕಾಶ ಮಾಡಿಕೊಡಬೇಕು ಸದನದಲ್ಲಿ :ಶಾಸಕಹರೀಶ್ ಪೂಂಜಾ

Suddi Udaya
error: Content is protected !!