23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕ್ರೈಸ್ತರ ವಿಶ್ವಗುರು ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆ

ಕ್ರೈಸ್ತರ ವಿಶ್ವಗುರು ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆಯಾಗಿದ್ದು, ಪೋಪ್ ಲಿಯೋ XIV ಹೆಸರಿನಿಂದ ಅವರು ಇನ್ನು ಮುಂದೆ ಪೋಪ್‌ ಆಗಿ ಗುರುತಿಸಿಕೊಳ್ಳಲಿದ್ದಾರೆ. ರೋಮ್ ಧರ್ಮಕ್ಷೇತ್ರದ 267ನೇ ಧರ್ಮಾಧ್ಯಕ್ಷರ ಆಯ್ಕೆಯ ವಿಚಾರವನ್ನು ಮೇ 8 ರಂದು ರಾತ್ರಿ ಕಾರ್ಡಿನಲ್ ಪ್ರೋಟೋ-ಡೀಕನ್ ಡೊಮಿನೀಕ್ ಮಾಂಬೆರ್ತಿ ಅವರು ಜನತೆಗೆ ಈ ಸುದ್ದಿಯನ್ನು ಘೋಷಿಸಿದರು.

ನಿಮಗೆಲ್ಲರಿಗೂ ನಾನು ಸಂತೋಷದ ಸುದ್ದಿಯನ್ನು ಪ್ರಕಟಿಸುತ್ತೇನೆ : ನಮ್ಮ ವಿಶ್ವಗುರುವಿನ ಆಯ್ಕೆಯಾಗಿದೆ ಎಂದು ಮಾಂಬೆರ್ತಿ ಘೋಷಣೆ ಕೂಗಿ ಪೋಪ್‌ ಆಯ್ಕೆಯನ್ನು ಪ್ರಕಟಿಸಿದರು.

ಕ್ಯಾಥೋಲಿಕ್ ಚರ್ಚ್ ನ 2,000 ವರ್ಷಗಳ ಇತಿಹಾಸದಲ್ಲಿ ಮೊದಲ ಅಮೆರಿಕನ್ ಪೋಪ್ ಆಗಿ ರಾಬರ್ಟ್ ಪ್ರಿವೋಸ್ಟ್ ಆಯ್ಕೆಯಾಗಿದ್ದಾರೆ. ಹೊಸದಾಗಿ ಚುನಾಯಿತರಾದ ಪೋಪ್ ಲಿಯೋ XIV ಗುರುವಾರ ವ್ಯಾಟಿಕನ್‌ನ ಸೇಂಟ್ ಪೀಟರ್ಸ್ ಬೆಸಿಲಿಕಾದ ಬಾಲ್ಕನಿಯಲ್ಲಿ ಸಾಂಪ್ರದಾಯಿಕ ಧಿರಿಸಿನಲ್ಲಿ ಕಾಣಿಸಿಕೊಂಡು ಜನತೆಗೆ ಕೈಬೀಸಿದರು. ಈ ವೇಳೆ ‘ಜಗತ್ತಿನಲ್ಲಿ ಶಾಂತಿ ಸ್ಥಾಪನೆಗೆ ಎಲ್ಲರೂ ಪರಸ್ಪರ ಕೈಜೋಡಿಸಬೇಕು’ ಎಂದು ಕರೆ ನೀಡಿದರು. ‘ಮಾತುಕತೆಗಳ ಮೂಲಕ ಸೇತುವೆ ನಿರ್ಮಿಸಿ ಎಲ್ಲರೂ ಪರಸ್ಪರ ಹತ್ತಿರವಾಗಬೇಕು. ಜಗತ್ತಿನಲ್ಲಿ ಸದಾ ಶಾಂತಿ ನೆಲೆಸಲಿ’ ಎಂದು ಹೇಳಿದರು.

Related posts

ಬೆಳ್ತಂಗಡಿ : ಕೆಇಬಿ ರಸ್ತೆ -ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕ ರಸ್ತೆಗೆ ಅನುದಾನ ಒದಗಿಸುವಂತೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ಉಜಿರೆ :ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ‘ಪೋಷಕರ ಸಭೆ ‘

Suddi Udaya

ನಾವೂರು: ತೃಪ್ತಿ ಸಂಜೀವಿನಿ ಗ್ರಾ.ಪಂ. ವಾರ್ಷಿಕ ಮಹಾಸಭೆ

Suddi Udaya

ಉದ್ಯಮಿ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಗುರುವಾಯನಕೆರೆ ಅರೆಮಲೆಬೆಟ್ಟಕ್ಕೆ ಭೇಟಿ

Suddi Udaya

ನಿವೃತ್ತ ಸೇನಾಧಿಕಾರಿ ಕುಮಾರ ಸ್ವಾಮಿ ಮತ್ತು ಕ್ಯಾಂಪ್ಕೊ ಕಂಪೆನಿಯ ಹಿರಿಯ ಮೇನೇಜರ್‌‌, ‌ನಿವೃತ್ತ ಸುಭೇದಾರ್‌ ರಂಗನಾಥ್ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಸುರ್ಯ ಶ್ರೀ ಸದಾಶಿವರುದ್ರ ದೇವಾಲಯಕ್ಕೆ ಭೇಟಿ

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya
error: Content is protected !!