23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನಾ ದಿನಾಚರಣೆ

ಬೆಳ್ತಂಗಡಿ : ವಾಣಿ ಕಾಲೇಜು ಹಳೆಕೋಟೆ ಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಮತ್ತು ವಾಣಿ ಕಾಲೇಜಿನ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತು ಸ್ಟಾಪನಾ ದಿನಾಚರಣೆ ಜರಗಿತು.

ರಸಾನುಭವ ಮತ್ತು ರಸಾಭಿವ್ಯಕ್ತಿಗೆ ಭಾಷೆ ಬೇಕು. ನಮಗೆ ನಮ್ಮದೇ ಆದ ಅನನ್ಯತೆಯನ್ನು ಉಳಿಸಿಕೊಳ್ಳಲು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಬೇಕು. ಹಿಂದೆಲ್ಲ ಕಲಿಕೆಯಲ್ಲಿದ್ದ ಮತ್ತು ಕಡಿಮೆ ಅಂಕದ ಫಲಿತಾಂಶ ಬಂದರೂ ಇರುತ್ತಿದ್ದ ಸಂತಸ ಮತ್ತು ಸಂತೃಪ್ತಿ ಈಗ ಕಲಿಕೆಯಲ್ಲೂ ಇಲ್ಲ ಮತ್ತು ನೂರು ಶೇಕಡಾ ಅಂಕದ ಫಲಿತಾಂಶ ಬಂದರೂ ಇಲ್ಲದಾಗಿದೆ. ಅದಕ್ಕೆಲ್ಲ ನಮ್ಮ ಮಾತೃ ಭಾಷಾ ಕಲಿಕೆಯ ಮತ್ತು ಸಾಹಿತ್ಯಿಕ ಓದಿನ ಕೊರತೆಯೇ ಕಾರಣ. ಸಂಸ್ಕೃತಿಯ ಉತ್ಪನ್ನವಾಗಿರುವ ಭಾಷೆಯ ಬಳಕೆ, ಸಾಹಿತ್ಯದ ಅಧ್ಯಯನ ಮತ್ತು ಓದಿನ ಅಗತ್ಯತೆ ಇಂದಿನ ಅನಿವಾರ್ಯತೆ ಎಂದು ಬೆಳ್ತಂಗಡಿ ತಾಲ್ಲೂಕು ಕ ಸಾ ಪ ದ ಅಧ್ಯಕ್ಷರು, ಕ ಸಾ ಪ ಸ್ಥಾಪನಾ ದಿನಾಚರಣೆ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಡಿ. ಯದುಪತಿ ಗೌಡರು ಅಭಿಪ್ರಾಯಪಟ್ಟರು.

ಮುಖ್ಯ ಭಾಷಣಕಾರರಾಗಿ ಆಗಮಿಸಿದ ವಾಣಿ ಕಾಲೇಜಿನ ಉಪನ್ಯಾಸಕರಾದ ಬೆಳ್ಳಿಯಪ್ಪ ರವರು, ಕ ಸಾ ಪ ದ ಪ್ರಸ್ತುತತೆ ಮತ್ತು ಮಹತ್ವದ ಬಗ್ಗೆ ಮಾತನಾಡುತ್ತಾ, ನಮ್ಮ ರಾಜ್ಯದಲ್ಲಿ ಕನ್ನಡ ಭಾಷೆಗೆ ತೊಂದರೆ ಮತ್ತು ಅಡ್ಡಿಗಳು ಎದುರಾದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಜೊತೆ ಎಲ್ಲಾ ಕನ್ನಡಿಗರೂ ಹೋರಾಟಕ್ಕೆ ಸಿದ್ಧರಾಗಬೇಕು ಎಂದು ಕರೆ ನೀಡಿದರು.

ವಾಣಿ ಕಾಲೇಜಿನ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಕ ಸಾ ಪ ದ ಗೌರವ ಕಾರ್ಯದರ್ಶಿಗಳಾದ ರಾಮಕೃಷ್ಣ ಭಟ್ ಚೊಕ್ಕಾಡಿ ಸ್ವಾಗತಿಸಿ ವಂದಿಸಿದರು. ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಸಮಾರಂಭದ ಯಶಸ್ಸಿಗೆ ಸಹಕರಿಸಿದರು.

Related posts

ಬಿಜೆಪಿ ಎಸ್.ಸಿ ಮೋರ್ಚಾದ ಉಪಾಧ್ಯಕ್ಷರಾಗಿ ಸುರೇಶ್ ಎಚ್ ಆರಂಬೋಡಿ ಆಯ್ಕೆ

Suddi Udaya

ಜನರ ನೆಮ್ಮದಿ ಕೆಡಿಸಿದೆ ನೆಮ್ಮದಿ ಕೇಂದ್ರ: ಶೀಘ್ರವೇ ಬಾಜರು – ಜೋಡುಕಟ್ಟೆ ರಸ್ತೆ ದುರಸ್ತಿ – ಶಾಸಕ ಹರೀಶ್ ಪೂಂಜ

Suddi Udaya

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ವಿಭಾಗದಿಂದ “ಲೈಫ್ ಸ್ಕಿಲ್ಸ್ ಎಜುಕೇಶನ್ ಫಾರ್ ಸಸ್ಟೈನಬಲ್ ಡೆವಲಪ್ಮೆಂಟ್” ಕೌಶಲ್ಯಾಭಿವೃದ್ಧಿ ಕಾರ್ಯಾಗಾರ

Suddi Udaya

ಕರಾಯ : ಆಟೋರಿಕ್ಷಾಕ್ಕೆ ಟಿಪ್ಪರ್‌ ಲಾರಿ ಡಿಕ್ಕಿ: ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಕಸ್ಟಡಿ ಅಂತ್ಯ ವಾಪಸ್ ಕೇರಳ ಜೈಲಿಗೆ ಕಳುಹಿಸಿದ ನ್ಯಾಯಾಲಯ

Suddi Udaya
error: Content is protected !!