July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆಯು ಮೇ 6 ರಂದು ಶಿಶಿಲದ ನಾಗನಡ್ಕ ಗಣೇಶ ಸಮುದಾಯ ಭವನದಲ್ಲಿ ನಡೆಯಿತು.


ಮಾಸಿಕ ಸಭೆಯಲ್ಲಿ ಭಾಗವಹಿಸಿದ ತಾಲೂಕು ಯೋಜನಾಧಿಕಾರಿಗಳಾದ ಯಶೋಧರ ಉತ್ತಮ ಸೇವೆ ಸಲ್ಲಿಸುತ್ತಿರುವ ಘಟಕವನ್ನು ಅಭಿನಂದಿಸುತ್ತಾ ಮುಂದೆಯೂ ಯೋಜನೆಯ ಎಲ್ಲಾ ಕಾರ್ಯಕ್ರಮಗಳಿಗೆ ಸಹಕಾರವನ್ನು ನೀಡಲು ವಿನಂತಿಸಿದರು.


ವಿಪತ್ತು ನಿರ್ವಹಣಾ ಕಾರ್ಯಕ್ರಮದ ಯೋಜನಾಧಿಕಾರಿಗಳಾದ ಜಯವಂತ ಪಟಗಾರ್ ಭಾಗವಹಿಸಿ ಘಟಕವು ಇದುವರೆಗೆ ಮಾಡಿದ ಸೇವಾಕಾರ್ಯಗಳು, ಪಡೆದ ಭತ್ಯೆಗಳು ಹಾಗೂ ಸದಸ್ಯವಾರು ಹಾಜರಾತಿ ಬಗ್ಗೆ ದಾಖಲಾತಿ ಸಹಿತ ಮಾಹಿತಿ ನೀಡಿ ಮುಂದಿನ ದಿನಗಳಲ್ಲಿ ಘಟಕವು ಯಾವ ರೀತಿ ಕಾರ್ಯಾಚರಿಸಬೇಕೆಂಬ ಮಾಹಿತಿಯನ್ನು ನೀಡಿದರು.


ಯೋಜನಾಧಿಕಾರಿ ಕಿಶೋರ್ ಮಾದರಿ ತಂಡವಾಗಿ ಕಾರ್ಯಾಚರಿಸಲು ಉಪಯುಕ್ತ ಸಲಹೆಗಳನ್ನು ನೀಡಿದರು. ಸಭೆಯಲ್ಲಿ ವಲಯ ಮೇಲ್ವಿಚಾರಕರಾದ ಶ್ರೀಮತಿ ಶಶಿಕಲಾರವರು ಉಪಸ್ಥಿತರಿದ್ದರು. ರಮೇಶ ಬೈರಕಟ್ಟ ಸ್ವಾಗತಿಸಿ, ಕುಶಾಲಪ್ಪ ಗೌಡ ಧನ್ಯವಾದ ನೀಡಿದರು. ಸಂಯೋಜಕರಾದ ರಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Related posts

ಮುತ್ತೂಟ್ ಫೈನಾನ್ಸ್ ಬೆಳ್ತಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ: ಗ್ರಾಹಕರ ವಿಶ್ವಾಸ ಗಳಿಸಿದಾಗ ಸಂಸ್ಥೆ ಬೆಳೆಯುತ್ತದೆ : ಕುಸುಮಾಧರ್

Suddi Udaya

ಬೆಳ್ತಂಗಡಿ ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜ ಪ್ರಮಾಣ: ನಾನು ಯಾರಿಂದಲೂ ಹಣವನ್ನು ಪಡೆದಿಲ್ಲ, ಭ್ರಷ್ಟಾಚಾರ ನಡೆಸಿಲ್ಲ: ದೀಪ ಬೆಳಗಿಸಿ, ಮಾರಿಗುಡಿ ಎದುರು ತೆಂಗಿನ ಕಾಯಿ ಒಡೆದು ಪ್ರಮಾಣ

Suddi Udaya

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ಟ್ರಡಿಷನಲ್ ಯೋಗ ವಿಭಾಗದಲ್ಲಿ ವಾಣಿ ಪ.ಪೂ. ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ: ನೇರ್ತನೆ ನಿವಾಸಿ ಸ್ಟ್ಯಾನಿ ಜೋಸೆಫ್ ನಿಧನ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಫ್ಯಾನ್ ಕೊಡುಗೆ

Suddi Udaya
error: Content is protected !!