25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆಯು ಮೇ 6 ರಂದು ಶಿಶಿಲದ ನಾಗನಡ್ಕ ಗಣೇಶ ಸಮುದಾಯ ಭವನದಲ್ಲಿ ನಡೆಯಿತು.


ಮಾಸಿಕ ಸಭೆಯಲ್ಲಿ ಭಾಗವಹಿಸಿದ ತಾಲೂಕು ಯೋಜನಾಧಿಕಾರಿಗಳಾದ ಯಶೋಧರ ಉತ್ತಮ ಸೇವೆ ಸಲ್ಲಿಸುತ್ತಿರುವ ಘಟಕವನ್ನು ಅಭಿನಂದಿಸುತ್ತಾ ಮುಂದೆಯೂ ಯೋಜನೆಯ ಎಲ್ಲಾ ಕಾರ್ಯಕ್ರಮಗಳಿಗೆ ಸಹಕಾರವನ್ನು ನೀಡಲು ವಿನಂತಿಸಿದರು.


ವಿಪತ್ತು ನಿರ್ವಹಣಾ ಕಾರ್ಯಕ್ರಮದ ಯೋಜನಾಧಿಕಾರಿಗಳಾದ ಜಯವಂತ ಪಟಗಾರ್ ಭಾಗವಹಿಸಿ ಘಟಕವು ಇದುವರೆಗೆ ಮಾಡಿದ ಸೇವಾಕಾರ್ಯಗಳು, ಪಡೆದ ಭತ್ಯೆಗಳು ಹಾಗೂ ಸದಸ್ಯವಾರು ಹಾಜರಾತಿ ಬಗ್ಗೆ ದಾಖಲಾತಿ ಸಹಿತ ಮಾಹಿತಿ ನೀಡಿ ಮುಂದಿನ ದಿನಗಳಲ್ಲಿ ಘಟಕವು ಯಾವ ರೀತಿ ಕಾರ್ಯಾಚರಿಸಬೇಕೆಂಬ ಮಾಹಿತಿಯನ್ನು ನೀಡಿದರು.


ಯೋಜನಾಧಿಕಾರಿ ಕಿಶೋರ್ ಮಾದರಿ ತಂಡವಾಗಿ ಕಾರ್ಯಾಚರಿಸಲು ಉಪಯುಕ್ತ ಸಲಹೆಗಳನ್ನು ನೀಡಿದರು. ಸಭೆಯಲ್ಲಿ ವಲಯ ಮೇಲ್ವಿಚಾರಕರಾದ ಶ್ರೀಮತಿ ಶಶಿಕಲಾರವರು ಉಪಸ್ಥಿತರಿದ್ದರು. ರಮೇಶ ಬೈರಕಟ್ಟ ಸ್ವಾಗತಿಸಿ, ಕುಶಾಲಪ್ಪ ಗೌಡ ಧನ್ಯವಾದ ನೀಡಿದರು. ಸಂಯೋಜಕರಾದ ರಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Related posts

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು

Suddi Udaya

ಕುವೆಟ್ಟು ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಸಾಮರಸ್ಯದ ಸಂಕ್ರಾಂತಿ ಕಾರ್ಯಕ್ರಮ

Suddi Udaya

ಮಡಂತ್ಯಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಜೂ.24: ಜನಸಂಪರ್ಕ ಸಭೆ

Suddi Udaya

ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ವತಿಯಿಂದ 3 ಜೋಡಿ ಸರಳ ಸಮೂಹಿಕ ವಿವಾಹ

Suddi Udaya

ಪಡ್ಪು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!