23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಶ್ರೀ ದೇವರಿಗೆ ವಿಶೇಷ ಪೂಜೆ

ಉಜಿರೆ : ಮೇ 08 ಭಾರತ ಮಾತೆಯ ರಕ್ಷಣೆಗಾಗಿ ನಡೆದ ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆ ಪ್ರಯುಕ್ತ ಭಾರತೀಯ ಸೇನೆಯ ಧೈರ್ಯವರ್ಧಣೆಗಾಗಿ, ಮತ್ತಷ್ಟು ಶಕ್ತಿಯನ್ನು ಆ ದೇವರು ಅನುಗ್ರಹಿಸಿ ಆಶೀರ್ವದಿಸಲಿ, ದೇಶಕ್ಕೆ ಒಳಿತಾಗಲಿ ಎಂದು ಉಜಿರೆ ಶ್ರೀ ಜನಾರ್ಧನ ದೇವಸ್ಥಾನದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಶ್ರೀ ದೇವರಿಗೆ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ಹಾಗೂ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಬೆಳಾಲು, ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಪೂರ್ಣಿಮಾ ಜಯಂತ್ ಮುಂಡಾಜೆ, ಶ್ರೀಮತಿ ತುಳಸಿ ಉಮೇಶ್ ಹಾಗೂ ಉಜಿರೆ ಗ್ರಾಮ ಪಂಚಾಯತ್ ಸದಸ್ಯರು ಹಾಗೂಮಹಿಳಾ ಮೋರ್ಚಾ ಕಾರ್ಯದರ್ಶಿ ಶ್ರೀಮತಿ ಶಶಿಕಲಾ ದೇವಪ್ಪ ಗೌಡ ಸಾಯಿಕೃಪಾ ಉಜಿರೆ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಉಚಿತ ವೈದ್ಯಕೀಯ ದಂತ ಚಿಕಿತ್ಸೆ ಶಿಬಿರ

Suddi Udaya

ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ರವರಿಗೆ ಕರ್ನಾಟಕ ಜ್ಯೋತಿ ಅವಾರ್ಡ್

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾಗಿ ಚಿದಾನಂದ ಪೂಜಾರಿ ಆಯ್ಕೆ

Suddi Udaya

ಶಿರ್ಲಾಲು: ದರ್ಖಾಸು ಮನೆಯ ರಾಜು ಗೌಡ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಪುತ್ತೂರಿನ ಉದ್ಯಮಿ ದಿನೇಶ್ ರೈ ರವರಿಂದ 75 ಕೆ.ಜಿ.ಯ ಘಂಟೆ ಸಮರ್ಪಣೆ

Suddi Udaya

ಕೊಕ್ಕಡ: ಸೇಸಮ್ಮ ನಿಧನ

Suddi Udaya
error: Content is protected !!