July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆಯು ಮೇ 6 ರಂದು ಶಿಶಿಲದ ನಾಗನಡ್ಕ ಗಣೇಶ ಸಮುದಾಯ ಭವನದಲ್ಲಿ ನಡೆಯಿತು.


ಮಾಸಿಕ ಸಭೆಯಲ್ಲಿ ಭಾಗವಹಿಸಿದ ತಾಲೂಕು ಯೋಜನಾಧಿಕಾರಿಗಳಾದ ಯಶೋಧರ ಉತ್ತಮ ಸೇವೆ ಸಲ್ಲಿಸುತ್ತಿರುವ ಘಟಕವನ್ನು ಅಭಿನಂದಿಸುತ್ತಾ ಮುಂದೆಯೂ ಯೋಜನೆಯ ಎಲ್ಲಾ ಕಾರ್ಯಕ್ರಮಗಳಿಗೆ ಸಹಕಾರವನ್ನು ನೀಡಲು ವಿನಂತಿಸಿದರು.


ವಿಪತ್ತು ನಿರ್ವಹಣಾ ಕಾರ್ಯಕ್ರಮದ ಯೋಜನಾಧಿಕಾರಿಗಳಾದ ಜಯವಂತ ಪಟಗಾರ್ ಭಾಗವಹಿಸಿ ಘಟಕವು ಇದುವರೆಗೆ ಮಾಡಿದ ಸೇವಾಕಾರ್ಯಗಳು, ಪಡೆದ ಭತ್ಯೆಗಳು ಹಾಗೂ ಸದಸ್ಯವಾರು ಹಾಜರಾತಿ ಬಗ್ಗೆ ದಾಖಲಾತಿ ಸಹಿತ ಮಾಹಿತಿ ನೀಡಿ ಮುಂದಿನ ದಿನಗಳಲ್ಲಿ ಘಟಕವು ಯಾವ ರೀತಿ ಕಾರ್ಯಾಚರಿಸಬೇಕೆಂಬ ಮಾಹಿತಿಯನ್ನು ನೀಡಿದರು.


ಯೋಜನಾಧಿಕಾರಿ ಕಿಶೋರ್ ಮಾದರಿ ತಂಡವಾಗಿ ಕಾರ್ಯಾಚರಿಸಲು ಉಪಯುಕ್ತ ಸಲಹೆಗಳನ್ನು ನೀಡಿದರು. ಸಭೆಯಲ್ಲಿ ವಲಯ ಮೇಲ್ವಿಚಾರಕರಾದ ಶ್ರೀಮತಿ ಶಶಿಕಲಾರವರು ಉಪಸ್ಥಿತರಿದ್ದರು. ರಮೇಶ ಬೈರಕಟ್ಟ ಸ್ವಾಗತಿಸಿ, ಕುಶಾಲಪ್ಪ ಗೌಡ ಧನ್ಯವಾದ ನೀಡಿದರು. ಸಂಯೋಜಕರಾದ ರಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Related posts

ಅನನ್ಯ ಭಟ್ ನಾಪತ್ತೆ ಪ್ರಕರಣ; ಸುಜಾತ ಭಟ್ ಗೆ ಬಿಗ್ ರಿಲೀಫ್

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

Suddi Udaya

ಲಾಯಿಲ: ಆಟೋಚಾಲಕ ನಾಗೇಶ್ ನಿಧನ

Suddi Udaya

ಶ್ರೀ ಕ್ಷೇತ್ರ ತೆಕ್ಕಾರಿಗೆ ಶಾಸಕ ಹರೀಶ್ ಪೂಂಜಾ ಭೇಟಿ : ಕ್ಷೇತ್ರದ ರಸ್ತೆಗೆ ಶಾಸಕರ ನಿಧಿಯಿಂದ ರೂ‌.10 ಲಕ್ಷ ಡಾಂಬರೀಕರಣ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಗಝಲ್ ‘ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಯಜ್ನೇಶ್ ಪ್ರಥಮ ಸ್ಥಾನ

Suddi Udaya
error: Content is protected !!