23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆಯು ಮೇ 6 ರಂದು ಶಿಶಿಲದ ನಾಗನಡ್ಕ ಗಣೇಶ ಸಮುದಾಯ ಭವನದಲ್ಲಿ ನಡೆಯಿತು.


ಮಾಸಿಕ ಸಭೆಯಲ್ಲಿ ಭಾಗವಹಿಸಿದ ತಾಲೂಕು ಯೋಜನಾಧಿಕಾರಿಗಳಾದ ಯಶೋಧರ ಉತ್ತಮ ಸೇವೆ ಸಲ್ಲಿಸುತ್ತಿರುವ ಘಟಕವನ್ನು ಅಭಿನಂದಿಸುತ್ತಾ ಮುಂದೆಯೂ ಯೋಜನೆಯ ಎಲ್ಲಾ ಕಾರ್ಯಕ್ರಮಗಳಿಗೆ ಸಹಕಾರವನ್ನು ನೀಡಲು ವಿನಂತಿಸಿದರು.


ವಿಪತ್ತು ನಿರ್ವಹಣಾ ಕಾರ್ಯಕ್ರಮದ ಯೋಜನಾಧಿಕಾರಿಗಳಾದ ಜಯವಂತ ಪಟಗಾರ್ ಭಾಗವಹಿಸಿ ಘಟಕವು ಇದುವರೆಗೆ ಮಾಡಿದ ಸೇವಾಕಾರ್ಯಗಳು, ಪಡೆದ ಭತ್ಯೆಗಳು ಹಾಗೂ ಸದಸ್ಯವಾರು ಹಾಜರಾತಿ ಬಗ್ಗೆ ದಾಖಲಾತಿ ಸಹಿತ ಮಾಹಿತಿ ನೀಡಿ ಮುಂದಿನ ದಿನಗಳಲ್ಲಿ ಘಟಕವು ಯಾವ ರೀತಿ ಕಾರ್ಯಾಚರಿಸಬೇಕೆಂಬ ಮಾಹಿತಿಯನ್ನು ನೀಡಿದರು.


ಯೋಜನಾಧಿಕಾರಿ ಕಿಶೋರ್ ಮಾದರಿ ತಂಡವಾಗಿ ಕಾರ್ಯಾಚರಿಸಲು ಉಪಯುಕ್ತ ಸಲಹೆಗಳನ್ನು ನೀಡಿದರು. ಸಭೆಯಲ್ಲಿ ವಲಯ ಮೇಲ್ವಿಚಾರಕರಾದ ಶ್ರೀಮತಿ ಶಶಿಕಲಾರವರು ಉಪಸ್ಥಿತರಿದ್ದರು. ರಮೇಶ ಬೈರಕಟ್ಟ ಸ್ವಾಗತಿಸಿ, ಕುಶಾಲಪ್ಪ ಗೌಡ ಧನ್ಯವಾದ ನೀಡಿದರು. ಸಂಯೋಜಕರಾದ ರಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ಯುವ ನಿಧಿ ನೋಂದಣಿ ಪ್ರಚಾರಕ್ಕೆ ಚಾಲನೆ

Suddi Udaya

ಬಜೆಟ್ ನಲ್ಲಿ ಓಲೈಕೆಗೆ ಒತ್ತು‌ ಹಾಗೂ ಅಭಿವೃದ್ಧಿಯ ಆಶಯ ಮಸುಕಾಗಿದೆ : ಪ್ರತಾಪಸಿಂಹ ನಾಯಕ್

Suddi Udaya

ನಾವೂರು ಗ್ರಾಮ ಪಂಚಾಯತ್ ನ ವಿಶೇಷ ಗ್ರಾಮ ಸಭೆ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಬೆಳ್ತಂಗಡಿ ತಾಲೂಕು ಘಟಕದಿಂದ ನಿವೃತ್ತ ಯೋಧ ಸಿ ಜಾರ್ಜ್ ಕುಟ್ಟಿ ಯವರಿಗೆ ಸನ್ಮಾನ

Suddi Udaya

ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಕನ್ಯಾಡಿ ಸರಕಾರಿ ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya
error: Content is protected !!