September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆಯು ಮೇ 6 ರಂದು ಶಿಶಿಲದ ನಾಗನಡ್ಕ ಗಣೇಶ ಸಮುದಾಯ ಭವನದಲ್ಲಿ ನಡೆಯಿತು.


ಮಾಸಿಕ ಸಭೆಯಲ್ಲಿ ಭಾಗವಹಿಸಿದ ತಾಲೂಕು ಯೋಜನಾಧಿಕಾರಿಗಳಾದ ಯಶೋಧರ ಉತ್ತಮ ಸೇವೆ ಸಲ್ಲಿಸುತ್ತಿರುವ ಘಟಕವನ್ನು ಅಭಿನಂದಿಸುತ್ತಾ ಮುಂದೆಯೂ ಯೋಜನೆಯ ಎಲ್ಲಾ ಕಾರ್ಯಕ್ರಮಗಳಿಗೆ ಸಹಕಾರವನ್ನು ನೀಡಲು ವಿನಂತಿಸಿದರು.


ವಿಪತ್ತು ನಿರ್ವಹಣಾ ಕಾರ್ಯಕ್ರಮದ ಯೋಜನಾಧಿಕಾರಿಗಳಾದ ಜಯವಂತ ಪಟಗಾರ್ ಭಾಗವಹಿಸಿ ಘಟಕವು ಇದುವರೆಗೆ ಮಾಡಿದ ಸೇವಾಕಾರ್ಯಗಳು, ಪಡೆದ ಭತ್ಯೆಗಳು ಹಾಗೂ ಸದಸ್ಯವಾರು ಹಾಜರಾತಿ ಬಗ್ಗೆ ದಾಖಲಾತಿ ಸಹಿತ ಮಾಹಿತಿ ನೀಡಿ ಮುಂದಿನ ದಿನಗಳಲ್ಲಿ ಘಟಕವು ಯಾವ ರೀತಿ ಕಾರ್ಯಾಚರಿಸಬೇಕೆಂಬ ಮಾಹಿತಿಯನ್ನು ನೀಡಿದರು.


ಯೋಜನಾಧಿಕಾರಿ ಕಿಶೋರ್ ಮಾದರಿ ತಂಡವಾಗಿ ಕಾರ್ಯಾಚರಿಸಲು ಉಪಯುಕ್ತ ಸಲಹೆಗಳನ್ನು ನೀಡಿದರು. ಸಭೆಯಲ್ಲಿ ವಲಯ ಮೇಲ್ವಿಚಾರಕರಾದ ಶ್ರೀಮತಿ ಶಶಿಕಲಾರವರು ಉಪಸ್ಥಿತರಿದ್ದರು. ರಮೇಶ ಬೈರಕಟ್ಟ ಸ್ವಾಗತಿಸಿ, ಕುಶಾಲಪ್ಪ ಗೌಡ ಧನ್ಯವಾದ ನೀಡಿದರು. ಸಂಯೋಜಕರಾದ ರಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Related posts

ಧರ್ಮಸ್ಥಳ: ಮಹಿಳಾ ಆರೋಗ್ಯ ಮತ್ತು ನ್ಯಾಚುರೋಪತಿ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya

ಮೇಲಂತಬೆಟ್ಟು : ಲಕ್ಷ್ಮೀಯಮ್ಮ ನಿಧನ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 12 ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ತೋಟತ್ತಾಡಿ ನಿವಾಸಿ ಜಯರಾಮ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ನಲ್ಲಿ ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
error: Content is protected !!