September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

ಮೊಗ್ರು : ಪ್ರತಿ ಮಗುವಿನಲ್ಲಿ ಒಂದೊಂದು ಪ್ರತಿಭೆಗಳು ಇದೆ. ಅದನ್ನು ಸರಿಯಾದ ಗುರುತಿಸುವಿಕೆಯಿಂದ ಹೊರತುಬೇಕು ಹಾಗೂ ಮಕ್ಕಳಲ್ಲಿ ಒಳ್ಳೆಯ ಹವ್ಯಾಸಗಳನ್ನು ಬೆಳೆಸಬೇಕು ಎಂದು ವಕೀಲರಾದ ಉದಯ ಬಿ.ಕೆ ಅಭಿಪ್ರಾಯಪಟ್ಟರು. ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ವತಿಯಿಂದ ಎ. 28 ರಿಂದ ಮೇ 3 ರ ವರೆಗೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೊಗ್ರು ಇಲ್ಲಿ ನಡೆದ ರಜಾಮಜಾ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡುತ್ತ ಶಾಲೆಯನ್ನು ದತ್ತು ಸ್ವೀಕಾರ ಮಾಡಿದ ಟ್ರಸ್ಟ್ ಸಮಾಜಮುಖಿ ಕಾರ್ಯದ ಭಾಗವಾಗಿ ಯೋಗ, ಆಂಗ್ಲಭಾಷೆಯ ತರಬೇತಿ, ಕ್ರೀಡೆಯೊಂದಿಗೆ ಇನ್ನಿತರ ಸಾಂಪ್ರದಾಯಿಕ ತರಬೇತಿ ನೀಡುತ್ತಿರುವುದು ಮಕ್ಕಳಿಗೆ ಮೊಬೈಲು ಚಟದಿಂದ ಹೊರಬರಲು ಪೂರಕ ಎಂದರು.


ಶಿಬಿರವನ್ನು ಶ್ರೀ ಕ್ಷೇತ್ರ ಮುಗೇರಡ್ಕದ ಆಡಳಿತ ಮೊಕ್ತೇಸರ ರಾಮಣ್ಣ ಗೌಡ ದೇವಸ್ಯ ದೀಪ ಬೆಳಗಿಸಿ ಉದ್ಘಾಟಿಸಿದರು. ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ನ ಅಧ್ಯಕ್ಷ ಯೋಗ ಗುರು ಕುಶಾಲಪ್ಪ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿ ಅತೀ ಕಡಿಮೆ ವೆಚ್ಚದಲ್ಲಿ ಉನ್ನತ ಗುಣಮಟ್ಟದ ಶಿಕ್ಷಣವನ್ನು ಸರಕಾರಿ ಶಾಲೆಯಲ್ಲಿ ಪಡೆಯಬಹುದು. ಅದಕ್ಕಾಗಿ ಟ್ರಸ್ಟ್ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಮೊಗ್ರು ಇದನ್ನು ದತ್ತು ಸ್ವೀಕರಿಸಿದೆ. ಟ್ರಸ್ಟ್ ನ ಸಹಕಾರದೊಂದಿಗೆ ಮಕ್ಕಳ ಉನ್ನತ ಗುಣಮಟ್ಟದ ಶಿಕ್ಷಣಕ್ಕೆ ಬೇಕಾದ ಶಿಕ್ಷಕಿಯರ ಹಾಗೂ ಇನ್ನಿತರ ಸೌಲಭ್ಯ ಒದಗಿಸಲಿದೆ ಎಂದರು.

ವೇದಿಕೆಯಲ್ಲಿ ಟ್ರಸ್ಟ್ ನ ಕಾರ್ಯದರ್ಶಿ ಮನೋಹರ ಗೌಡ ಅಂತರ, ಉಪಾಧ್ಯಕ್ಷ ಚಂದ್ರಹಾಸ ಗೌಡ ದೇವಸ್ಯ, ಕೋಶಾಧಿಕಾರಿ ಪುರಂದರ , ಜೊತೆ ಕಾರ್ಯದರ್ಶಿ ಉಮೇಶ್ ಗೌಡ ಪರೆಕ್ಕಜೆ, ಟ್ರಸ್ಟ್ಗಳಾದ ಬಾಬುಗೌಡ ಸಂಪತ್ತು ನಿಲಯ, ಸುಧಾಕರ ಗೌಡ , ದೀಕ್ಷಿತ್ , ಚಂದಪ್ಪ ಡಿ.ಎಸ್ ದಂಬೆತ್ತಿಮಾರು, ಪ್ರದೀಪ್ ಮನ್ಕುಡೆ, ಬಾಲಕೃಷ್ಣ ಗೌಡ ಮುಗೇರಡ್ಕ, ಸೇಸಪ್ಪ ಗೌಡ ಜಾಲ್ನಡೆ, ಮುಖ್ಯೋಪಾಧ್ಯಾಯರಾದ ಮಾಧವ ಗೌಡ, ಅಧ್ಯಕ್ಷ ಶೀನಪ್ಪಗೌಡ ನೆಕ್ಕರಜೆ, ಟ್ರಸ್ಟ್ ದೇವಪ್ರಸಾದ್ ಬರಮೇಲು ಶಿಕ್ಷಕಿಯರಾದ ಶ್ರೀಮತಿ ದಿವ್ಯ, ಕು| ಕೃತಿ ಉಪಸ್ಥಿತರಿದ್ದರು.

Related posts

ಮುಂಡಾಜೆ: ವಿಶೇಷ ಚೇತನ ವಾರ್ಷಿಕ ದಿನಾಚರಣೆ ಅಂಗವಾಗಿ ಗ್ರಾಮೀಣ ಪುನರ್ವಸತಿ ಕಾರ್ಯ ವಿಭಾಗದ ವತಿಯಿಂದ ಸಮನ್ವಯ ಗ್ರಾಮ ಸಭೆ ಹಾಗೂ ವಿಕಲ ಚೇತನರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಕರಿಮಣೇಲು : ಮರೋಡಿ ಬೆಳ್ಳಿಬೀಡು ಬಸದಿಯ ಅನುವಂಶಿಕ ಆಡಳಿತ ಮೊಕೇಸ್ತರ ಕೆ. ಹೇಮರಾಜ್ ರವರಿಂದ ತಿಮ್ಮಣಬೆಟ್ಟು ಸ.ಉ.ಹಿ.ಪ್ರಾ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತಿನ ಗೌರವಾದ್ಯಕ್ಷರಾಗಿ ಕಾಜೂರು ತಂಙಳ್ ರವರು ಅಧಿಕಾರ ಸ್ವೀಕಾರ ಮತ್ತು ಮಹಾಸಭೆ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ಪದ್ಮುಂಜ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!