22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಸೈನಿಕನ ಮಾತು- ಉಪನ್ಯಾಸ ಕಾರ್ಯಕ್ರಮ

ಉಜಿರೆ: ದೇಶ ಮೊದಲು, ಉದ್ಯೋಗ ಯಾವಾಗಲೂ ಎನ್ನುತ್ತಾ ದೇಶದ ಅಭಿವೃದ್ಧಿ ಮತ್ತು ಉತ್ತಮ ದೇಶದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವವಾದುದು. ಮಕ್ಕಳಿಗೆ ನೈತಿಕತೆ ಮತ್ತು ದೇಶಭಕ್ತಿ ಬೆಳೆಸುವಲ್ಲಿ ಶಿಕ್ಷಕರು ಮಹತ್ವದ ಪಾತ್ರ ವಹಿಸಬೇಕು. ಸೈನಿಕರು ದೇಶದ ಹೆಮ್ಮೆ. ಸೇನೆಯಲ್ಲಿ ಇರುವ ಉದ್ಯೋಗಾವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಯಪ್ರಕಾಶ್ ಕೆ, ಎಮರ್ಜೆನ್ಸಿ ಮೆಡಿಕಲ್ ಟೇಕ್ನೀಷಿಯನ್, ಭಾರತೀಯ ವಾಯುಸೇನೆ ಇವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಸೈನಿಕನ ಮಾತು ಎಂಬ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.


ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಲ್ಡಾನ ಮಾತನಾಡಿ ಗೌರವ ವೃತ್ತಿ ಎಂದರೆ ಶಿಕ್ಷಕ ವೃತ್ತಿ. ಶಿಕ್ಷಕರೂ ಸಹ ಗೌರವಿಸುವ ವೃತ್ತಿ ಎಂದರೆ ಅದು ಸೈನಿಕ ವೃತ್ತಿ. ಸಾಧ್ಯವಾದಷ್ಟು ಆ ವೃತ್ತಿಯನ್ನು ಗಳಿಸಿ ದೇಶಸೇವೆ ಮಾಡುವಲ್ಲಿ ನಿಮ್ಮ ಮುಂದಿನ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿ ಎಂದರು. ಕಾರ್ಯಕ್ರಮದಲ್ಲಿ ಜಯಪ್ರಕಾಶ್ ಕೆ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ವಿದ್ಯಾಶ್ರೀ ಪಿ, ತಿರುಮಲೇಶ್ ರಾವ್ ಎನ್ ಕೆ, ಅನುಷಾ ಡಿ ಜೆ, ಆಧ್ಯಾ ಯು ಹಾಗೂ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಾದ ನಾಗವೇಣಿ ಸ್ವಾಗತಿಸಿ, ದೀಕ್ಷಿತ್ ಅತಿಥಿ ಪರಿಚಯಿಸಿ, ಪ್ರತಿಮಾ ವಂದಿಸಿ, ಹೇಮಾವತಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಕಲ್ಮಂಜ ಗ್ರಾಮ ಪಂಚಾಯತ್ ವತಿಯಿಂದ ನಿಡಿಗಲ್ ಪರಿಸರದ ಚರಂಡಿಗಳ ಸ್ವಚ್ಛತೆ

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಬೆಳ್ತಂಗಡಿ ಶಾಂತಾ ಬಂಗೇರರವರಿಗೆ ಸನ್ಮಾನ

Suddi Udaya

ಕುತ್ಲೂರು: ಬಜಿಲಪಾದೆಯಲ್ಲಿ ಚಿರತೆ ಪತ್ತೆ

Suddi Udaya

ಜ.28: ಇಂದಬೆಟ್ಟುವಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya

ಲಾಯಿಲ: ಪಡ್ಲಾಡಿ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿಕೊಂಡ ಮರ, ಕಸ-ಕಡ್ಡಿ ತೆರವು: ಸ್ಪಂದಿಸಿದ ಲಾಯಿಲ ಗ್ರಾ. ಪಂ. ಕಾರ್ಯಕ್ಕೆ ಮೆಚ್ಚುಗೆ

Suddi Udaya

ಮಂಗ, ಕಾಡುಹಂದಿ, ನವಿಲುಗಳ ಹಾವಳಿಯಿಂದ ಕೃಷಿ ಮತ್ತು ಫಸಲು ನಾಶದ ಬಗ್ಗೆ ಶಾಶ್ವತ ಪರಿಹಾರ ಒದಗಿಸುವಂತೆ ಅರಣ್ಯ ಸಚಿವರಿಗೆ ಬೆಳ್ತಂಗಡಿ ಅಖಿಲ ಭಾರತ ಕಿಸಾನ್ ಮಹಾಸಭಾ ವತಿಯಿಂದ ಮನವಿ ಸಲ್ಲಿಕೆ

Suddi Udaya
error: Content is protected !!