36.8 C
ಪುತ್ತೂರು, ಬೆಳ್ತಂಗಡಿ
May 10, 2025
Uncategorized

ಗುರುವಾಯನಕೆರೆ:ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ: ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಣೆ

ಗುರುವಾಯನಕೆರೆ: ಗ್ರಾಮ ಪಂಚಾಯತ್ ಕುವೆಟ್ಟು ಗ್ರಾಮ ಪಂಚಾಯತ್ ಅರಿವು ಕೇಂದ್ರ ಹಾಗೂ ಗ್ರಂಥಾಲಯ ಕುವೆಟ್ಟು ಇವುಗಳ ಸಂಯೋಗದೊಂದಿಗೆ ಮೇ5ರಿಂದ ಮೇ 9ರವರೆಗೆ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿಯವರು ಮಕ್ಕಳ ಭವಿಷ್ಯ ಕ್ಕೆ ಹಿತನುಡಿ ಹೇಳಿದರು.
ಐದು ದಿನಗಳ ಕಾಲ ನಡೆದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ದಲ್ಲಿ ಪಾಲ್ಗೊಂಡ ಎಲ್ಲಾ ಮಕ್ಕಳಿಗೂ ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜಶೇಖರ್ ರೈ ಶಿಬಿರದ ಪ್ರಯೋಜನಗಳ ಬಗ್ಗೆ ಮಕ್ಕಳಿಗೆ ತಿಳಿಸಿದರು. ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ಜಲಜಾಕ್ಷಿ ಆಶಾ ಕಾರ್ಯಕರ್ತೆ ಇವರು ಮಕ್ಕಳ ಅರೋಗ್ಯ ದ ಬಗ್ಗೆ , ಎ. ಡಿ ಸುರೇಶ್ ಇವರು ಸಂಗೀತ ದ ಮೌಲ್ಯ ಗಳ ಬಗ್ಗೆ , ಶ್ರೀಮತಿ ಪ್ರೇಮಲತಾ ಗಣೇಶ್ ಇವರು ಯೋಗದ ಪ್ರಯೋಜನ ಗಳ ಬಗ್ಗೆ , ಗೌರಿಪ್ರಸಾದ್ ಕ್ರಾಪ್ಟ್ ಕಲೆ ಹಾಗೂ ಕೊನೆ ದಿನ ಶ್ರೀಮತಿ ನಾಗವೇಣಿ ಎ ಕೋಟ್ಯಾನ್ ಇವರು ಮಕ್ಕಳ ಬೌದ್ಧಿಕ ವಿಕಸನ ಹಾಗೂ ಇತರ ಚಟುವಟಿಕೆ ಯನ್ನು ನಡೆಸಿ ಕೊಟ್ಟರು.
ವೇದಿಕೆಯಲ್ಲಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷ ಗಣೇಶ್ ಕೆ. ಸದಸ್ಯ ಹೇಮಂತ್ ಶೆಟ್ಟಿ , ಆಶಾ ಕಾರ್ಯಕರ್ತೆ ಶ್ರೀಮತಿ ಜಲಜಾಕ್ಷಿ, ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ಸೇವಂತಿ ಎ ಹಾಗೂ ಸಿಬ್ಬಂದಿಗಳು ಹಾಜರಿದ್ದರು
ಅರಿವು ಕೇಂದ್ರದ ಮೇಲ್ವಿಚಾರಕಿ ಶ್ರೀಮತಿ ವಸಂತಿ ಸ್ವಾಗತಿಸಿ, ಸಿಬ್ಬಂದಿ ಗಳಾದ ಆನಂದ ಕೋಟ್ಯಾನ್,ಶ್ರೀಮತಿ ಯಶೋಧ ಶ್ರೀಮತಿ ಸೌಮ್ಯ, ದಿಲೀಪ್. ವಿ ಆರ್ ಡಬ್ಲ್ಯೂ ಸುಲೋಚನಾ ವಿ ಗ್ರಂಥಾಲಯ ಸಲಹಾ ಸಮಿತಿಯ ಸದಸ್ಯರು ಗಳು ಸಹಕರಿಸಿದರು ಶ್ರೀಮತಿ ಸೌಮ್ಯ ಧನ್ಯವಾದವಿತ್ತರು.

Related posts

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿನ ಹಳೆ ವಿದ್ಯಾರ್ಥಿ ಸಂಘ ಪ್ರತಿ ವರ್ಷದಂತೆ ದೀಪಾವಳಿಯ ನರಕ ಚತುರ್ದಶಿಯಂದು ಆಯೋಜಿಸಿರುವ ವಾರ್ಷಿಕ ಕ್ರೀಡಾಕೂಟ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya

ಅನೀಶ್‌ ನಿರ್ದೇಶನದ ದಸ್ಕತ್‌ ತುಳು ಸಿನಿಮಾಕ್ಕೆ ಪ್ರಶಸ್ತಿಯ ಗೌರವ

Suddi Udaya

ನ.1 ರಿಂದ 3 ರ ವರೆಗೆ ಕಾಶಿಪಟ್ಣದಾರುನ್ನೂರ್ ಎಜುಕೇಶನ್ ಸೆಂಟರ್ ಇದರ ದಶಮಾನೋತ್ಸವ ಸಂಭ್ರಮ: ಧಾರ್ಮಿಕ ಪದವಿ ಪ್ರದಾನ ಸಮಾರಂಭ

Suddi Udaya

ನಾಲ್ಕೂರು ಅಂಗನವಾಡಿಯಲ್ಲಿ ಹುಟ್ಟುಹಬ್ಬ ಆಚರಿಸಿದ ಆಯಾನ್ಶ್ ಸುಧಾಮ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ವತಿಯಿಂದ, ಉಜಿರೆ ಎಸ್‌.ಡಿ.ಎಂ. ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಸಹಭಾಗಿತ್ವದಲ್ಲಿ ಉಚಿತ ಇಸಿಜಿ ತಪಾಸಣಾ ಶಿಬಿರ,194 ಮಂದಿಗೆ ತಪಾಸಣೆ

Suddi Udaya
error: Content is protected !!