25.6 C
ಪುತ್ತೂರು, ಬೆಳ್ತಂಗಡಿ
May 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಸೈನಿಕನ ಮಾತು- ಉಪನ್ಯಾಸ ಕಾರ್ಯಕ್ರಮ

ಉಜಿರೆ: ದೇಶ ಮೊದಲು, ಉದ್ಯೋಗ ಯಾವಾಗಲೂ ಎನ್ನುತ್ತಾ ದೇಶದ ಅಭಿವೃದ್ಧಿ ಮತ್ತು ಉತ್ತಮ ದೇಶದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಮಹತ್ವವಾದುದು. ಮಕ್ಕಳಿಗೆ ನೈತಿಕತೆ ಮತ್ತು ದೇಶಭಕ್ತಿ ಬೆಳೆಸುವಲ್ಲಿ ಶಿಕ್ಷಕರು ಮಹತ್ವದ ಪಾತ್ರ ವಹಿಸಬೇಕು. ಸೈನಿಕರು ದೇಶದ ಹೆಮ್ಮೆ. ಸೇನೆಯಲ್ಲಿ ಇರುವ ಉದ್ಯೋಗಾವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಯಪ್ರಕಾಶ್ ಕೆ, ಎಮರ್ಜೆನ್ಸಿ ಮೆಡಿಕಲ್ ಟೇಕ್ನೀಷಿಯನ್, ಭಾರತೀಯ ವಾಯುಸೇನೆ ಇವರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಸೈನಿಕನ ಮಾತು ಎಂಬ ಉಪನ್ಯಾಸ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.


ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಲ್ಡಾನ ಮಾತನಾಡಿ ಗೌರವ ವೃತ್ತಿ ಎಂದರೆ ಶಿಕ್ಷಕ ವೃತ್ತಿ. ಶಿಕ್ಷಕರೂ ಸಹ ಗೌರವಿಸುವ ವೃತ್ತಿ ಎಂದರೆ ಅದು ಸೈನಿಕ ವೃತ್ತಿ. ಸಾಧ್ಯವಾದಷ್ಟು ಆ ವೃತ್ತಿಯನ್ನು ಗಳಿಸಿ ದೇಶಸೇವೆ ಮಾಡುವಲ್ಲಿ ನಿಮ್ಮ ಮುಂದಿನ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿ ಎಂದರು. ಕಾರ್ಯಕ್ರಮದಲ್ಲಿ ಜಯಪ್ರಕಾಶ್ ಕೆ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ವಿದ್ಯಾಶ್ರೀ ಪಿ, ತಿರುಮಲೇಶ್ ರಾವ್ ಎನ್ ಕೆ, ಅನುಷಾ ಡಿ ಜೆ, ಆಧ್ಯಾ ಯು ಹಾಗೂ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಾದ ನಾಗವೇಣಿ ಸ್ವಾಗತಿಸಿ, ದೀಕ್ಷಿತ್ ಅತಿಥಿ ಪರಿಚಯಿಸಿ, ಪ್ರತಿಮಾ ವಂದಿಸಿ, ಹೇಮಾವತಿ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

Suddi Udaya

ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ವೈಭವ

Suddi Udaya

ಗುರುವಾಯನಕೆರೆ ಶಕ್ತಿನಗರ ಜಂಕ್ಷನ್ ನಲ್ಲಿ ಸ್ಕೂಟರ್ ಗೆ ಲಾರಿ ಡಿಕ್ಕಿ : ಓರ್ವ ಮೃತ್ಯು,

Suddi Udaya

ಅರಸಿನಮಕ್ಕಿ: ಕೃಷಿಕ ಮುರಳೀಧರ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲಾ ಸಂಸತ್ತು ಚುನಾವಣೆ

Suddi Udaya
error: Content is protected !!