March 7, 2026
Uncategorized

ಆಪರೇಷನ್ ಸಿಂಧೂರ: ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಉಜಿರೆ: ಜಮ್ಮು-ಕಾಶ್ಮೀರದ ಪಹಲ್ಲಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಭಾರತದ ಸೇನೆ ಪಾಕಿಸ್ತಾನದ ಉಗ್ರರ ವಿರುದ್ಧ ಆಪರೇಷನ್ ಸಿಂಧೂರ ಎಂಬ ಹೆಸರಿನಲ್ಲಿ ಮೇ 7ರ ಮಧ್ಯರಾತ್ರಿ ಪ್ರತೀಕಾರ ಆರಂಭಿಸಿದೆ. ಈ ನಿಟ್ಟಿನಲ್ಲಿ ಉಜಿರೆಯ ಸರ್ಕಲ್ ನಲ್ಲಿ ತ್ರಿವರ್ಣ ಧ್ವಜ ಹಾರಿಸಿ, ಭಾರತೀಯ ಸೇನೆಗೆ ಜಯ ಘೋಷಗಳನ್ನು ಕೂಗಿ, ಪಟಾಕಿಯನ್ನು ಸಿಡಿಸಿ, ಸಿಹಿ ಹಂಚುವುದರ ಮೂಲಕ ಸಂಭ್ರಮಾಚರಣೆಯನ್ನು ಆಚರಿಸಲಾಯಿತು.

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ, ಪಹಲ್ಗಮ್ ನಲ್ಲಿ ನಡೆದ ಅಮಾನುಷ ಕೃತ್ಯ ನೇರವಾಗಿ ಪಾಕಿಸ್ತಾನದಿಂದ ಪ್ರಾಯೋಗಿಕವಾದಂತಹ ಹತ್ಯೆ. ಸಂಪೂರ್ಣ ಭಾರತ ಸರಿಯಾದ ಉತ್ತರಕ್ಕಾಗಿ ಕಾತುರದಿಂದ ಕಾಯುತ್ತಿತ್ತು. ಈ ಹಿನ್ನೆಲೆಯಲ್ಲಿ ಭಾರತೀಯ ಸೇನೆ ಆಪರೇಷನ್ ಸಿಂಧೂರದ ಮೂಲಕ ಉಗ್ರರ ಒಂಬತ್ತು ತರಬೇತಿ ತಾಣಗಳನ್ನು ದ್ವ0ಸಮಾಡುವುದರ ಮೂಲಕ ತಕ್ಕ ಉತ್ತರವನ್ನು ನೀಡಿದೆ ಎಂದರು.

ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಮಾತನಾಡಿ, ಉಗ್ರರು ಮಹಿಳೆಯರ ಎದುರು ಹೇಯ ಕೃತ್ಯವನ್ನು ಮಾಡುವ ಮೂಲಕ ಅವರ ಆತ್ಮ ವಿಶ್ವಾಸವನ್ನು ಕುಗ್ಗಿಸುವ ಕೆಲಸವನ್ನು ಮಾಡಿದ್ದಾರೆ. ಅದಕ್ಕೆ ತಕ್ಕ ಉತ್ತರವನ್ನು ಪ್ರಧಾನ ಮಂತ್ರಿ ಹಾಗೂ ಭಾರತೀಯ ಸೇನೆ ಆಪರೇಷನ್ ಸಿಂಧೂರದ ಮೂಲಕ ಕೊಟ್ಟಿರುವಂತಹದ್ದು ಬಹಳ ಸಂತೋಷ ತಂದಿದೆ ಎಂದರು.

ಈ ಸಂದರ್ಭದಲ್ಲಿ ಉಜಿರೆ ವರ್ತಕರ ಸಂಘದ ಅಧ್ಯಕ್ಷ ಅರವಿಂದ ಕಾರಂತ್, ರವೀಂದ್ರ ಶೆಟ್ಟಿ ಬಳಂಜ, ಉದಯ್ ಚಿಕನ್ ಸೆಂಟರ್ ನ ರಾಮಚಂದ್ರ ಶೆಟ್ಟಿ, ಅಜಯ್ ಶೆಟ್ಟಿ, ಉಜಿರೆ ಮಹಾಲಕ್ಷ್ಮೀ ಫ್ಯಾನ್ಸಿ ಮಾಲಕ ಭರತ್, ಪದ್ಮಶ್ರೀ ಎಂಟರ್ ಪ್ರೈಸಸ್ ನ ಮಾಲಕ ಪದ್ಮನಾಭ ಶೆಟ್ಟಿಗಾರ್, ತ್ರಿಶುಲ್, ರಾಜೇಶ್, ಪಂಚಾಯತ್ ಸದಸ್ಯರಾದ ಗುರುಪ್ರಸಾದ್, ಸವಿತಾ, ಸಂಧ್ಯಾ, ಪ್ರಮೀಳಾ, ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related posts

ಮೇ 22: ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿಯ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮವು “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆ

Suddi Udaya

ತಿರುಪತಿ ಲಡ್ಡುವಿನಲ್ಲಿ ಕೊಬ್ಬನ್ನು ಮಿಶ್ರಣ ಮಾಡಿರುವವರ ಮೇಲೆ ತಕ್ಷಣ ದೂರು ದಾಖಲಿಸಲು ದೇವಸ್ಥಾನ ಮಹಾಸಂಘದ ವತಿಯಿಂದ ಮನವಿ:

Suddi Udaya

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya

ಶಿಬಾಜೆ: ಫೆ.5-6 ರಂದು ಮೊಂಟೆತ್ತಡ್ಕ ದುರ್ಗಾಪರಮೇಶ್ವರಿ ಸನ್ನಿದಿಯಲ್ಲಿ ನಡೆಯುವ ಶತ ಚಂಡಿಕಾ ಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ:ಶ್ರೀ ಕ್ಷೇತ್ರದಲ್ಲಿ 64ವರ್ಷದ ಬಳಿಕ ನಡೆಯುತ್ತಿರುವ ಯಾಗ

Suddi Udaya
error: Content is protected !!