22.7 C
ಪುತ್ತೂರು, ಬೆಳ್ತಂಗಡಿ
May 10, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕ್ರೈಸ್ತರ ವಿಶ್ವಗುರು ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆ

ಕ್ರೈಸ್ತರ ವಿಶ್ವಗುರು ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆಯಾಗಿದ್ದು, ಪೋಪ್ ಲಿಯೋ XIV ಹೆಸರಿನಿಂದ ಅವರು ಇನ್ನು ಮುಂದೆ ಪೋಪ್‌ ಆಗಿ ಗುರುತಿಸಿಕೊಳ್ಳಲಿದ್ದಾರೆ. ರೋಮ್ ಧರ್ಮಕ್ಷೇತ್ರದ 267ನೇ ಧರ್ಮಾಧ್ಯಕ್ಷರ ಆಯ್ಕೆಯ ವಿಚಾರವನ್ನು ಮೇ 8 ರಂದು ರಾತ್ರಿ ಕಾರ್ಡಿನಲ್ ಪ್ರೋಟೋ-ಡೀಕನ್ ಡೊಮಿನೀಕ್ ಮಾಂಬೆರ್ತಿ ಅವರು ಜನತೆಗೆ ಈ ಸುದ್ದಿಯನ್ನು ಘೋಷಿಸಿದರು.

ನಿಮಗೆಲ್ಲರಿಗೂ ನಾನು ಸಂತೋಷದ ಸುದ್ದಿಯನ್ನು ಪ್ರಕಟಿಸುತ್ತೇನೆ : ನಮ್ಮ ವಿಶ್ವಗುರುವಿನ ಆಯ್ಕೆಯಾಗಿದೆ ಎಂದು ಮಾಂಬೆರ್ತಿ ಘೋಷಣೆ ಕೂಗಿ ಪೋಪ್‌ ಆಯ್ಕೆಯನ್ನು ಪ್ರಕಟಿಸಿದರು.

ಕ್ಯಾಥೋಲಿಕ್ ಚರ್ಚ್ ನ 2,000 ವರ್ಷಗಳ ಇತಿಹಾಸದಲ್ಲಿ ಮೊದಲ ಅಮೆರಿಕನ್ ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆಯಾಗಿದ್ದಾರೆ. ಹೊಸದಾಗಿ ಚುನಾಯಿತರಾದ ಪೋಪ್ ಲಿಯೋ XIV ಗುರುವಾರ ವ್ಯಾಟಿಕನ್‌ನ ಸೇಂಟ್ ಪೀಟರ್ಸ್ ಬೆಸಿಲಿಕಾದ ಬಾಲ್ಕನಿಯಲ್ಲಿ ಸಾಂಪ್ರದಾಯಿಕ ಧಿರಿಸಿನಲ್ಲಿ ಕಾಣಿಸಿಕೊಂಡು ಜನತೆಗೆ ಕೈಬೀಸಿದರು. ಈ ವೇಳೆ ‘ಜಗತ್ತಿನಲ್ಲಿ ಶಾಂತಿ ಸ್ಥಾಪನೆಗೆ ಎಲ್ಲರೂ ಪರಸ್ಪರ ಕೈಜೋಡಿಸಬೇಕು’ ಎಂದು ಕರೆ ನೀಡಿದರು. ‘ಮಾತುಕತೆಗಳ ಮೂಲಕ ಸೇತುವೆ ನಿರ್ಮಿಸಿ ಎಲ್ಲರೂ ಪರಸ್ಪರ ಹತ್ತಿರವಾಗಬೇಕು. ಜಗತ್ತಿನಲ್ಲಿ ಸದಾ ಶಾಂತಿ ನೆಲೆಸಲಿ’ ಎಂದು ಹೇಳಿದರು.

Related posts

ಇಂದಬೆಟ್ಟು : ಮಾತೃಶ್ರೀ ಮುಗೇರ ಸೇವಾ ಸಂಘದಿಂದ ಪುಸ್ತಕ ವಿತರಣೆ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಮೂಡಬಿದ್ರೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಅಳದಂಗಡಿ ಅರಸರ ಉಪಸ್ಥಿತಿಯಲ್ಲಿ ಚಪ್ಪರ ಮುಹೂರ್ತ

Suddi Udaya

ಎ.24- ಮೇ 2 : ಬೆಳ್ತಂಗಡಿ ದೀಪಾ ಗೋಲ್ಡ್ ನಲ್ಲಿ ಅಕ್ಷಯ ತೃತೀಯದ ಸಂಭ್ರಮ, ಕೊಡುಗೆಗಳು

Suddi Udaya

ಕಾಶಿಪಟ್ಣ ಗ್ರಾ.ಪಂ. ಅಧ್ಯಕ್ಷರಾಗಿ ಸತೀಶ್ ಕಾಶಿಪಟ್ಣಅವಿರೋಧ ಆಯ್ಕೆ

Suddi Udaya

ಧರ್ಮಸ್ಥಳ: ಸಂತಾನಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ನಿಡ್ಲೆ: ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ರಾಜ್ಯ ಅಭ್ಯಾಸವರ್ಗದ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!