23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆಯು ಮೇ 6 ರಂದು ಶಿಶಿಲದ ನಾಗನಡ್ಕ ಗಣೇಶ ಸಮುದಾಯ ಭವನದಲ್ಲಿ ನಡೆಯಿತು.


ಮಾಸಿಕ ಸಭೆಯಲ್ಲಿ ಭಾಗವಹಿಸಿದ ತಾಲೂಕು ಯೋಜನಾಧಿಕಾರಿಗಳಾದ ಯಶೋಧರ ಉತ್ತಮ ಸೇವೆ ಸಲ್ಲಿಸುತ್ತಿರುವ ಘಟಕವನ್ನು ಅಭಿನಂದಿಸುತ್ತಾ ಮುಂದೆಯೂ ಯೋಜನೆಯ ಎಲ್ಲಾ ಕಾರ್ಯಕ್ರಮಗಳಿಗೆ ಸಹಕಾರವನ್ನು ನೀಡಲು ವಿನಂತಿಸಿದರು.


ವಿಪತ್ತು ನಿರ್ವಹಣಾ ಕಾರ್ಯಕ್ರಮದ ಯೋಜನಾಧಿಕಾರಿಗಳಾದ ಜಯವಂತ ಪಟಗಾರ್ ಭಾಗವಹಿಸಿ ಘಟಕವು ಇದುವರೆಗೆ ಮಾಡಿದ ಸೇವಾಕಾರ್ಯಗಳು, ಪಡೆದ ಭತ್ಯೆಗಳು ಹಾಗೂ ಸದಸ್ಯವಾರು ಹಾಜರಾತಿ ಬಗ್ಗೆ ದಾಖಲಾತಿ ಸಹಿತ ಮಾಹಿತಿ ನೀಡಿ ಮುಂದಿನ ದಿನಗಳಲ್ಲಿ ಘಟಕವು ಯಾವ ರೀತಿ ಕಾರ್ಯಾಚರಿಸಬೇಕೆಂಬ ಮಾಹಿತಿಯನ್ನು ನೀಡಿದರು.


ಯೋಜನಾಧಿಕಾರಿ ಕಿಶೋರ್ ಮಾದರಿ ತಂಡವಾಗಿ ಕಾರ್ಯಾಚರಿಸಲು ಉಪಯುಕ್ತ ಸಲಹೆಗಳನ್ನು ನೀಡಿದರು. ಸಭೆಯಲ್ಲಿ ವಲಯ ಮೇಲ್ವಿಚಾರಕರಾದ ಶ್ರೀಮತಿ ಶಶಿಕಲಾರವರು ಉಪಸ್ಥಿತರಿದ್ದರು. ರಮೇಶ ಬೈರಕಟ್ಟ ಸ್ವಾಗತಿಸಿ, ಕುಶಾಲಪ್ಪ ಗೌಡ ಧನ್ಯವಾದ ನೀಡಿದರು. ಸಂಯೋಜಕರಾದ ರಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Related posts

ಕಲ್ಮಂಜ: ನಿಡಿಗಲ್ ನಿವಾಸಿ ಶರೀಫ್ ಚಮ್ಮು ನಿಧನ

Suddi Udaya

ತಾಲೂಕು ಮಟ್ಟದ ಟೇಬಲ್ ಟೆನಿಸ್ ನಲ್ಲಿ ವಾಣಿ ಪ.ಪೂ ಕಾಲೇಜಿನ ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ಉಜಿರೆ ಎಸ್. ಡಿ.ಎಂ ಕಾಲೇಜು : ಎನ್ ಎಸ್ ಎಸ್ ಘಟಕಕ್ಕೆ ಸುವರ್ಣ ಸಂಭ್ರಮ: ಅ.5:ಹಿರಿಯ ಸ್ವಯಂಸೇವಕರ ಒಗ್ಗೂಡುವಿಕೆಯಲ್ಲಿ ‘ ಸುವರ್ಣ ಸಮ್ಮಿಲನ ‘ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶಾಲಾರಂಭದ ಸಂಭ್ರಮ

Suddi Udaya

ಉರುವಾಲು : ವಿಷ ಸೇವಿಸಿ ಯುವಕ ಆತ್ಮಹತ್ಯೆ

Suddi Udaya
error: Content is protected !!